AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಬೆಳ್ಳಿ ಬೆಲೆ ಇಳಿಕೆ; ಚಿನ್ನದ ಬೆಲೆ ಅಲ್ಪ ಏರಿಕೆ

Bullion Market 2025 October 16th: ಸತತವಾಗಿ ಭರ್ಜರಿ ಏರಿಕೆ ಕಾಣುತ್ತಾ ಬಂದಿರುವ ಬೆಳ್ಳಿ ಬೆಲೆ ಇಂದು ಗುರುವಾರ 1 ರೂ ಕಡಿಮೆ ಆಗಿದೆ. ಚಿನ್ನದ ಬೆಲೆಯಲ್ಲಿ ಅಲ್ಪ ಏರಿಕೆ ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ 11,815 ರೂನಿಂದ 11,865 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 12,944 ರೂಗೆ ಏರಿದೆ. ಬೆಳ್ಳಿ ಬೆಲೆ ಬೆಂಗಳೂರಿನಲ್ಲಿ 194 ರೂ ಆಗಿದೆ. ಮುಂಬೈ ಮೊದಲಾದೆಡೆ 189 ರೂಗೆ ಇಳಿದಿದೆ. ಚೆನ್ನೈ ಇತ್ಯಾದಿ ಕಡೆ 206 ರೂ ಆಗಿದೆ.

Gold Rate Today Bangalore: ಬೆಳ್ಳಿ ಬೆಲೆ ಇಳಿಕೆ; ಚಿನ್ನದ ಬೆಲೆ ಅಲ್ಪ ಏರಿಕೆ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 16, 2025 | 10:33 AM

Share

ಬೆಂಗಳೂರು, ಅಕ್ಟೋಬರ್ 16: ಇಂದು ಗುರುವಾರ ಚಿನ್ನದ ಬೆಲೆ ಅಲ್ಪ ಹೆಚ್ಚಳ ಪಡೆದರೆ, ಬೆಳ್ಳಿ ಬೆಲೆ ಸ್ವಲ್ಪ ತಗ್ಗಿದೆ. ಈ ಬೆಳ್ಳಿಯ ಬೆಲೆ ಬಹಳ ಅಪರೂಪಕ್ಕೆ ಕಡಿಮೆಗೊಂಡಿದೆ. ಚಿನ್ನದ ಬೆಲೆ (gold rate) ಗ್ರಾಮ್​ಗೆ 5 ರೂನಷ್ಟು ಮಾತ್ರ ಏರಿಕೆ ಆಗಿದೆ. 18 ಕ್ಯಾರಟ್ ಚಿನ್ನಕ್ಕೂ ಬೇಡಿಕೆ ಹೆಚ್ಚುತ್ತಿದ್ದು, ಇದರ ಬೆಲೆ ಮೊದಲ ಬಾರಿಗೆ 9,700 ರೂ ಗಡಿ ದಾಟಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆಯಲ್ಲೂ ಚಿನ್ನದ ಬೆಲೆ ಏರಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,18,650 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,29,440 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 18,900 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,18,650 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 19,400 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 20,600 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಅಕ್ಟೋಬರ್ 16ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,944 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,865 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 9,708 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 189 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,944 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,865 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 194 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 11,865 ರೂ
  • ಚೆನ್ನೈ: 11,865 ರೂ
  • ಮುಂಬೈ: 11,865 ರೂ
  • ದೆಹಲಿ: 11,880 ರೂ
  • ಕೋಲ್ಕತಾ: 11,865 ರೂ
  • ಕೇರಳ: 11,865 ರೂ
  • ಅಹ್ಮದಾಬಾದ್: 11,870 ರೂ
  • ಜೈಪುರ್: 11,880 ರೂ
  • ಲಕ್ನೋ: 11,880 ರೂ
  • ಭುವನೇಶ್ವರ್: 11,865 ರೂ

ಇದನ್ನೂ ಓದಿ: ಭಾರತದ ಆರ್ಥಿಕ ಬೆಳವಣಿಗೆ ಬಗ್ಗೆ ಐಎಂಎಫ್​ನಿಂದಲೂ ನಿರೀಕ್ಷೆ ಹೆಚ್ಚಳ; ಶೇ. 6.4ರಿಂದ ಶೇ. 6.6ಕ್ಕೆ ಅಂದಾಜು ಪರಿಷ್ಕರಣೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 558 ರಿಂಗಿಟ್ (11,586 ರುಪಾಯಿ)
  • ದುಬೈ: 468.25 ಡಿರಾಮ್ (11,191 ರುಪಾಯಿ)
  • ಅಮೆರಿಕ: 130.50 ಡಾಲರ್ (11,455 ರುಪಾಯಿ)
  • ಸಿಂಗಾಪುರ: 169.20 ಸಿಂಗಾಪುರ್ ಡಾಲರ್ (11,473 ರುಪಾಯಿ)
  • ಕತಾರ್: 467.50 ಕತಾರಿ ರಿಯಾಲ್ (11,258 ರೂ)
  • ಸೌದಿ ಅರೇಬಿಯಾ: 476 ಸೌದಿ ರಿಯಾಲ್ (11,141 ರುಪಾಯಿ)
  • ಓಮನ್: 49.15 ಒಮಾನಿ ರಿಯಾಲ್ (11,207 ರುಪಾಯಿ)
  • ಕುವೇತ್: 38.36 ಕುವೇತಿ ದಿನಾರ್ (11,003 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 194 ರೂ
  • ಚೆನ್ನೈ: 206 ರೂ
  • ಮುಂಬೈ: 189 ರೂ
  • ದೆಹಲಿ: 189 ರೂ
  • ಕೋಲ್ಕತಾ: 189 ರೂ
  • ಕೇರಳ: 206 ರೂ
  • ಅಹ್ಮದಾಬಾದ್: 189 ರೂ
  • ಜೈಪುರ್: 189 ರೂ
  • ಲಕ್ನೋ: 189 ರೂ
  • ಭುವನೇಶ್ವರ್: 206 ರೂ
  • ಪುಣೆ: 189

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ