AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಚಿನ್ನ ಖರೀದಿಗೆ ಇದು ಒಳ್ಳೆ ಸಮಯ; ಬೆಳ್ಳಿ ದರವೂ ಬರೋಬ್ಬರಿ 2,000 ರೂ. ಕುಸಿತ

ಇಂದು ಬೆಳ್ಳಿ ಬೆಲೆ ಬರೋಬ್ಬರಿ 2,000 ರೂ. ಕುಸಿತವಾಗಿದೆ. ನಿನ್ನೆ 1 ಕೆಜಿ ಬೆಳ್ಳಿಯ ದರ 58,900 ರೂ. ಇದ್ದುದು ಇಂದು 56,900 ರೂ. ಆಗಿದೆ.

Gold Price Today: ಚಿನ್ನ ಖರೀದಿಗೆ ಇದು ಒಳ್ಳೆ ಸಮಯ; ಬೆಳ್ಳಿ ದರವೂ ಬರೋಬ್ಬರಿ 2,000 ರೂ. ಕುಸಿತ
ಚಿನ್ನದ ಬೆಲೆImage Credit source: Business Standard
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jul 07, 2022 | 5:51 AM

ಬೆಂಗಳೂರು: ಮೂರು ದಿನಗಳ ಬಳಿಕ ನಿನ್ನೆ ಏರಿಕೆಯಾಗಿದ್ದ ಚಿನ್ನದ ಬೆಲೆ ಇಂದು ಇಳಿಕೆಯಾಗಿದೆ. ಇಂದು ಒಂದೇ ದಿನದಲ್ಲಿ ಚಿನ್ನದ ಬೆಲೆ (Gold Rate) 540 ರೂ. ಕಡಿಮೆಯಾಗಿದೆ. ಬೆಳ್ಳಿಯ ಬೆಲೆ (Silver Price) ಕೂಡ ಇಂದು 2,000 ರೂ. ಇಳಿಕೆಯಾಗಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಇಳಿಕೆಯಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 48,100 ರೂ. ಇದ್ದುದು 47,600 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,470 ರೂ. ಇದ್ದುದು 51,930 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,400 ರೂ. ಮುಂಬೈ- 47,600 ರೂ, ದೆಹಲಿ- 47,600 ರೂ, ಕೊಲ್ಕತ್ತಾ- 47,600 ರೂ, ಬೆಂಗಳೂರು- 47,630 ರೂ, ಹೈದರಾಬಾದ್- 47,600 ರೂ, ಕೇರಳ- 47,600 ರೂ, ಪುಣೆ- 47,650 ರೂ, ಮಂಗಳೂರು- 47,630 ರೂ, ಮೈಸೂರು- 47,630 ರೂ. ಇದೆ.

ಇದನ್ನೂ ಓದಿ: Gold Price Today: ಒಂದೇ ದಿನದಲ್ಲಿ ದಾಖಲೆಯ ಕುಸಿತ ಕಂಡ ಚಿನ್ನದ ಬೆಲೆ; ಬೆಳ್ಳಿ ದರವೂ 600 ರೂ. ಇಳಿಕೆ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 51,710 ರೂ, ಮುಂಬೈ- 51,930 ರೂ, ದೆಹಲಿ- 51,930 ರೂ, ಕೊಲ್ಕತ್ತಾ- 51,930 ರೂ, ಬೆಂಗಳೂರು- 51,960 ರೂ, ಹೈದರಾಬಾದ್- 51,930 ರೂ, ಕೇರಳ- 51,930 ರೂ, ಪುಣೆ- 51,980 ರೂ, ಮಂಗಳೂರು- 51,960 ರೂ, ಮೈಸೂರು- 51,960 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆ ಕೂಡ ನಿನ್ನೆಯಿಂದ ಕುಸಿತವಾಗಿದೆ. ಇಂದು ಬೆಳ್ಳಿ ಬೆಲೆ ಬರೋಬ್ಬರಿ 2,000 ರೂ. ಕುಸಿತವಾಗಿದೆ. ನಿನ್ನೆ 1 ಕೆಜಿ ಬೆಳ್ಳಿಯ ದರ 58,900 ರೂ. ಇದ್ದುದು ಇಂದು 56,900 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 62,500 ರೂ, ಮೈಸೂರು- 62,500 ರೂ., ಮಂಗಳೂರು- 62,500 ರೂ., ಮುಂಬೈ- 56,900 ರೂ, ಚೆನ್ನೈ- 62,500 ರೂ, ದೆಹಲಿ- 56,900 ರೂ, ಹೈದರಾಬಾದ್- 62,500 ರೂ, ಕೊಲ್ಕತ್ತಾ- 56,900 ರೂ. ಆಗಿದೆ.

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ