AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ದೀಪಾವಳಿಗೆ ಚಿನ್ನ ಖರೀದಿಸುವ ಪ್ಲ್ಯಾನ್ ಇದೆಯೇ? ಚಿನ್ನ, ಬೆಳ್ಳಿ ದರ ವಿವರ ಇಲ್ಲಿದೆ ಗಮನಿಸಿ

Gold Rate Today: ನೀವು ಚಿನ್ನಾಭರಣ ಖರೀದಿಸಬೇಕು ಅಂದುಕೊಂಡಿದ್ದರೆ ಇಂದು ದರ ಎಷ್ಟಾಗಿದೆ? ದೈನಂದಿನ ದರ ಬದಲಾವಣೆಯಲ್ಲಿ ಎಷ್ಟು ಏರಿಳಿವಾಗಿದೆ ಎಂಬುದನ್ನು ತಿಳಿಯಿರಿ. ಆ ನಂತರ ಆಭರಣ ಖರೀದಿಸುವ ಕುರಿತಾಗಿ ಯೋಚಿಸಬಹುದು.

Gold Price Today: ದೀಪಾವಳಿಗೆ ಚಿನ್ನ ಖರೀದಿಸುವ ಪ್ಲ್ಯಾನ್ ಇದೆಯೇ? ಚಿನ್ನ, ಬೆಳ್ಳಿ ದರ ವಿವರ ಇಲ್ಲಿದೆ ಗಮನಿಸಿ
ಚಿನ್ನಾಭರಣ
TV9 Web
| Edited By: |

Updated on:Nov 03, 2021 | 7:36 AM

Share

Gold and Silver Price Today | ಬೆಂಗಳೂರು: ಇಂದು ಪ್ರಮುಖ ನಗರಗಳಲ್ಲಿ ಚಿನ್ನದ ದರ (Gold price) ಕೊಂಚ ಏರಿಕೆ ಆಗಿದೆ. ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ಚಿನ್ನದ ದರ ಸ್ಥಿರವಾಗಿತ್ತು. ಆ ಬಳಿಕ ಇಂದು ( ನವೆಂಬರ್ 3, ಬುಧವಾರ) ಚಿನ್ನದ ದರದಲ್ಲಿ ಏರಿಕೆ ಕಂಡು ಬಂದಿದೆ. ದೀಪಾವಳಿ ಹಬ್ಬಕ್ಕೆ ಚಿನ್ನ, ಬೆಳ್ಳಿ (Silver Price) ಖರೀದಿಸಬೇಕು ಅಂದುಕೊಂಡಿದ್ದರೆ ಎಷ್ಟಿದೆ ಇಂದಿನ ರೇಟ್ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ. ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,800 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿ ಏರಿಕೆ ಆಗಿದೆ.

ಹಬ್ಬ ಅಂದರೆ ಶುಭ ಸಂದರ್ಭ. ಶುಭ ದಿನದಂದು ಚಿನ್ನ ಕೊಳ್ಳುವುದು ಒಳ್ಳೆಯದು ಜೊತೆಗೆ ಸಂತೋಷವನ್ನು ತಂದುಕೊಡುತ್ತದೆ. ಅಷ್ಟೊಂದು ದೊಡ್ಡ ಮೌಲ್ಯದ ಆಭರಣ ಖರೀಸುವಾಗ ಒಳ್ಳೆಯ ದಿನದಂದು ಚಿನ್ನ, ಬೆಳ್ಳಿಯ ಆಭರಣ ಕೊಳ್ಳುವುದು ಉತ್ತಮ. ನೀವು ಚಿನ್ನಾಭರಣ ಖರೀದಿಸಬೇಕು ಅಂದುಕೊಂಡಿದ್ದರೆ ಇಂದು ದರ ಎಷ್ಟಾಗಿದೆ? ದೈನಂದಿನ ದರ ಬದಲಾವಣೆಯಲ್ಲಿ ಎಷ್ಟು ಏರಿಳಿವಾಗಿದೆ ಎಂಬುದನ್ನು ತಿಳಿಯಿರಿ. ಆ ನಂತರ ಆಭರಣ ಖರೀದಿಸುವ ಕುರಿತಾಗಿ ಯೋಚಿಸಬಹುದು.

ಬೆಂಗಳೂರಿನಲ್ಲಿ ಚಿನ್ನದ ದರ (Bangalore Gold price) ಬೆಂಗಳೂರಿನಲ್ಲಿ 22 ಕ್ಯಾರಟ್ 100 ಗ್ರಾಂ ಚಿನ್ನಕ್ಕೆ 4,48,000 ರೂಪಾಯಿ ನಿಗದಿಯಾಗಿದೆ. ಅಂದರೆ ದೈನಂದಿನ ದರ ಬದಲಾವಣೆಯಲ್ಲಿ 1,000 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. ಅದೇ ರೀತಿ, 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,870 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,88,700 ರೂಪಾಯಿ ದಾಖಲಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,000 ರೂಪಾಯಿ ಏರಿಕೆ ಆಗಿದೆ. ಇನ್ನು ಬೆಳ್ಳಿ ದರವೂ ಕೊಂಚ ಏರಿಕೆ ಆಗಿದ್ದು, 300 ರೂಪಾಯಿ ಏರಿಕೆ ಬಳಿಕ ಕೆಜಿ ಬೆಳ್ಳಿಗೆ 64,700 ರೂಪಾಯಿ ನಿಗದಿಯಾಗಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price) ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,080 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,50,800 ರೂಪಾಯಿ ನಿಗದಿಯಾಗಿದೆ. ಸುಮಾರು 700 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,180 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,91,800 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 700 ರೂಪಾಯಿ ಏರಿಕೆ ಆಗಿದೆ. ಬೆಳ್ಳಿ ಬೆಲೆಯಲ್ಲಿ 200 ರೂಪಾಯಿ ಏರಿಕೆ ಬಳಿಕ ಕೆಜಿ ಬೆಳ್ಳಿ ಬೆಲೆ 68,900 ರೂಪಾಯಿ ನಿಗದಿಯಾಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ದರ (Mumbai Gold Price) ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,850 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,68,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,100 ರೂಪಾಯಿ ಏರಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,850 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,78,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,100 ರೂಪಾಯಿ ಏರಿಕೆ ಆಗಿದೆ. ಇನ್ನು, ಕೆಜಿ ಬೆಳ್ಳಿ ಬೆಲೆ 64,700 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 300 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ.

ಇದನ್ನೂ ಓದಿ:

Gold Price Today: ಇಂದು ಏರಿಕೆಯಾದ ಚಿನ್ನದ ದರ; ಕೆಲವೆಡೆ ಬೆಳ್ಳಿ ಬೆಲೆ ಇಳಿಕೆ

Gold Price Today: ಗ್ರಾಹಕರೇ ಗಮನಿಸಿ; ಇಂದು ಚಿನ್ನದ ದರದಲ್ಲಿ ಇಳಿಕೆ, ಬೆಳ್ಳಿ ಬೆಲೆ ಕೆಲವೆಡೆ ಏರಿಕೆ

Published On - 7:24 am, Wed, 3 November 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ