AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate: ಮತ್ತಷ್ಟು ಏರಿಕೆಯಾಯ್ತು ಚಿನ್ನ, ಬೆಳ್ಳಿ ಬೆಲೆ; ಪ್ರಮುಖ ನಗರಗಳಲ್ಲಿನ ದರ ವಿವರ ಪರಿಶೀಲಿಸಿ

Gold Silver Price Today: ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,700 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,47,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2,000 ರೂಪಾಯಿ ಏರಿಕೆಯಾಗಿದೆ.

Gold Rate: ಮತ್ತಷ್ಟು ಏರಿಕೆಯಾಯ್ತು ಚಿನ್ನ, ಬೆಳ್ಳಿ ಬೆಲೆ; ಪ್ರಮುಖ ನಗರಗಳಲ್ಲಿನ ದರ ವಿವರ ಪರಿಶೀಲಿಸಿ
ಸಂಗ್ರಹ ಚಿತ್ರ
TV9 Web
| Updated By: preethi shettigar|

Updated on:Jan 12, 2022 | 7:37 AM

Share

Gold and Silver Price Today| ಬೆಂಗಳೂರು: ಚಿನ್ನ ಅಂದ್ರೆ ಭಾರತೀಯರಿಗೆ ಕೊಂಚ ಜಾಸ್ತಿಯೇ ಪ್ರೀತಿ. ಮನೆಯಲ್ಲಿ ಹಬ್ಬ-ಹರಿದಿನಗಳ ಸಾಲು ಬಂದರೆ ಮೊದಲು ಯೋಚಿಸುವುದೇ ಚಿನ್ನಾಭರಣ ಖರೀದಿಸುವ ಕುರಿತು. ಹಾಗಿರುವಾಗ ಚಿನ್ನದ ಬೆಲೆ ಇಳಿಕೆಯತ್ತ ಸಾಗಿರಬೇಕು ಎಂಬ ಆಸೆಯೂ ತಪ್ಪಲ್ಲ. ಆದರೆ ದೈನಂದಿನ ದರ ಬದಲಾವಣೆಯಲ್ಲಿ ಚಿನ್ನಾಭರಣ ಬೆಲೆ ಏರಿಳಿತ ಕಾಣುತ್ತಿರುವುದು ಸಹಜ. ಕಳೆದ ಮೂರು ದಿನಗಳಿಂದ ಆಭರಣದ ಬೆಲೆ ಏರಿಕೆಯತ್ತ ಸಾಗುತ್ತಲೇ ಇತ್ತು. ಇಂದು (ಜನವರಿ 12, ಬುಧವಾರ) ಕೂಡ ಚಿನ್ನದ ದರ (Gold Price) ಏರಿಕೆಯಾಗಿದೆ. ಬೆಳ್ಳಿ ದರ (Silver Price) ಕೂಡ ಏರಿಕೆಯತ್ತ ಸಾಗಿದೆ. ನೀವು ಕೂಡಿಟ್ಟ ಹಣದಲ್ಲಿ ಆಭರಣ ಕೊಳ್ಳುವ ಕುರಿತಾದ ಯೋಚನೆ ಇದ್ದರೆ ಇಂದು ಖರೀದಿಸಬಹುದು. ಪ್ರಮುಖ ನಗರಗಳ ಮಾರುಕಟ್ಟೆಯಲ್ಲಿ ಆಭರಣದ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price) ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,700 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,47,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2,000 ರೂಪಾಯಿ ಏರಿಕೆಯಾಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,760 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,87,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2,100 ರೂಪಾಯಿ ಏರಿಕೆಯಾಗಿದೆ. ಬೆಳ್ಳಿ ಬೆಲೆ ಕೂಡ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 64,600 ರೂಪಾಯಿ ನಿಗದಿಯಾಗಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price) ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,870 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,48,700 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 1,500 ರೂಪಾಯಿ ಏರಿಕೆಯಾಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,950 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,89,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 1,600 ರೂಪಾಯಿ ಏರಿಕೆಯಾಗಿದೆ. ಬೆಳ್ಳಿ ಬೆಲೆ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 64,600 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ಬೆಲೆ (Hyderabad Gold Price) ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,700 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,47,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2,000 ರೂಪಾಯಿ ಏರಿಕೆಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,760 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,87,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2,100 ರೂಪಾಯಿ ಏರಿಕೆಯಾಗಿದೆ. ಬೆಳ್ಳಿ ಬೆಲೆ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 64,600 ರೂಪಾಯಿ ನಿಗದಿಯಾಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ಬೆಲೆ (Mumbai Gold Price) ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,590 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,65,900 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,590 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,85,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 200 ರೂಪಾಯಿ ಇಳಿಕೆಯಾಗಿದೆ. ಬೆಳ್ಳಿ ಬೆಲೆ ಏರಿಕೆಯಾಗಿದ್ದು, ಕೆಜಿ ಬೆಳ್ಳಿ ಬೆಲೆ 60,800 ರೂಪಾಯಿ ದಾಖಲಾಗಿದೆ.

ಇದನ್ನೂ ಓದಿ: Gold Rate: ಚಿನ್ನ, ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ; ಆಭರಣ ಖರೀದಿಸುವ ಬಯಕೆ ಇದ್ದರೆ ದರ ವಿವರ ಪರಿಶೀಲಿಸಿ

Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಚಿನ್ನ, ಬೆಳ್ಳಿ ದರದಲ್ಲಿ ಭಾರೀ ಇಳಿಕೆ!

Published On - 7:26 am, Wed, 12 January 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?