Gold Price Today: ಚಿನ್ನದ ಬೆಲೆಯಲ್ಲಿ ಇಂದು ಭಾರೀ ಏರಿಕೆ; ಒಂದೇ ದಿನದಲ್ಲಿ ಬೆಳ್ಳಿ ದರ 4,400 ರೂ. ಹೆಚ್ಚಳ!

Silver Price Today: ಬೆಳ್ಳಿ ದರ ಇಂದು 4,400 ರೂ. ಏರಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿ ಬೆಲೆ 57,400 ರೂ. ಇದ್ದುದು ಇಂದು 61,800 ರೂ. ಆಗಿದೆ.

Gold Price Today: ಚಿನ್ನದ ಬೆಲೆಯಲ್ಲಿ ಇಂದು ಭಾರೀ ಏರಿಕೆ; ಒಂದೇ ದಿನದಲ್ಲಿ ಬೆಳ್ಳಿ ದರ 4,400 ರೂ. ಹೆಚ್ಚಳ!
ಚಿನ್ನದ ಬೆಲೆImage Credit source: Financial Express
Follow us
| Updated By: ಸುಷ್ಮಾ ಚಕ್ರೆ

Updated on: Oct 05, 2022 | 5:30 AM

Gold Price on 5th October 2022 | ಬೆಂಗಳೂರು: ಭಾರತದಲ್ಲಿ 2 ದಿನಗಳಿಂದ ಚಿನ್ನದ ಬೆಲೆ (Gold Rate) ಏರಿಕೆಯಾಗುತ್ತಲೇ ಇದೆ. ಇಂದು ಬಂಗಾರದ ಬೆಲೆ ಬರೋಬ್ಬರಿ 550 ರೂ. ಏರಿಕೆಯಾಗಿದೆ. ಬೆಳ್ಳಿ ಬೆಲೆ (Silver Price) ಕೂಡ ಒಂದೇ ದಿನದಲ್ಲಿ 4,400 ರೂ. ಹೆಚ್ಚಳವಾಗಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಭಾರೀ ಏರಿಕೆಯಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 46,850 ರೂ. ಇದ್ದುದು ಇಂದು 47,350 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,110 ರೂ. ಇದ್ದುದು 51,660 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,750 ರೂ. ಮುಂಬೈ- 47,350 ರೂ, ದೆಹಲಿ- 47,500 ರೂ, ಕೊಲ್ಕತ್ತಾ- 47,350 ರೂ, ಬೆಂಗಳೂರು- 47,400 ರೂ, ಹೈದರಾಬಾದ್- 47,350 ರೂ, ಕೇರಳ- 47,350 ರೂ, ಪುಣೆ- 47,380 ರೂ, ಮಂಗಳೂರು- 47,400 ರೂ, ಮೈಸೂರು- 47,400 ರೂ. ಆಗಿದೆ.

ಇದನ್ನೂ ಓದಿ: Gold Price Today: ಸತತ ಏರಿಕೆ ಕಂಡಿದ್ದ ಚಿನ್ನದ ಬೆಲೆ ಕುಸಿತ; ಬೆಳ್ಳಿ ದರವೂ ಕೊಂಚ ಇಳಿಕೆ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 52,100 ರೂ, ಮುಂಬೈ- 51,660 ರೂ, ದೆಹಲಿ- 51,820 ರೂ, ಕೊಲ್ಕತ್ತಾ- 51,660 ರೂ, ಬೆಂಗಳೂರು- 51,710 ರೂ, ಹೈದರಾಬಾದ್- 51,660 ರೂ, ಕೇರಳ- 51,660 ರೂ, ಪುಣೆ- 51,690 ರೂ, ಮಂಗಳೂರು- 51,710 ರೂ, ಮೈಸೂರು- 51,710 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ದರ ಇಂದು 4,400 ರೂ. ಏರಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿ ಬೆಲೆ 57,400 ರೂ. ಇದ್ದುದು ಇಂದು 61,800 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 66,700 ರೂ, ಮೈಸೂರು- 66,700 ರೂ., ಮಂಗಳೂರು- 66,700 ರೂ., ಮುಂಬೈ- 61,800 ರೂ, ಚೆನ್ನೈ- 66,700 ರೂ, ದೆಹಲಿ- 61,800 ರೂ, ಹೈದರಾಬಾದ್- 66,700 ರೂ, ಕೊಲ್ಕತ್ತಾ- 61,800 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ