AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold and Silver Price: ಚಿನ್ನ ಇಳಿಕೆ, ಬೆಳ್ಳಿ ಬೆಲೆ ಏರಿಕೆ; ಪ್ರಮುಖ ನಗರಗಳಲ್ಲಿನ ಆಭರಣ ದರ ಪರಿಶೀಲಿಸಿ

Gold Rate Today: ಇಂದು (ಫೆಬ್ರವರಿ 18, ಶುಕ್ರವಾರ) ಚಿನ್ನದ ದರ ಇಳಿಕೆಯಾಗಿದೆ. ಬೆಳ್ಳಿ ದರ ಏರಿಕೆಯತ್ತ ಸಾಗಿದೆ. ಇಂದು ಪ್ರಮುಖ ನಗರಗಳ ಮಾರುಕಟ್ಟೆಯಲ್ಲಿ ಆಭರಣದ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ.

Gold and Silver Price: ಚಿನ್ನ ಇಳಿಕೆ, ಬೆಳ್ಳಿ ಬೆಲೆ ಏರಿಕೆ; ಪ್ರಮುಖ ನಗರಗಳಲ್ಲಿನ ಆಭರಣ ದರ ಪರಿಶೀಲಿಸಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Feb 18, 2022 | 7:39 AM

Share

Gold and Silver Price Today| ಬೆಂಗಳೂರು: ಮದುವೆ ಅಥವಾ ಇನ್ನಿತರ ಸಮಾರಂಭಗಳು ಎದುರಿಗಿರುವಾಗ ಚಿನ್ನ ಖರೀದಿಸುವುದು ಒಂದು ರೀತಿಯ ವಾಡಿಕೆಯಾಗಿ ಪರಿಣಮಿಸಿದೆ. ಸಮಾರಂಭಗಳ ನೆಪದಲ್ಲಿ ಒಂದಷ್ಟು ಚಿನ್ನದ ಒಡವೆಗಳನ್ನು ಕೊಂಡಕೊಂಡರೆ ಮತ್ತಷ್ಟು ಬೆಳ್ಳಿ ಒಡವೆಗಳನ್ನು ಖರೀದಿಸುವುದು ಇದೆ. ಚಿನ್ನ, ಬೆಳ್ಳಿ ಎಂದರೆ ಎಲ್ಲರಿಗೂ ಪ್ರೀತಿ ಅದರಲ್ಲೂ ಮಹಿಳೆಯರಿಗೆ(Women) ಆಭರಣದ ವಿಚಾರಕ್ಕೆ ಬಂದಾಗ ಕೊಂಚ ಜಾಸ್ತಿಯೇ ವ್ಯಾಮೋಹ ಇರುತ್ತದೆ. ಹಾಗಿರುವಾಗ ಚಿನ್ನದ ಬೆಲೆ ಇಳಿಕೆಯತ್ತ ಸಾಗಿರಬೇಕು ಎಂಬ ಆಸೆಯೂ ತಪ್ಪಲ್ಲ. ಆದರೆ ದೈನಂದಿನ ದರ ಬದಲಾವಣೆಯಲ್ಲಿ ಚಿನ್ನಾಭರಣ ಬೆಲೆ ಏರಿಳಿತ ಕಾಣುತ್ತಿರುವುದು ಸಹಜ.  ಇಂದು (ಫೆಬ್ರವರಿ 18, ಶುಕ್ರವಾರ) ಚಿನ್ನದ ದರ (Gold Price) ಇಳಿಕೆಯಾಗಿದೆ. ಬೆಳ್ಳಿ ದರ (Silver Price) ಏರಿಕೆಯತ್ತ ಸಾಗಿದೆ. ಇಂದು ಪ್ರಮುಖ ನಗರಗಳ ಮಾರುಕಟ್ಟೆಯಲ್ಲಿ ಆಭರಣದ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price)

ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,800 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,58,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 4,00 ರೂಪಾಯಿ ಇಳಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 59,970 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,99,700 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 4,300 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಬೆಳ್ಳಿ ದರದಲ್ಲಿ ಏರಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 68,000 ರೂಪಾಯಿ ದಾಖಲಾಗಿದೆ. ಸುಮಾರು 200 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price)

ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,100 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,71,000 ರೂಪಾಯಿ ನಿಗದಿಯಾಗಿದೆ. ಸುಮಾರು 4,500 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 51,380 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,13,800 ರೂಪಾಯಿ ನಿಗದಿಯಾಗಿದೆ. ಸುಮಾರು 5,300 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಚೆನ್ನೈನಲ್ಲಿ ಬೆಳ್ಳಿ ಬೆಲೆಯಲ್ಲಿ ಕೊಂಚ ಏರಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 68,000 ರೂಪಾಯಿ ನಿಗದಿಯಾಗಿದೆ. ಸುಮಾರು 200 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ದರ (Hyderabad Gold Price)

ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,800 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,58,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 4,000 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,970 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,99,700 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 4,300 ರೂಪಾಯಿ ಇಳಿಕೆ ಆಗಿದೆ. ಅದೇ ರೀತಿ ಬೆಳ್ಳಿ ದರದಲ್ಲಿ ಇಂದು ಕೊಂಚ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 68,000 ರೂಪಾಯಿ ನಿಗದಿಯಾಗಿದೆ. ಸುಮಾರು 200 ರೂಪಾಯಿಯಷ್ಟು ಏರಿಕೆ ಆಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ದರ (Mumbai Gold price)

ಮುಂಬೈನಲ್ಲಿ ಇಂದು 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,800 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,58,000 ರೂಪಾಯಿ ನಿಗದಿಯಾಗಿದೆ. ಸುಮಾರು 4.000 ರೂಪಾಯಿಯಷ್ಟು ಇಳಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,970 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,99,700 ರೂಪಾಯಿ ನಿಗದಿಯಾಗಿದೆ. ಸುಮಾರು 4,300 ರೂಪಾಯಿಯಷ್ಟು ಇಳಿಕೆ ಆಗಿದೆ. ಬೆಳ್ಳಿ ಬೆಲೆಯಲ್ಲಿ ಇಂದು ಕೊಂಚ ಏರಿಕೆ ಕಂಡಿದ್ದು, ಕೆಜಿ ಬೆಳ್ಳಿಗೆ 63,400 ರೂಪಾಯಿ ನಿಗದಿಯಾಗಿದೆ. ಸುಮಾರು 400 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ.

ಇದನ್ನೂ ಓದಿ: Gold and Silver Rate: ಬೆಂಗಳೂರು, ಮೈಸೂರು ಸೇರಿ ಪ್ರಮುಖ ನಗರಗಳಲ್ಲಿ ಫೆಬ್ರವರಿ 17ರ ಚಿನ್ನ, ಬೆಳ್ಳಿ ದರ ಹೀಗಿದೆ

Gold and Silver Rate: ಬೆಂಗಳೂರು ಸೇರಿ ಭಾರತದ ಪ್ರಮುಖ ನಗರಗಳಲ್ಲಿ ಫೆಬ್ರವರಿ 16ರ ಚಿನ್ನ, ಬೆಳ್ಳಿ ದರ ಇಂತಿದೆ

Published On - 7:28 am, Fri, 18 February 22

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ