AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rates: ಚಿನ್ನ, ಬೆಳ್ಳಿ ಬೆಲೆ ಮತ್ತೂ ಕುಸಿತ; ಇಲ್ಲಿದೆ ದರಪಟ್ಟಿ

Bullion Market 2026 March 15th: ಈ ವಾರಾಂತ್ಯದಲ್ಲಿ ಚಿನ್ನ, ಬೆಳ್ಳಿ ಬೆಲೆಗಳೆರಡೂ ತಗ್ಗಿವೆ. ಈ ತಿಂಗಳ ಮೊದಲೆರಡು ವಾರದಲ್ಲಿ ಇವೆರಡೂ ಬೆಲೆಯಲ್ಲಿ ಭರ್ಜರಿ ಇಳಿಕೆಯಾಗಿದೆ. 22 ಕ್ಯಾರಟ್ ಚಿನ್ನದ ಬೆಲೆ 14,780 ರೂನಿಂದ 14,635 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 15,966 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 275 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 280 ರೂ ಇದೆ.

Gold Rates: ಚಿನ್ನ, ಬೆಳ್ಳಿ ಬೆಲೆ ಮತ್ತೂ ಕುಸಿತ; ಇಲ್ಲಿದೆ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Mar 15, 2026 | 10:23 AM

Share

ಬೆಂಗಳೂರು, ಮಾರ್ಚ್ 15: ಇರಾನ್ ಯುದ್ಧದ ಪರಿಣಾಮವೆಂಬಂತೆ ಚಿನ್ನದ ಬೆಲೆ (Gold Rates) ಸತತವಾಗಿ ಇಳಿಯುತ್ತಿದೆ. ಬೆಳ್ಳಿ ಬೆಲೆಯೂ ತಗ್ಗುತ್ತಿದೆ. ಚಿನ್ನದ ಬೆಲೆ ಕಳೆದ ಈ ತಿಂಗಳು ಒಂದು ಗ್ರಾಮ್​​ಗೆ 1,230 ರೂನಷ್ಟು ಕಡಿಮೆ ಆಗಿದೆ. ಆಭರಣ ಚಿನ್ನದ ಬೆಲೆ 15,865 ರೂನಿಂದ 14,635 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 16,000 ರೂ ಗಡಿಯೊಳಗೆ ಬಂದಿದೆ. ಮಾರ್ಚ್ ಆರಂಭದಲ್ಲಿ ಬೆಳ್ಳಿ ಬೆಲೆ ಗ್ರಾಮ್​ಗೆ 315 ರೂ ಇತ್ತು. ಎರಡು ವಾರದಲ್ಲಿ ಬೆಲೆ ಗ್ರಾಮ್​​ಗೆ ಬರೋಬ್ಬರಿ 40 ರೂ ತಗ್ಗಿದೆ. ವಾರಾಂತ್ಯದಲ್ಲಿ 5-10 ರೂ ಕಡಿಮೆಗೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,46,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,59,660 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 27,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,46,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 27,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 28,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಮಾರ್ಚ್ 15ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,966 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,635 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,974 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 275 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,966 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,635 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 275 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,635 ರೂ
  • ಚೆನ್ನೈ: 14,760 ರೂ
  • ಮುಂಬೈ: 14,635 ರೂ
  • ದೆಹಲಿ: 14,650 ರೂ
  • ಕೋಲ್ಕತಾ: 14,635 ರೂ
  • ಕೇರಳ: 14,635 ರೂ
  • ಅಹ್ಮದಾಬಾದ್: 14,640 ರೂ
  • ಜೈಪುರ್: 14,650 ರೂ
  • ಲಕ್ನೋ: 14,650 ರೂ
  • ಭುವನೇಶ್ವರ್: 14,635 ರೂ

ಇದನ್ನೂ ಓದಿ: ಪಿಎಂ ಕಿಸಾನ್ ಸ್ಕೀಮ್; ಫಲಾನುಭವಿಗಳ ಸಂಖ್ಯೆ 4 ಲಕ್ಷದಷ್ಟು ಕಡಿಮೆ; ನಿಮಗೆ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 614 ರಿಂಗಿಟ್ (14,423 ರುಪಾಯಿ)
  • ದುಬೈ: 561.75 ಡಿರಾಮ್ (14,155 ರುಪಾಯಿ)
  • ಅಮೆರಿಕ: 158 ಡಾಲರ್ (14,624 ರುಪಾಯಿ)
  • ಸಿಂಗಾಪುರ: 200.80 ಸಿಂಗಾಪುರ್ ಡಾಲರ್ (14,478 ರುಪಾಯಿ)
  • ಕತಾರ್: 561 ಕತಾರಿ ರಿಯಾಲ್ (14,243 ರೂ)
  • ಸೌದಿ ಅರೇಬಿಯಾ: 571 ಸೌದಿ ರಿಯಾಲ್ (14,084 ರುಪಾಯಿ)
  • ಓಮನ್: 59.65 ಒಮಾನಿ ರಿಯಾಲ್ (14,342 ರುಪಾಯಿ)
  • ಕುವೇತ್: 46.01 ಕುವೇತಿ ದಿನಾರ್ (13,894 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 275 ರೂ
  • ಚೆನ್ನೈ: 280 ರೂ
  • ಮುಂಬೈ: 275 ರೂ
  • ದೆಹಲಿ: 275 ರೂ
  • ಕೋಲ್ಕತಾ: 275 ರೂ
  • ಕೇರಳ: 280 ರೂ
  • ಅಹ್ಮದಾಬಾದ್: 275 ರೂ
  • ಜೈಪುರ್: 275 ರೂ
  • ಲಕ್ನೋ: 275 ರೂ
  • ಭುವನೇಶ್ವರ್: 280 ರೂ
  • ಪುಣೆ: 275

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ: ಹೇಗಿದೆ ನೋಡಿ ಕೃಷ್ಣ ಪಥ
ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ: ಹೇಗಿದೆ ನೋಡಿ ಕೃಷ್ಣ ಪಥ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ