AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold and Silver Price: ಚಿನ್ನ ಇಳಿಕೆ, ಬೆಳ್ಳಿ ಬೆಲೆ ಏರಿಕೆ; ನಿಮ್ಮೂರಿನ ದರ ವಿವರ ಇಲ್ಲಿದೆ ಚೆಕ್​ ಮಾಡಿ

Gold Rate Today: ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,000 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,60,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 3,000 ರೂಪಾಯಿ ಇಳಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,190 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,01,900 ರೂಪಾಯಿ ನಿಗದಿಯಾಗಿದೆ.

Gold and Silver Price: ಚಿನ್ನ ಇಳಿಕೆ, ಬೆಳ್ಳಿ ಬೆಲೆ ಏರಿಕೆ; ನಿಮ್ಮೂರಿನ ದರ ವಿವರ ಇಲ್ಲಿದೆ ಚೆಕ್​ ಮಾಡಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Feb 20, 2022 | 7:47 AM

Share

Gold and Silver Price Today| ಬೆಂಗಳೂರು: ಚಿನ್ನ, ಬೆಳ್ಳಿ ಕೊಳ್ಳುವುದೆಂದರೆ ಎಲ್ಲರಿಗೂ ಆಸಕ್ತಿಯ ವಿಷಯ. ಅದರಲ್ಲೂ ಮಹಿಳೆಯರಿಗೆ ಹೊಸ ಹೊಸ ಶೈಲಿಯ ಆಭರಣಗಳನ್ನು ಖರೀದಿಸಬೇಕು ಎಂಬ ಬಯಕೆ ಸದಾ ಇರುತ್ತದೆ. ಇದಕ್ಕಾಗಿಯೇ ತಾವು ವೃತ್ತಿ ಜೀವನಕ್ಕೆ ಕಾಲಿಟ್ಟನಂತರ ಒಡವೆ ಮಾಡಿಸಲು ಒಂದಷ್ಟು ಹಣ ಕೂಡಿಡುತ್ತಾರೆ. ಕೇವಲ ಆಭರಣದ ದೃಷ್ಟಿಯಿಂದಲ್ಲದೇ ಹೂಡಿಕೆಯ ರೂಪದಲ್ಲಿಯೂ ಚಿನ್ನ ಉತ್ತಮ ಆಯ್ಕೆ ಎಂದು ತಜ್ಞರು ಹೇಳುತ್ತಾರೆ. ಇದಲ್ಲದೇ ಬಹಳಷ್ಟು ಜನರಿಗೆ ಆಪತ್ಕಾಲದಲ್ಲಿ ಸಕಾಲಕ್ಕೆ ಆಪತ್ಬಾಂಧವನಾಗಿ ಒದಗುವುದು ಕೂಡಿಟ್ಟ ಆಭರಣಗಳು. ಆದರೆ ಆಭರಣಗಳ ಖರೀದಿಗೆ ಸರಿಯಾದ ಸಮಯ ಯಾವುದು ಎಂಬ ಬಗ್ಗೆ ಮಾತ್ರ ಗೊಂದಲ ಇರುತ್ತದೆ. ಹೀಗಾಗಿ ಚಿನ್ನ, ಬೆಳ್ಳಿ ಖರೀದಿಸುವ ಮುನ್ನ ದರ ನಿಗದಿಯ ಬಗ್ಗೆ ಒಮ್ಮೆ ಪರಿಶೀಲಿಸಿ. ಪ್ರತಿನಿತ್ಯ ಚಿನ್ನ (Gold price), ಬೆಳ್ಳಿ ಬೆಲೆ (Silver Price) ಎಷ್ಟಿದೆ? ಎಂಬ ಕುರಿತಾಗಿ ಕುತೂಹಲ ಇರುತ್ತದೆ. ಹೀಗಿರುವಾಗ ಇಂದು (ಫೆಬ್ರವರಿ 20, ಭಾನುವಾರ) ಚಿನ್ನ ದರ ದೇಶದ ನಗರಗಳಲ್ಲಿ ಇಳಿಕೆಯಾಗಿದ್ದು, ಬೆಳ್ಳಿ ಬೆಲೆ ಏರಿಕೆಯಾಗಿದೆ. ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price)

ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,000 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,60,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 3,000 ರೂಪಾಯಿ ಇಳಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,190 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,01,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 3,200 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಬೆಳ್ಳಿ ದರದಲ್ಲಿ ಏರಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 70,000 ರೂಪಾಯಿ ದಾಖಲಾಗಿದೆ. ಸುಮಾರು 1,400 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price)

ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,330 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,73,300 ರೂಪಾಯಿ ನಿಗದಿಯಾಗಿದೆ. ಸುಮಾರು 400 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 51,630 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,16,300 ರೂಪಾಯಿ ನಿಗದಿಯಾಗಿದೆ. ಸುಮಾರು 400 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. ಚೆನ್ನೈನಲ್ಲಿ ಬೆಳ್ಳಿ ಬೆಲೆ ಸ್ಥಿರವಾಗಿದೆ. ಕೆಜಿ ಬೆಳ್ಳಿಗೆ 68,600 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ದರ (Hyderabad Gold Price)

ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,000 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,60,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 3,000 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,190 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,01,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 3,200 ರೂಪಾಯಿ ಇಳಿಕೆ ಆಗಿದೆ. ಅದೇ ರೀತಿ ಬೆಳ್ಳಿ ದರದಲ್ಲಿ ಇಂದು ಕೊಂಚ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 70,000 ರೂಪಾಯಿ ನಿಗದಿಯಾಗಿದೆ. ಸುಮಾರು 1,400 ರೂಪಾಯಿಯಷ್ಟು ಏರಿಕೆ ಆಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ದರ (Mumbai Gold price)

ಮುಂಬೈನಲ್ಲಿ ಇಂದು 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,000 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,60,000 ರೂಪಾಯಿ ನಿಗದಿಯಾಗಿದೆ. ಸುಮಾರು 3,000 ರೂಪಾಯಿಯಷ್ಟು ಇಳಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,190 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,01,900 ರೂಪಾಯಿ ನಿಗದಿಯಾಗಿದೆ. ಸುಮಾರು 3,200 ರೂಪಾಯಿಯಷ್ಟು ಇಳಿಕೆ ಆಗಿದೆ. ಬೆಳ್ಳಿ ಬೆಲೆಯಲ್ಲಿ ಇಂದು ಕೊಂಚ ಏರಿಕೆ ಕಂಡಿದ್ದು, ಕೆಜಿ ಬೆಳ್ಳಿಗೆ 64,000 ರೂಪಾಯಿ ನಿಗದಿಯಾಗಿದೆ. ಸುಮಾರು 200 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ.

ಇದನ್ನೂ ಓದಿ: Gold and Silver Price: ಬೆಂಗಳೂರಿನಲ್ಲಿ ಚಿನ್ನ ದರ ಸ್ಥಿರ, ಬೆಳ್ಳಿ ಬೆಲೆ ಬಾರಿ ಇಳಿಕೆ

Gold and Silver Price: ಚಿನ್ನ ಇಳಿಕೆ, ಬೆಳ್ಳಿ ಬೆಲೆ ಏರಿಕೆ; ಪ್ರಮುಖ ನಗರಗಳಲ್ಲಿನ ಆಭರಣ ದರ ಪರಿಶೀಲಿಸಿ

Published On - 7:37 am, Sun, 20 February 22

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?