AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate: ಚಿನ್ನ, ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ; ಆಭರಣ ಖರೀದಿಸುವ ಬಯಕೆ ಇದ್ದರೆ ದರ ವಿವರ ಪರಿಶೀಲಿಸಿ

Gold Silver Price Today: ಇಂದು (ಜನವರಿ 11, ಮಂಗಳವಾರ) ಚಿನ್ನದ ದರ ಇಳಿಕೆಯಾಗಿದ್ದು, ಬೆಳ್ಳಿ ಬೆಲೆ ಕೂಡ ಇಳಿಕೆಯಾಗಿದೆ. ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ.

Gold Rate: ಚಿನ್ನ, ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ; ಆಭರಣ ಖರೀದಿಸುವ ಬಯಕೆ ಇದ್ದರೆ ದರ ವಿವರ ಪರಿಶೀಲಿಸಿ
ಸಂಗ್ರಹ ಚಿತ್ರ
Follow us
TV9 Web
| Updated By: preethi shettigar

Updated on:Jan 11, 2022 | 7:42 AM

ಬೆಂಗಳೂರು: ಚಿನ್ನ, ಬೆಳ್ಳಿ ಕೊಳ್ಳುವುದೆಂದರೆ ಎಲ್ಲರಿಗೂ ಆಸಕ್ತಿಯ ವಿಷಯ. ಅದರಲ್ಲೂ ಮಹಿಳೆಯರಿಗೆ ಹೊಸ ಹೊಸ ಶೈಲಿಯ ಆಭರಣಗಳನ್ನು ಖರೀದಿಸಬೇಕು ಎಂಬ ಬಯಕೆ ಸದಾ ಇರುತ್ತದೆ. ಇದಕ್ಕಾಗಿಯೇ ತಾವು ವೃತ್ತಿ ಜೀವನಕ್ಕೆ ಕಾಲಿಟ್ಟನಂತರ ಒಡವೆ ಮಾಡಿಸಲು ಒಂದಷ್ಟು ಹಣ ಕೂಡಿಡುತ್ತಾರೆ. ಕೇವಲ ಆಭರಣದ ದೃಷ್ಟಿಯಿಂದಲ್ಲದೇ ಹೂಡಿಕೆಯ ರೂಪದಲ್ಲಿಯೂ ಚಿನ್ನ ಉತ್ತಮ ಆಯ್ಕೆ ಎಂದು ತಜ್ಞರು ಹೇಳುತ್ತಾರೆ. ಇದಲ್ಲದೇ ಬಹಳಷ್ಟು ಜನರಿಗೆ ಆಪತ್ಕಾಲದಲ್ಲಿ ಸಕಾಲಕ್ಕೆ ಆಪತ್ಬಾಂಧವನಾಗಿ ಒದಗುವುದು ಕೂಡಿಟ್ಟ ಆಭರಣಗಳು. ಆದರೆ ಆಭರಣಗಳ ಖರೀದಿಗೆ ಸರಿಯಾದ ಸಮಯ ಯಾವುದು ಎಂಬ ಬಗ್ಗೆ ಮಾತ್ರ ಗೊಂದಲ ಇರುತ್ತದೆ. ಹೀಗಾಗಿ ಚಿನ್ನ, ಬೆಳ್ಳಿ ಖರೀದಿಸುವ ಮುನ್ನ ದರ ನಿಗದಿಯ ಬಗ್ಗೆ ಒಮ್ಮೆ ಪರಿಶೀಲಿಸಿ. ಪ್ರತಿನಿತ್ಯ ಚಿನ್ನ (Gold price), ಬೆಳ್ಳಿ ಬೆಲೆ (Silver Price) ಎಷ್ಟಿದೆ? ಎಂಬ ಕುರಿತಾಗಿ ಕುತೂಹಲ ಇರುತ್ತದೆ. ಹೀಗಿರುವಾಗ ಇಂದು (ಜನವರಿ 11, ಮಂಗಳವಾರ) ಚಿನ್ನದ ದರ ಇಳಿಕೆಯಾಗಿದ್ದು, ಬೆಳ್ಳಿ ಬೆಲೆ ಕೂಡ ಇಳಿಕೆಯಾಗಿದೆ. ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price) ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,500 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,45,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 1,100 ರೂಪಾಯಿ ಇಳಿಕೆಯಾಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,550 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,85,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ1,100 ರೂಪಾಯಿ ಇಳಿಕೆಯಾಗಿದೆ. ಬೆಳ್ಳಿ ಬೆಲೆ ಇಳಿಕೆಯಾಗಿದ್ದು, ಕೆಜಿ ಬೆಳ್ಳಿಗೆ 60,400 ರೂಪಾಯಿ ನಿಗದಿಯಾಗಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price) ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,720 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,47,200 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2,100 ರೂಪಾಯಿ ಇಳಿಕೆಯಾಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,790 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,87,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2,200 ರೂಪಾಯಿ ಇಳಿಕೆಯಾಗಿದೆ. ಬೆಳ್ಳಿ ಬೆಲೆ ಇಳಿಕೆಯಾಗಿದ್ದು, ಕೆಜಿ ಬೆಳ್ಳಿಗೆ 64,300 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ಬೆಲೆ (Hyderabad Gold Price) ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,500 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,45,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 1,100 ರೂಪಾಯಿ ಇಳಿಕೆಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,550 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,85,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 1,100 ರೂಪಾಯಿ ಇಳಿಕೆಯಾಗಿದೆ. ಬೆಳ್ಳಿ ಬೆಲೆ ಇಳಿಯಾಗಿದ್ದು, ಕೆಜಿ ಬೆಳ್ಳಿಗೆ 64,300 ರೂಪಾಯಿ ನಿಗದಿಯಾಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ಬೆಲೆ (Mumbai Gold Price) ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,610 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,66,100 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,610 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,86,100 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಬೆಳ್ಳಿ ಬೆಲೆ ಇಳಿಕೆಯಾಗಿದ್ದು, ಕೆಜಿ ಬೆಳ್ಳಿ ಬೆಲೆ 60,400 ರೂಪಾಯಿ ದಾಖಲಾಗಿದೆ.

ಇದನ್ನೂ ಓದಿ: Gold Rate: ಏರಿಕೆಯಾದ ಚಿನ್ನದ ಬೆಲೆ, ಬೆಳ್ಳಿ ದರ ಸ್ಥಿರ; ಇಂದು ಆಭರಣದ ದರ ಎಷ್ಟಿದೆ?

Gold Rate: ಆಭರಣ ಪ್ರಿಯರಿಗೆ ಶಾಕ್! ಚಿನ್ನ, ಬೆಳ್ಳಿ ದರ ಏರಿಕೆ

Published On - 7:26 am, Tue, 11 January 22

ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ