AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನದ ಬೆಲೆ ಅಲ್ಪ ಏರಿಕೆ; ಕಡಿಮೆಗೊಂಡ ಬೆಳ್ಳಿ ಬೆಲೆ

Bullion Market 2025 October 24th: ಶುಕ್ರವಾರವಾದ ಇಂದು ಚಿನ್ನದ ಬೆಲೆ ಮತ್ತೆ ಏರಿಕೆಯ ಹಾದಿಗೆ ಮರಳಿದರೆ, ಬೆಳ್ಳಿ ಬೆಲೆಯ ಇಳಿಕೆ ಮುಂದುವರಿದಿದೆ. ಆಭರಣ ಚಿನ್ನದ ಬೆಲೆ ಗ್ರಾಮ್​ಗೆ 35 ರೂ ಹೆಚ್ಚಳ ಆಗಿದೆ. 11,465 ರೂನಿಂದ 11,500 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 12,546 ರೂ ಆಗಿದೆ. ಬೆಳ್ಳಿ ಬೆಲೆ ಮುಂಬೈ ಮೊದಲಾದ ಕಡೆ 156 ರೂಗೆ ಇಳಿದಿದೆ. ಬೆಂಗಳೂರಿನಲ್ಲಿ ಬೆಲೆ 158 ರೂ ಇದ್ದರೆ, ಚೆನ್ನೈ ಮೊದಲಾದ ಕೆಲವೆಡೆ ಬೆಲೆ 171 ರೂ ಇದೆ.

Gold Rate Today Bangalore: ಚಿನ್ನದ ಬೆಲೆ ಅಲ್ಪ ಏರಿಕೆ; ಕಡಿಮೆಗೊಂಡ ಬೆಳ್ಳಿ ಬೆಲೆ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 24, 2025 | 1:26 PM

Share

ಬೆಂಗಳೂರು, ಅಕ್ಟೋಬರ್ 24: ಎರಡು ದಿನ ಇಳಿದಿದ್ದ ಚಿನ್ನದ ಬೆಲೆ ಇವತ್ತು ಮತ್ತೆ ಏರಿಕೆಯ ಹಾದಿಗೆ ಬಂದಿದೆ. ಇನ್ನೊಂದೆಡೆ, ಬೆಳ್ಳಿ ಬೆಲೆಯ (silver rates) ಭರ್ಜರಿ ಇಳಿಕೆ ಮುಂದುವರಿದಿದೆ. ಇಂದೂ ಕೂಡ ಬೆಳ್ಳಿ ಬೆಲೆ ಬರೋಬ್ಬರಿ 3 ರೂ ಕಡಿಮೆಗೊಂಡಿದೆ. 159 ರೂ ಇದ್ದ ಬೆಲೆ 156 ರೂಗೆ ಬಂದಿದೆ. ಬೆಂಗಳೂರಿನಲ್ಲಿ 1 ರೂ ಮಾತ್ರ ಕಡಿಮೆಗೊಂಡಿದೆ. ಚಿನ್ನದ ಬೆಲೆ ಗ್ರಾಮ್​ಗೆ 35 ರೂ ಏರಿಕೆ ಆಗಿದೆ. ಆಭರಣ ಚಿನ್ನದ ಬೆಲೆ ಮತ್ತೆ 11,500 ರೂ ಗಡಿ ಮುಟ್ಟಿದೆ. ವಿದೇಶಗಳಲ್ಲೂ ಹಲವೆಡೆ ಚಿನ್ನದ ಬೆಲೆಯಲ್ಲಿ ಅಲ್ಪ ಹೆಚ್ಚಳ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,15,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,25,460 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 15,600 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,15,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 15,800 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 17,100 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಅಕ್ಟೋಬರ್ 24ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,546 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,500 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 9,409 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 156 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,546 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,500 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 158 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 11,500 ರೂ
  • ಚೆನ್ನೈ: 11,540 ರೂ
  • ಮುಂಬೈ: 11,500 ರೂ
  • ದೆಹಲಿ: 11,515 ರೂ
  • ಕೋಲ್ಕತಾ: 11,500 ರೂ
  • ಕೇರಳ: 11,500 ರೂ
  • ಅಹ್ಮದಾಬಾದ್: 11,505 ರೂ
  • ಜೈಪುರ್: 11,515 ರೂ
  • ಲಕ್ನೋ: 11,515 ರೂ
  • ಭುವನೇಶ್ವರ್: 11,500 ರೂ

ಇದನ್ನೂ ಓದಿ: ಪೋಸ್ಟ್ ಆಫೀಸ್ ಪಿಪಿಎಫ್ ಸ್ಕೀಮ್ ಮೂಲಕ 15 ವರ್ಷದಲ್ಲಿ 40 ಲಕ್ಷ ರೂವರೆಗೆ ಆದಾಯ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 547 ರಿಂಗಿಟ್ (11,360 ರುಪಾಯಿ)
  • ದುಬೈ: 462.25 ಡಿರಾಮ್ (11,040 ರುಪಾಯಿ)
  • ಅಮೆರಿಕ: 129 ಡಾಲರ್ (11,316 ರುಪಾಯಿ)
  • ಸಿಂಗಾಪುರ: 166.50 ಸಿಂಗಾಪುರ್ ಡಾಲರ್ (11,240 ರುಪಾಯಿ)
  • ಕತಾರ್: 462 ಕತಾರಿ ರಿಯಾಲ್ (11,119 ರೂ)
  • ಸೌದಿ ಅರೇಬಿಯಾ: 470 ಸೌದಿ ರಿಯಾಲ್ (10,993 ರುಪಾಯಿ)
  • ಓಮನ್: 48.70 ಒಮಾನಿ ರಿಯಾಲ್ (11,097 ರುಪಾಯಿ)
  • ಕುವೇತ್: 37.87 ಕುವೇತಿ ದಿನಾರ್ (10,834 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 158 ರೂ
  • ಚೆನ್ನೈ: 171 ರೂ
  • ಮುಂಬೈ: 156 ರೂ
  • ದೆಹಲಿ: 156 ರೂ
  • ಕೋಲ್ಕತಾ: 156 ರೂ
  • ಕೇರಳ: 171 ರೂ
  • ಅಹ್ಮದಾಬಾದ್: 156 ರೂ
  • ಜೈಪುರ್: 156 ರೂ
  • ಲಕ್ನೋ: 156 ರೂ
  • ಭುವನೇಶ್ವರ್: 171 ರೂ
  • ಪುಣೆ: 156

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಪಿಸ್ತೂಲ್ ಇಟ್ಟುಕೊಂಡ ಬಂದ ಜೆಡಿಎಸ್ ಕಾರ್ಯಕರ್ತ, ವಿಡಿಯೋ ವೈರಲ್
ಪಿಸ್ತೂಲ್ ಇಟ್ಟುಕೊಂಡ ಬಂದ ಜೆಡಿಎಸ್ ಕಾರ್ಯಕರ್ತ, ವಿಡಿಯೋ ವೈರಲ್
ಅನಂತ್​​ ಕುಮಾರ್​​ ಹೆಗಡೆ ಮರಳಿ ರಾಜಕೀಯಕ್ಕೆ? ಶ್ರೀರಾಮುಲು ಹೇಳಿದ್ದಿಷ್ಟು
ಅನಂತ್​​ ಕುಮಾರ್​​ ಹೆಗಡೆ ಮರಳಿ ರಾಜಕೀಯಕ್ಕೆ? ಶ್ರೀರಾಮುಲು ಹೇಳಿದ್ದಿಷ್ಟು
ದೆಹಲಿ ಅಬಕಾರಿ ನೀತಿ ಹಗರಣ, ಸಿಬಿಐಗೆ ದೆಹಲಿ ನ್ಯಾಯಾಲಯ ತರಾಟೆ
ದೆಹಲಿ ಅಬಕಾರಿ ನೀತಿ ಹಗರಣ, ಸಿಬಿಐಗೆ ದೆಹಲಿ ನ್ಯಾಯಾಲಯ ತರಾಟೆ
ಸೋಷಿಯಲ್ ಮೀಡಿಯಾ ಗಿಮಿಕ್ ಮಾಡೋರೇ ಹುಷಾರ್: ಪೊಲೀಸ್ ಆಯುಕ್ತ ಖಡಕ್ ವಾರ್ನಿಂಗ್
ಸೋಷಿಯಲ್ ಮೀಡಿಯಾ ಗಿಮಿಕ್ ಮಾಡೋರೇ ಹುಷಾರ್: ಪೊಲೀಸ್ ಆಯುಕ್ತ ಖಡಕ್ ವಾರ್ನಿಂಗ್
ಮಾ.03 ಚಂದ್ರಗ್ರಹಣ; ಧನಸ್ಸು ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; ಧನಸ್ಸು ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಶಾಸಕರ ಡಿನ್ನರ್ ಮೀಟಿಂಗ್ ಬಗ್ಗೆ ಮೌನ ಮುರಿದ ಡಿಕೆಶಿ: ಹೇಳಿದ್ದೇನು ನೋಡಿ!
ಶಾಸಕರ ಡಿನ್ನರ್ ಮೀಟಿಂಗ್ ಬಗ್ಗೆ ಮೌನ ಮುರಿದ ಡಿಕೆಶಿ: ಹೇಳಿದ್ದೇನು ನೋಡಿ!
‘ಕವಳ’ ಸಿನಿಮಾ ಮುಹೂರ್ತ ಶುಭ ಹಾರೈಸಿದ ನಟ ರವಿಚಂದ್ರನ್
‘ಕವಳ’ ಸಿನಿಮಾ ಮುಹೂರ್ತ ಶುಭ ಹಾರೈಸಿದ ನಟ ರವಿಚಂದ್ರನ್
ಮಾ.03 ಚಂದ್ರಗ್ರಹಣ; ವೃಶ್ಚಿಕ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; ವೃಶ್ಚಿಕ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಇದು ಕೆಸರು ಗದ್ದೆಯಲ್ಲ, ಹಾವೇರಿ-ಶಿರಸಿ ರಾಜ್ಯ ಹೆದ್ದಾರಿ!
ಇದು ಕೆಸರು ಗದ್ದೆಯಲ್ಲ, ಹಾವೇರಿ-ಶಿರಸಿ ರಾಜ್ಯ ಹೆದ್ದಾರಿ!
ಎಐಎಡಿಎಂಕೆಯ ಉಚ್ಚಾಟಿತ ನಾಯಕ ಪನ್ನೀರ್​​ಸೆಲ್ವಂ ಡಿಎಂಕೆಗೆ ಸೇರ್ಪಡೆ
ಎಐಎಡಿಎಂಕೆಯ ಉಚ್ಚಾಟಿತ ನಾಯಕ ಪನ್ನೀರ್​​ಸೆಲ್ವಂ ಡಿಎಂಕೆಗೆ ಸೇರ್ಪಡೆ