AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rates: ಚಿನ್ನದ ಬೆಲೆ ಗ್ರಾಮ್​ಗೆ 230 ರೂ ಇಳಿಕೆ; ಇಲ್ಲಿದೆ ದರಪಟ್ಟಿ

Bullion Market 2026 April 2nd: ಬುಧವಾರ ಏರಿದ್ದ ಚಿನ್ನ, ಬೆಳ್ಳಿ ಬೆಲೆಗಳು ಗುರುವಾರ ಇಳಿದಿವೆ. ಚಿನ್ನದ ಬೆಲೆ ಗ್ರಾಮ್​ಗೆ 230 ರೂ ಇಳಿದರೆ, ಬೆಳ್ಳಿ ಬೆಲೆ 5 ರೂ ತಗ್ಗಿದೆ. 22 ಕ್ಯಾರಟ್ ಚಿನ್ನದ ಬೆಲೆ 13,885 ರೂನಿಂದ 13,655 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 14,897 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 250 ರೂಗೆ ಇಳಿದಿದೆ. ಚೆನ್ನೈ ಮೊದಲಾದೆಡೆ ಬೆಲೆ 255 ರೂ ಇದೆ.

Gold Rates: ಚಿನ್ನದ ಬೆಲೆ ಗ್ರಾಮ್​ಗೆ 230 ರೂ ಇಳಿಕೆ; ಇಲ್ಲಿದೆ ದರಪಟ್ಟಿ
ಚಿನ್ನImage Credit source: Shutterstock
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Apr 02, 2026 | 2:03 PM

Share

ಬೆಂಗಳೂರು, ಏಪ್ರಿಲ್ 2: ಸತತವಾಗಿ ಏರುತ್ತಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗುರುವಾರ ತಗ್ಗಿವೆ. ಒಂದು ಚಿನ್ನದ ಬೆಲೆ (Gold Rates) 230 ರೂನಷ್ಟು ಕಡಿಮೆ ಆಗಿದೆ. ವಿದೇಶಗಳಲ್ಲಿ ಕೆಲವೆಡೆ ಬೆಲೆ ಇಳಿದರೆ, ಇನ್ನೂ ಕೆಲವೆಡೆ ಏರಿದೆ. ಬೆಳ್ಳಿ ಬೆಲೆಯೂ ಕಡಿಮೆಗೊಂಡಿದೆ. ನಿನ್ನೆ 5 ರೂ ಹೆಚ್ಚಿದ್ದ ಬೆಳ್ಳಿ ಬೆಲೆ ಇವತ್ತು 5 ರೂ ಕಡಿಮೆಗೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,36,550 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,48,970 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 25,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,36,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 25,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 25,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಏಪ್ರಿಲ್ 2ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,897 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,655 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,173 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 250 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,897 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,655 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 250 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,655 ರೂ
  • ಚೆನ್ನೈ: 13,950 ರೂ
  • ಮುಂಬೈ: 13,655 ರೂ
  • ದೆಹಲಿ: 13,670 ರೂ
  • ಕೋಲ್ಕತಾ: 13,655 ರೂ
  • ಕೇರಳ: 13,655 ರೂ
  • ಅಹ್ಮದಾಬಾದ್: 13,660 ರೂ
  • ಜೈಪುರ್: 13,670 ರೂ
  • ಲಕ್ನೋ: 13,670 ರೂ
  • ಭುವನೇಶ್ವರ್: 13,655 ರೂ

ಇದನ್ನೂ ಓದಿ: ಪೆಟ್ರೋಕೆಮಿಕಲ್ ಉತ್ಪನ್ನಗಳಿಗೆ ಆಮದು ಸುಂಕದಿಂದ ವಿನಾಯಿತಿ; ಹಲವು ಉದ್ಯಮಗಳಿಗೆ ಅನುಕೂಲ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 580 ರಿಂಗಿಟ್ (13,404 ರುಪಾಯಿ)
  • ದುಬೈ: 534 ಡಿರಾಮ್ (13,498 ರುಪಾಯಿ)
  • ಅಮೆರಿಕ: 149 ಡಾಲರ್ (13,896 ರುಪಾಯಿ)
  • ಸಿಂಗಾಪುರ: 187.20 ಸಿಂಗಾಪುರ್ ಡಾಲರ್ (13,564 ರುಪಾಯಿ)
  • ಕತಾರ್: 530 ಕತಾರಿ ರಿಯಾಲ್ (13,558 ರೂ)
  • ಸೌದಿ ಅರೇಬಿಯಾ: 543 ಸೌದಿ ರಿಯಾಲ್ (13,490 ರುಪಾಯಿ)
  • ಓಮನ್: 56.45 ಒಮಾನಿ ರಿಯಾಲ್ (13,676 ರುಪಾಯಿ)
  • ಕುವೇತ್: 43.79 ಕುವೇತಿ ದಿನಾರ್ (13,255 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 250 ರೂ
  • ಚೆನ್ನೈ: 255 ರೂ
  • ಮುಂಬೈ: 250 ರೂ
  • ದೆಹಲಿ: 250 ರೂ
  • ಕೋಲ್ಕತಾ: 250 ರೂ
  • ಕೇರಳ: 255 ರೂ
  • ಅಹ್ಮದಾಬಾದ್: 250 ರೂ
  • ಜೈಪುರ್: 250 ರೂ
  • ಲಕ್ನೋ: 250 ರೂ
  • ಭುವನೇಶ್ವರ್: 255 ರೂ
  • ಪುಣೆ: 250

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 2:02 pm, Thu, 2 April 26

Follow Us
ಏಣಿಯ ಮೇಲೆ ಬ್ಯಾಲೆನ್ಸ್, ಕ್ಯಾಪ್ಟನ್ ಆಗಲು ಏನೆಲ್ಲಾ ಸಾಹಸ: ವಿಡಿಯೋ
ಏಣಿಯ ಮೇಲೆ ಬ್ಯಾಲೆನ್ಸ್, ಕ್ಯಾಪ್ಟನ್ ಆಗಲು ಏನೆಲ್ಲಾ ಸಾಹಸ: ವಿಡಿಯೋ
ಟಿ.ನರಸೀಪುರದಲ್ಲಿ ಶೋಭಾಯಾತ್ರೆಗೆ ಪ್ರತಿಯಾಗಿ ಸೌಹಾರ್ದ ಭೀಮಯಾತ್ರೆ
ಟಿ.ನರಸೀಪುರದಲ್ಲಿ ಶೋಭಾಯಾತ್ರೆಗೆ ಪ್ರತಿಯಾಗಿ ಸೌಹಾರ್ದ ಭೀಮಯಾತ್ರೆ
ತಮ್ಮದೇ ನಟನೆ ಸಿನಿಮಾ ನೋಡಿ ಕಣ್ಣೀರು ಹಾಕಿದ ನಟಿ ಮೋನಿಷಾ: ವಿಡಿಯೋ
ತಮ್ಮದೇ ನಟನೆ ಸಿನಿಮಾ ನೋಡಿ ಕಣ್ಣೀರು ಹಾಕಿದ ನಟಿ ಮೋನಿಷಾ: ವಿಡಿಯೋ
ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ
ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ
ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ
ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ
ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ
ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ
ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ
ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ
ತುಳು ರಾಜ್ಯದ 2ನೇ ಭಾಷೆ:ಮಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ
ತುಳು ರಾಜ್ಯದ 2ನೇ ಭಾಷೆ:ಮಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ
ಉಪೇಂದ್ರ ಹುಟ್ಟುಹಬ್ಬದ ಸಂಭ್ರಮ; ಹೊಸ ಸಿನಿಮಾ ಪೋಸ್ಟರ್ ಬಿಡುಗಡೆ
ಉಪೇಂದ್ರ ಹುಟ್ಟುಹಬ್ಬದ ಸಂಭ್ರಮ; ಹೊಸ ಸಿನಿಮಾ ಪೋಸ್ಟರ್ ಬಿಡುಗಡೆ
ಸಚಿವ ಸಂಪುಟ ಸಭೆ ಅಂತ್ಯ: ಸಿಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನೇರಪ್ರಸಾರ
ಸಚಿವ ಸಂಪುಟ ಸಭೆ ಅಂತ್ಯ: ಸಿಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನೇರಪ್ರಸಾರ