AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಚಿನ್ನ, ಬೆಳ್ಳಿ ದರದಲ್ಲಿ ಮತ್ತೆ ಕೊಂಚ ಏರಿಕೆ; ಬೆಂಗಳೂರು ಹಾಗೂ ಪ್ರಮುಖ ನಗರಗಳ ಇಂದಿನ ದರ ತಿಳಿಯಿರಿ

Silver Price Today: ಭಾರತದ ಅನೇಕ ನಗರಗಳಲ್ಲಿ ನಿನ್ನೆಗಿಂತ ಇಂದು ಚಿನ್ನದ ಬೆಲೆ ಕೊಂಚ ಏರಿಕೆ ಕಂಡಿದೆ. ನಿನ್ನೆ ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 48,400 ರೂ. ಇದ್ದುದು ಇಂದು 48,410 ರೂ.ಗೆ ಏರಿಕೆಯಾಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,800 ರೂ. ಇದ್ದುದು 52,810 ರೂ. ಆಗಿದೆ.

Gold Price Today: ಚಿನ್ನ, ಬೆಳ್ಳಿ ದರದಲ್ಲಿ ಮತ್ತೆ ಕೊಂಚ ಏರಿಕೆ; ಬೆಂಗಳೂರು ಹಾಗೂ ಪ್ರಮುಖ ನಗರಗಳ ಇಂದಿನ ದರ ತಿಳಿಯಿರಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ganapathi bhat

Updated on:Mar 14, 2022 | 9:08 AM

ಬೆಂಗಳೂರು: ಕಳೆದ ಕೆಲವು ದಿನಗಳಲ್ಲಿ ಚಿನ್ನ, ಬೆಳ್ಳಿ ದರದಲ್ಲಿ ಬಹಳಷ್ಟು ಏರಿಳಿತ ಕಂಡುಬಂದಿದೆ. ಆಭರಣ ಖರೀದಿಸಲು ಆಸಕ್ತಿ ಇರುವವರಿಗೆ ಪ್ರತಿನಿತ್ಯವೂ ಚಿನ್ನ, ಬೆಳ್ಳಿ ದರ ಗಮನಿಸಿ ಒಡವೆ ಖರೀದಿ ಮಾಡುವಂತಾಗಿದೆ. ಅದರಲ್ಲೂ ಇನ್ನು ಮೇ ಅಂತ್ಯದವರೆಗೆ ಇನ್ನು ಶುಭ ಸಮಾರಂಭಗಳದ್ದೇ ಕಾರುಬಾರು. ಹೀಗಾಗಿ, ಚಿನ್ನ ಖರೀದಿಸಲು ಯೋಚಿಸಿದ್ದರೆ ಚಿನ್ನ, ಬೆಳ್ಳಿ ಬೆಲೆ ತಿಳಿಯುವುದು ಮುಖ್ಯ. ಇಂದು (ಮಾರ್ಚ್ 14, ಸೋಮವಾರ) 10 ಗ್ರಾಂ ಚಿನ್ನಕ್ಕೆ ಕೇವಲ 10 ರೂ. ಏರಿಕೆ ಕಂಡಿದೆ. ಬೆಳ್ಳಿಯ ಬೆಲೆ ಕೂಡ (Silver Price) ಏರಿಕೆ ಆಗಿದ್ದು, ಕೆಜಿ ಬೆಳ್ಳಿ ಬೆಲೆ ನಿನ್ನೆಗಿಂತಲೂ ಇಂದು 4,400 ರೂ. ಏರಿಕೆ ಕಂಡಿದೆ. ಹೈದರಾಬಾದ್, ಕೊಲ್ಕತ್ತಾ, ಬೆಂಗಳೂರು, ಚೆನ್ನೈ, ಮುಂಬೈ, ದೆಹಲಿ ಸೇರಿ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಚಿನ್ನದ ಉತ್ಪಾದನೆಯಲ್ಲಿ ಪ್ರಮುಖ ರಾಷ್ಟ್ರವಾಗಿರುವ ರಷ್ಯಾ ಮೇಲಿನ ನಿರ್ಬಂಧಗಳಿಂದಾಗಿ ಆಮದು ಕಡಿಮೆಯಾಗುವ ಭೀತಿಯೂ ಚಿನ್ನದ ಬೆಲೆಯ ಹೆಚ್ಚಳಕ್ಕೆ ಕಾರಣವಾಗಿದೆ. ಭಾರತದಲ್ಲಿ ಚಿನ್ನದ ಬೆಲೆ ಹೆಚ್ಚಳಕ್ಕೆ ರಷ್ಯಾ- ಉಕ್ರೇನ್ ಯುದ್ಧ ಕೂಡ ಕಾರಣ ಎನ್ನಲಾಗಿದೆ.

ಭಾರತದ ಅನೇಕ ನಗರಗಳಲ್ಲಿ ನಿನ್ನೆಗಿಂತ ಇಂದು ಚಿನ್ನದ ಬೆಲೆ ಕೊಂಚ ಏರಿಕೆ ಕಂಡಿದೆ. ನಿನ್ನೆ ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 48,400 ರೂ. ಇದ್ದುದು ಇಂದು 48,410 ರೂ.ಗೆ ಏರಿಕೆಯಾಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,800 ರೂ. ಇದ್ದುದು 52,810 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 48,950 ರೂ. ಮುಂಬೈ- 48,410 ರೂ, ದೆಹಲಿ- 48,410 ರೂ, ಕೊಲ್ಕತ್ತಾ- 48,410 ರೂ, ಬೆಂಗಳೂರು- 48,410 ರೂ, ಹೈದರಾಬಾದ್- 48,410 ರೂ, ಕೇರಳ- 48,410 ರೂ, ಪುಣೆ- 48,460 ರೂ, ಮಂಗಳೂರು- 48,410 ರೂ, ಮೈಸೂರು- 48,410 ರೂ. ಇದೆ.

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 53,400 ರೂ, ಮುಂಬೈ- 52,810 ರೂ, ದೆಹಲಿ- 52,810 ರೂ, ಕೊಲ್ಕತ್ತಾ- 52,810 ರೂ, ಬೆಂಗಳೂರು- 52,810 ರೂ, ಹೈದರಾಬಾದ್- 52,810 ರೂ, ಕೇರಳ- 52,810 ರೂ, ಪುಣೆ- 52,860 ರೂ, ಮಂಗಳೂರು- 52,810 ರೂ, ಮೈಸೂರು- 52,810 ರೂ. ಇದೆ.

ಇಂದಿನ ಬೆಳ್ಳಿಯ ದರ: ಭಾರತದಲ್ಲಿ 1 ಕೆಜಿ ಬೆಳ್ಳಿ ದರ 70,300 ರೂ. ಇದ್ದುದು 74,700 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 74,700 ರೂ, ಮೈಸೂರು- 74,100 ರೂ., ಮಂಗಳೂರು- 74,700 ರೂ., ಮುಂಬೈ- 74,700 ರೂ, ಚೆನ್ನೈ- 74,700 ರೂ, ದೆಹಲಿ- 70,300 ರೂ, ಹೈದರಾಬಾದ್- 74,700 ರೂ, ಕೊಲ್ಕತ್ತಾ- 70,300 ರೂ. ಇದೆ.

ಇದನ್ನೂ ಓದಿ: Gold- Silver Rate: ಚಿನ್ನ, ಬೆಳ್ಳಿಯ ದರ ದೇಶದ ಪ್ರಮುಖ ನಗರಗಳಲ್ಲಿ ಮಾರ್ಚ್ 10ನೇ ತಾರೀಕಿನಂದು ಹೀಗಿದೆ

Gold- Silver Rate: ದೇಶದ ಪ್ರಮುಖ ನಗರಗಳಲ್ಲಿ ಮಾರ್ಚ್ 9ನೇ ತಾರೀಕಿನ ಚಿನ್ನ, ಬೆಳ್ಳಿ ದರ ಇಲ್ಲಿದೆ

Published On - 9:08 am, Mon, 14 March 22

ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ