AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನದ ಬೆಲೆ ಇಳಿಕೆ; ಬೆಳ್ಳಿ ಬೆಲೆ ಏರಿಕೆ

Bullion Market 2025 November 27th: ಇಂದು ಗುರುವಾರ ಚಿನ್ನದ ಬೆಲೆ ಕಡಿಮೆಗೊಂಡರೆ, ಬೆಳ್ಳಿ ಬೆಲೆ ಭರ್ಜರಿ ಹೆಚ್ಚಳ ಕಂಡಿದೆ. 22 ಕ್ಯಾರಟ್ ಚಿನ್ನದ ಬೆಲೆ 11,725 ರೂನಿಂದ 11,710 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 12,775 ರೂಗೆ ಇಳಿದಿದೆ. ಬೆಳ್ಳಿ ಬೆಲೆ ಮುಂಬೈ, ಬೆಂಗಳೂರು ಮೊದಲಾದೆಡೆ 173 ರೂಗೆ ಏರಿದೆ. ಚೆನ್ನೈ ಮೊದಲಾದ ಕೆಲವೆಡೆ ಬೆಲೆ 180 ರೂ ಆಗಿದೆ.

Gold Rate Today Bangalore: ಚಿನ್ನದ ಬೆಲೆ ಇಳಿಕೆ; ಬೆಳ್ಳಿ ಬೆಲೆ ಏರಿಕೆ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 27, 2025 | 11:16 AM

Share

ಬೆಂಗಳೂರು, ನವೆಂಬರ್ 27: ಸತತ ಏರುತ್ತಿದ್ದ ಚಿನ್ನದ ಬೆಲೆ (gold rate) ಇವತ್ತು ಗುರುವಾರ ಅಲ್ಪ ಇಳಿಕೆ ಕಂಡಿದೆ. ಆದರೆ, ಬೆಳ್ಳಿ ಬೆಲೆಯ ನಿರಂತರ ಓಟ ಮುಂದುವರಿದಿದೆ. ಭಾರತದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 15 ರೂ ತಗ್ಗಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಯಥಾಸ್ಥಿತಿ ಇದೆ. ಬೆಳ್ಳಿ ಬೆಲೆ 4 ರೂ ಏರಿದೆ. ನಿನ್ನೆಯೂ ಕೂಡ ಬೆಳ್ಳಿ ಬೆಲೆ ಭರ್ಜರಿ ಹೆಚ್ಚಳ ಕಂಡಿತ್ತು. ಎರಡು ದಿನದಲ್ಲಿ ಗ್ರಾಮ್​ಗೆ 6 ರೂ ಏರಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,17,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,27,750 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 17,300 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,17,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 17,300 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 18,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ನವೆಂಬರ್ 27ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,775 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,710 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 9,581 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 173 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,775 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,710 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 173 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 11,710 ರೂ
  • ಚೆನ್ನೈ: 11,770 ರೂ
  • ಮುಂಬೈ: 11,710 ರೂ
  • ದೆಹಲಿ: 11,725 ರೂ
  • ಕೋಲ್ಕತಾ: 11,710 ರೂ
  • ಕೇರಳ: 11,710 ರೂ
  • ಅಹ್ಮದಾಬಾದ್: 11,715 ರೂ
  • ಜೈಪುರ್: 11,725 ರೂ
  • ಲಕ್ನೋ: 11,725 ರೂ
  • ಭುವನೇಶ್ವರ್: 11,710 ರೂ

ಇದನ್ನೂ ಓದಿ: ಪಿಎಂ ವಿದ್ಯಾಲಕ್ಷ್ಮೀ ಯೋಜನೆ; ಕಡಿಮೆ ಬಡ್ಡಿದರದಲ್ಲಿ 10 ಲಕ್ಷ ರೂವರೆಗೆ ಸಾಲ; ಇದು ಕೇಂದ್ರ ಪ್ರಾಯೋಜಿತ ಸ್ಕೀಮ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 530 ರಿಂಗಿಟ್ (11,448 ರುಪಾಯಿ)
  • ದುಬೈ: 463.25 ಡಿರಾಮ್ (11,255 ರುಪಾಯಿ)
  • ಅಮೆರಿಕ: 129.50 ಡಾಲರ್ (11,556 ರುಪಾಯಿ)
  • ಸಿಂಗಾಪುರ: 167.80 ಸಿಂಗಾಪುರ್ ಡಾಲರ್ (11,550 ರುಪಾಯಿ)
  • ಕತಾರ್: 462.50 ಕತಾರಿ ರಿಯಾಲ್ (11,324 ರೂ)
  • ಸೌದಿ ಅರೇಬಿಯಾ: 470 ಸೌದಿ ರಿಯಾಲ್ (11,182 ರುಪಾಯಿ)
  • ಓಮನ್: 49 ಒಮಾನಿ ರಿಯಾಲ್ (11,356 ರುಪಾಯಿ)
  • ಕುವೇತ್: 38.05 ಕುವೇತಿ ದಿನಾರ್ (11,065 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 173 ರೂ
  • ಚೆನ್ನೈ: 180 ರೂ
  • ಮುಂಬೈ: 173 ರೂ
  • ದೆಹಲಿ: 173 ರೂ
  • ಕೋಲ್ಕತಾ: 173 ರೂ
  • ಕೇರಳ: 180 ರೂ
  • ಅಹ್ಮದಾಬಾದ್: 173 ರೂ
  • ಜೈಪುರ್: 173 ರೂ
  • ಲಕ್ನೋ: 173 ರೂ
  • ಭುವನೇಶ್ವರ್: 180 ರೂ
  • ಪುಣೆ: 173

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ