AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಚಿನ್ನದ ಬೆಲೆ ಕೊಂಚ ಇಳಿಕೆ; ಬೆಳ್ಳಿ ದರ ಏಕಾಏಕಿ 400 ರೂ. ಕುಸಿತ

Silver Price Today: ಬೆಳ್ಳಿ ಬೆಲೆ 3 ದಿನಗಳ ಹಿಂದೆ 400 ರೂ. ಹೆಚ್ಚಳವಾಗಿತ್ತು. ಆದರೆ, ಇಂದು ಬೆಳ್ಳಿ ದರದಲ್ಲಿ 400 ರೂ. ಕುಸಿತವಾಗಿದೆ.

Gold Price Today: ಚಿನ್ನದ ಬೆಲೆ ಕೊಂಚ ಇಳಿಕೆ; ಬೆಳ್ಳಿ ದರ ಏಕಾಏಕಿ 400 ರೂ. ಕುಸಿತ
ಚಿನ್ನದ ಬೆಲೆImage Credit source: Live Mint
TV9 Web
| Edited By: |

Updated on: Aug 02, 2022 | 6:00 AM

Share

Gold Price on 2 August 2022 | ಬೆಂಗಳೂರು: ಭಾರತದಲ್ಲಿ 3 ದಿನಗಳಿಂದ ಚಿನ್ನದ ಬೆಲೆ (Gold Rate) ಯಥಾಸ್ಥಿತಿ ಕಾಯ್ದುಕೊಂಡಿತ್ತು. ಆದರೆ, ಇಂದು ಚಿನ್ನದ ದರ 110 ರೂ. ಇಳಿಕೆಯಾಗಿದೆ. ಬೆಳ್ಳಿಯ ಬೆಲೆ (Silver Price) ಇಂದು 400 ರೂ. ಕುಸಿತವಾಗಿದೆ. ನೀವು ಸಹ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಇಳಿಕೆಯಾಗಿದೆ. 3 ದಿನಗಳಿಂದ 22 ಕ್ಯಾರೆಟ್ ಚಿನ್ನದ ಬೆಲೆ 47,200 ರೂ. ಇದ್ದುದು 47,100 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,490 ರೂ. ಇದ್ದುದು 51,380 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,950 ರೂ. ಮುಂಬೈ- 47,100 ರೂ, ದೆಹಲಿ- 47,250 ರೂ, ಕೊಲ್ಕತ್ತಾ- 47,100 ರೂ, ಬೆಂಗಳೂರು- 47,150 ರೂ, ಹೈದರಾಬಾದ್- 47,100 ರೂ, ಕೇರಳ- 47,100 ರೂ, ಪುಣೆ- 47,130 ರೂ, ಮಂಗಳೂರು- 47,150 ರೂ, ಮೈಸೂರು- 47,150 ರೂ. ಇದೆ.

ಇದನ್ನೂ ಓದಿ: Gold Price Today: ಮತ್ತೆ 1,500 ರೂ. ಏರಿಕೆಯಾದ ಬೆಳ್ಳಿ ದರ; ಚಿನ್ನದ ಬೆಲೆ ಕೊಂಚ ಹೆಚ್ಚಳ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 52,300 ರೂ, ಮುಂಬೈ- 51,380 ರೂ, ದೆಹಲಿ- 51,550 ರೂ, ಕೊಲ್ಕತ್ತಾ- 51,380 ರೂ, ಬೆಂಗಳೂರು- 51,430 ರೂ, ಹೈದರಾಬಾದ್- 51,380 ರೂ, ಕೇರಳ- 51,380 ರೂ, ಪುಣೆ- 51,410 ರೂ, ಮಂಗಳೂರು- 51,430 ರೂ, ಮೈಸೂರು- 51,430 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆ 3 ದಿನಗಳ ಹಿಂದೆ 400 ರೂ. ಹೆಚ್ಚಳವಾಗಿತ್ತು. ಆದರೆ, ಇಂದು ಬೆಳ್ಳಿ ದರದಲ್ಲಿ 400 ರೂ. ಕುಸಿತವಾಗಿದೆ. 3 ದಿನಗಳ ಹಿಂದೆ 1 ಕೆಜಿ ಬೆಳ್ಳಿಯ ದರ 58,400 ರೂ. ಇದ್ದುದು ಇಂದು 58,000 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 63,300 ರೂ, ಮೈಸೂರು- 63,300 ರೂ., ಮಂಗಳೂರು- 63,300 ರೂ., ಮುಂಬೈ- 58,000 ರೂ, ಚೆನ್ನೈ- 63,300 ರೂ, ದೆಹಲಿ- 58,000 ರೂ, ಹೈದರಾಬಾದ್- 63,300 ರೂ, ಕೊಲ್ಕತ್ತಾ- 58,000 ರೂ. ಆಗಿದೆ.

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ