AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: 2 ದಿನಗಳ ಬಳಿಕ ಚಿನ್ನದ ಬೆಲೆ ಕೊಂಚ ಏರಿಕೆ; ಬೆಳ್ಳಿ ದರ 200 ರೂ. ಹೆಚ್ಚಳ

ಬೆಳ್ಳಿ ಬೆಲೆ ಇಂದು 200 ರೂ. ಏರಿಕೆಯಾಗಿದೆ. 2 ದಿನಗಳಿಂದ 1 ಕೆಜಿ ಬೆಳ್ಳಿಯ ದರ 57,000 ರೂ. ಇದ್ದುದು ಇಂದು 57,200 ರೂ. ಆಗಿದೆ.

Gold Price Today: 2 ದಿನಗಳ ಬಳಿಕ ಚಿನ್ನದ ಬೆಲೆ ಕೊಂಚ ಏರಿಕೆ; ಬೆಳ್ಳಿ ದರ 200 ರೂ. ಹೆಚ್ಚಳ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 10, 2022 | 5:51 AM

Share

ಬೆಂಗಳೂರು: ಭಾರತದಲ್ಲಿ 2 ದಿನಗಳಿಂದ ಯಥಾಸ್ಥಿತಿಯಲ್ಲಿದ್ದ ಚಿನ್ನದ ಬೆಲೆ ಇಂದು ಕೊಂಚ ಏರಿಕೆಯಾಗಿದೆ. ಇಂದು ಚಿನ್ನದ ಬೆಲೆ (Gold Rate) 100 ರೂ. ಹೆಚ್ಚಳವಾಗಿದೆ. ಬೆಳ್ಳಿಯ ಬೆಲೆ (Silver Price) ಇಂದು 200 ರೂ. ಏರಿಕೆ ಕಂಡಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಏರಿಕೆಯಾಗಿದೆ. ನಿನ್ನೆ ಹಿಂದೆ 22 ಕ್ಯಾರೆಟ್ ಚಿನ್ನದ ಬೆಲೆ 46,850 ರೂ. ಇದ್ದುದು 46,950 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,110 ರೂ. ಇದ್ದುದು 51,210 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 46,890 ರೂ. ಮುಂಬೈ- 46,950 ರೂ, ದೆಹಲಿ- 46,950 ರೂ, ಕೊಲ್ಕತ್ತಾ- 46,950 ರೂ, ಬೆಂಗಳೂರು- 46,980 ರೂ, ಹೈದರಾಬಾದ್- 46,950 ರೂ, ಕೇರಳ- 46,950 ರೂ, ಪುಣೆ- 46,970 ರೂ, ಮಂಗಳೂರು- 46,980 ರೂ, ಮೈಸೂರು- 46,980 ರೂ. ಇದೆ.

ಇದನ್ನೂ ಓದಿ: Gold Price Today: ಬೆಂಗಳೂರು, ಚೆನ್ನೈ, ದೆಹಲಿ ಸೇರಿ ವಿವಿಧ ನಗರಗಳ ಇಂದಿನ ಚಿನ್ನ, ಬೆಳ್ಳಿ ಬೆಲೆ ಹೀಗಿದೆ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 51,150 ರೂ, ಮುಂಬೈ- 51,110 ರೂ, ದೆಹಲಿ- 51,110 ರೂ, ಕೊಲ್ಕತ್ತಾ- 51,210 ರೂ, ಬೆಂಗಳೂರು- 51,250 ರೂ, ಹೈದರಾಬಾದ್- 51,210 ರೂ, ಕೇರಳ- 51,210 ರೂ, ಪುಣೆ- 51,240 ರೂ, ಮಂಗಳೂರು- 51,250 ರೂ, ಮೈಸೂರು- 51,250 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆ ಇಂದು 200 ರೂ. ಏರಿಕೆಯಾಗಿದೆ. 2 ದಿನಗಳಿಂದ 1 ಕೆಜಿ ಬೆಳ್ಳಿಯ ದರ 57,000 ರೂ. ಇದ್ದುದು ಇಂದು 57,200 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 62,800 ರೂ, ಮೈಸೂರು- 62,800 ರೂ., ಮಂಗಳೂರು- 62,800 ರೂ., ಮುಂಬೈ- 57,200 ರೂ, ಚೆನ್ನೈ- 62,800 ರೂ, ದೆಹಲಿ- 57,200 ರೂ, ಹೈದರಾಬಾದ್- 62,800 ರೂ, ಕೊಲ್ಕತ್ತಾ- 57,200 ರೂ. ಆಗಿದೆ.

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ