AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Prices: ಚಿನ್ನ, ಬೆಳ್ಳಿ ಬೆಲೆ ಏರಿಳಿಕೆಯ ಆಟ; ಬೆಂಗಳೂರು, ಚೆನ್ನೈ, ಮುಂಬೈ, ಸಿಂಗಾಪುರ, ಅಮೆರಿಕ ಮೊದಲಾದೆಡೆ ಎಷ್ಟಿದೆ ಚಿನ್ನದ ದರ?

Bullion Market 2023, April 14th: ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,100 ರುಪಾಯಿ ಆಗಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,200 ರುಪಾಯಿ ಆಗಿದೆ. ಬೆಳ್ಳಿ ಬೆಲೆ ಕೂಡ ತುಸು ಏರಿಕೆ ಕಂಡಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Prices: ಚಿನ್ನ, ಬೆಳ್ಳಿ ಬೆಲೆ ಏರಿಳಿಕೆಯ ಆಟ; ಬೆಂಗಳೂರು, ಚೆನ್ನೈ, ಮುಂಬೈ, ಸಿಂಗಾಪುರ, ಅಮೆರಿಕ ಮೊದಲಾದೆಡೆ ಎಷ್ಟಿದೆ ಚಿನ್ನದ ದರ?
ಚಿನ್ನದ ಆಭರಣ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 14, 2023 | 5:04 AM

Share

ಬೆಂಗಳೂರು: ಚಿನ್ನ ಮತ್ತು ಬೆಳ್ಳಿಗಳ ಏರಿಳಿಕೆಯ ಆಟ ಮುಂದುವರಿದಿದೆ. ನಿನ್ನೆ ನೂರು ಗ್ರಾಮ್​ಗೆ ಐದು ಸಾವಿರ ರೂನಷ್ಟು ಏರಿಕೆಯಾಗಿದ್ದ ಚಿನ್ನದ ಬೆಲೆ (Gold Rates) ಇದೀಗ ಭಾರತೀಯ ಚಿನಿವಾರಪೇಟೆಯಲ್ಲಿ ಸ್ವಲ್ಪ ಮಟ್ಟಿಗೆ ಇಳಿಕೆ ಕಂಡಿದೆ. ಆದರೆ, ಇವತ್ತಿನ ಮಾರುಕಟ್ಟೆ ಟ್ರೆಂಡ್ ಪ್ರಕಾರ ಇಂದು ಚಿನ್ನದ ಬೆಲೆ ಮತ್ತೆ ಏರಬಹುದು. ಭಾರತದಲ್ಲಿ 10 ಗ್ರಾಮ್ ಚಿನ್ನದ ಬೆಲೆ 100 ರುಪಾಯಿಯಷ್ಟು ಇಳಿಕೆ ಆಗಿದೆ. ಬೆಳ್ಳಿ ಬೆಲೆ 10 ಗ್ರಾಮ್​ಗೆ 8 ರೂನಷ್ಟು ಹೆಚ್ಚಳಗೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,100 ರುಪಾಯಿ ಆಗಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,200 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,780 ರುಪಾಯಿಗೆ ಏರಿದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 56,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,180 ರುಪಾಯಿಗೆ ಏರಿಕೆ ಕಂಡಿದೆ.

ಜಾಗತಿಕವಾಗಿ ಅತಂತ್ರ ಆರ್ಥಿಕ ಸ್ಥಿತಿ ಇರುವುದರಿಂದ ಹೂಡಿಕೆದಾರರಲ್ಲಿ ಗೊಂದಲ ಮನೆಮಾಡಿದೆ. ಇದೇ ಕಾರಣಕ್ಕೆ ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಮಾರ್ಗ ಎನಿಸಿದೆ. ಮುಂದೆಯೂ ಆರ್ಥಿಕ ಗೊಂದಲಮಯ ಸ್ಥಿತಿ ಮುಂದುವರಿಯುವುದರಿಂದ ಚಿನ್ನಕ್ಕೆ ಬೇಡಿಕೆ ಕಡಿಮೆ ಆಗುವ ಸಾಧ್ಯತೆ ಬಹಳ ಕಡಿಮೆ. ಈ ಹಿನ್ನೆಲೆಯಲ್ಲಿ ಚಿನ್ನದ ಬೆಲೆ ಹೊಸ ದಾಖಲೆ ಮಟ್ಟಕ್ಕೆ ಏರುವ ಸಾಧ್ಯತೆ ಇದೆ.

ಬೆಲೆ ಏರಿಳಿತಕ್ಕೆ ಏನು ಕಾರಣ?

ಅಮೆರಿಕದಲ್ಲಿ ಅಲ್ಲಿನ ಫೆಡರಲ್ ಬ್ಯಾಂಕು ಈ ಬಾರಿ ಬಡ್ಡಿ ದರ ಏರಿಕೆ ಮಾಡುವ ಸಾಧ್ಯತೆ ಇಲ್ಲದಿರುವುದರಿಂದ ಚಿನ್ನದ ಮೇಲೆ ಹೂಡಿಕೆ ಹೆಚ್ಚುವ ಸಾಧ್ಯತೆ ಇದೆ. ಉದ್ಯೋಗ ಪ್ರಮಾಣ ಹೆಚ್ಚಿರುವ ಬಗ್ಗೆ ವರದಿಗಳು ಬಂದಿವೆ. ಇದರಿಂದ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ತುಟ್ಟಿಯಾಗುತ್ತಾ ಹೋಗಬಹುದು.

ಇದನ್ನೂ ಓದಿHardwyn India: 3 ವರ್ಷದಲ್ಲಿ 43ಪಟ್ಟು ಹೆಚ್ಚು ಲಾಭ; ಹಾರ್ಡ್​ವಿನ್ ಷೇರಿಗೆ ಹಣ ಹಾಕಿದವರು ಇವತ್ತು ಕೋಟ್ಯಾಧೀಶ್ವರರು

ಭಾರತದಲ್ಲಿರುವ ಬೆಲೆ (ಏಪ್ರಿಲ್ 14ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,100 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,200 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 780 ರೂ

ಬೆಂಗಳೂರಿನಲ್ಲಿರುವ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,150 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,250 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 818 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 56,150 ರೂ
  • ಚೆನ್ನೈ: 56,700 ರೂ
  • ಮುಂಬೈ: 56,100 ರೂ
  • ದೆಹಲಿ: 56,250 ರೂ
  • ಕೋಲ್ಕತಾ: 56,100 ರೂ
  • ಕೇರಳ: 56,100 ರೂ
  • ಅಹ್ಮದಾಬಾದ್: 56,150 ರೂ
  • ಜೈಪುರ್: 56,250 ರೂ
  • ಲಕ್ನೋ: 56,250 ರೂ
  • ಭುವನೇಶ್ವರ್: 56,100 ರೂ

ಇದನ್ನೂ ಓದಿPrice Rise: ಸರ್ಕಾರಕ್ಕೆ ಹಾಲು ಸಕ್ಕರೆ ತಲೆನೋವು; ಹಣದುಬ್ಬರಕ್ಕೆ ಕಾರಣವಾಗುವ ಪ್ರಮುಖ ಆಹಾರವಸ್ತುಗಳು ಯಾವುವು?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,830 ರಿಂಗಿಟ್ (52,615 ರುಪಾಯಿ)
  • ದುಬೈ: 2272.50 ಡಿರಾಮ್ (50,604 ರುಪಾಯಿ)
  • ಅಮೆರಿಕ: 615 ಡಾಲರ್ (50,461 ರುಪಾಯಿ)
  • ಸಿಂಗಾಪುರ: 832 ಸಿಂಗಾಪುರ್ ಡಾಲರ್ (51,402 ರುಪಾಯಿ)
  • ಕತಾರ್: 2,330 ಕತಾರಿ ರಿಯಾಲ್ (52,382 ರೂ)
  • ಓಮನ್: 246 ಒಮಾನಿ ರಿಯಾಲ್ (52,302 ರುಪಾಯಿ)
  • ಕುವೇತ್: 192 ಕುವೇತಿ ದಿನಾರ್ (51,325 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,180 ರೂ
  • ಚೆನ್ನೈ: 8,180 ರೂ
  • ಮುಂಬೈ: 7,800 ರೂ
  • ದೆಹಲಿ: 7,800 ರೂ
  • ಕೋಲ್ಕತಾ: 7,800 ರೂ
  • ಕೇರಳ: 8,180 ರೂ
  • ಅಹ್ಮದಾಬಾದ್: 7,800 ರೂ
  • ಜೈಪುರ್: 7,800 ರೂ
  • ಲಕ್ನೋ: 7,800 ರೂ
  • ಭುವನೇಶ್ವರ್: 8,180 ರೂ

ಇನ್ನಷ್ಟು ವ್ಯವಹಾರ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ