Gold Price Today: ಭಾರತದಲ್ಲಿ ಚಿನ್ನದ ಬೆಲೆ ಕೊಂಚ ಏರಿಕೆ; ಬೆಳ್ಳಿ ದರ ಇಂದು 800 ರೂ. ಹೆಚ್ಚಳ

Silver Price Today: ಭಾರತದಲ್ಲಿ ಬೆಳ್ಳಿ ಬೆಲೆಯಲ್ಲಿ ಇಂದು 800 ರೂ. ಏರಿಕೆಯಾಗಿದೆ. ನಿನ್ನೆ 24 ಕ್ಯಾರೆಟ್ ಚಿನ್ನದ ಬೆಲೆ 52,820 ರೂ. ಇದ್ದುದು ಇಂದು 51,930 ರೂ. ಆಗಿದೆ.

Gold Price Today: ಭಾರತದಲ್ಲಿ ಚಿನ್ನದ ಬೆಲೆ ಕೊಂಚ ಏರಿಕೆ; ಬೆಳ್ಳಿ ದರ ಇಂದು 800 ರೂ. ಹೆಚ್ಚಳ
ಚಿನ್ನದ ಬೆಲೆ
Edited By:

Updated on: Jun 03, 2022 | 5:55 AM

ಬೆಂಗಳೂರು: ಭಾರತದಲ್ಲಿ ಚಿನ್ನದ ಬೆಲೆ (Gold Rate) ಇಂದು ಏರಿಕೆಯಾಗಿದೆ. ಪ್ರಮುಖ ನಗರಗಳಲ್ಲಿ ಚಿನ್ನದ ದರ ಇಂದು 100 ರೂ. ಏರಿಕೆ ಕಂಡಿದೆ. ಬೆಳ್ಳಿಯ ಬೆಲೆ (Silver Price) ಕೂಡ ಇಂದು 800 ರೂ. ಏರಿಕೆಯಾಗಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಏರಿಕೆಯಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 47,500 ರೂ. ಇದ್ದುದು 47,600 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,820 ರೂ. ಇದ್ದುದು 51,930 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,750 ರೂ. ಮುಂಬೈ- 47,600 ರೂ, ದೆಹಲಿ- 47,600 ರೂ, ಕೊಲ್ಕತ್ತಾ- 47,600 ರೂ, ಬೆಂಗಳೂರು- 47,600 ರೂ, ಹೈದರಾಬಾದ್- 47,600 ರೂ, ಕೇರಳ- 47,600 ರೂ, ಪುಣೆ- 47,700 ರೂ, ಮಂಗಳೂರು- 47,600 ರೂ, ಮೈಸೂರು- 47,600 ರೂ. ಇದೆ. (Source)

ಇದನ್ನೂ ಓದಿ: Gold Price Today: ಬೆಳ್ಳಿ ಬೆಲೆ ಕೊಂಚ ಏರಿಕೆ; ಬೆಂಗಳೂರು, ಚೆನ್ನೈ, ಮುಂಬೈನಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ?

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ:
ಚೆನ್ನೈ- 52,100 ರೂ, ಮುಂಬೈ- 51,930 ರೂ, ದೆಹಲಿ- 51,930 ರೂ, ಕೊಲ್ಕತ್ತಾ- 51,930 ರೂ, ಬೆಂಗಳೂರು- 51,930 ರೂ, ಹೈದರಾಬಾದ್- 51,930 ರೂ, ಕೇರಳ- 51,930 ರೂ, ಪುಣೆ- 52,030 ರೂ, ಮಂಗಳೂರು- 51,930 ರೂ, ಮೈಸೂರು- 51,930 ರೂ. ಆಗಿದೆ.

ಇಂದಿನ ಬೆಳ್ಳಿಯ ದರ:
ಬೆಳ್ಳಿ ಬೆಲೆಯಲ್ಲಿ ಇಂದು 800 ರೂ. ಏರಿಕೆಯಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿಯ ದರ 60,600 ರೂ. ಇದ್ದುದು ಇಂದು 61,400 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 67,000 ರೂ, ಮೈಸೂರು- 67,000 ರೂ., ಮಂಗಳೂರು- 67,000 ರೂ., ಮುಂಬೈ- 61,400 ರೂ, ಚೆನ್ನೈ- 67,000 ರೂ, ದೆಹಲಿ- 61,400 ರೂ, ಹೈದರಾಬಾದ್- 67,000 ರೂ, ಕೊಲ್ಕತ್ತಾ- 61,400 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ