AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 17th April: ನಿಲ್ಲುತ್ತಿಲ್ಲ ಚಿನ್ನ, ಬೆಳ್ಳಿ ಬೆಲೆ ಏರಿಕೆ; ಚಿನ್ನ 10 ದಿನದಲ್ಲಿ ಎಷ್ಟು ಹೆಚ್ಚಾಗಿದೆ ನೋಡಿ

Bullion Market 2024 April 17th: ಅಮೂಲ್ಯ ಲೋಹಗಳ ಮೇಲೆ ಹೂಡಿಕೆದಾರರಲ್ಲಿ ಇರುವ ಬೇಡಿಕೆ ಹೆಚ್ಚುತ್ತಲೇ ಇದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 67,950 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 74,130 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 87 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 67,950 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,550 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 17th April: ನಿಲ್ಲುತ್ತಿಲ್ಲ ಚಿನ್ನ, ಬೆಳ್ಳಿ ಬೆಲೆ ಏರಿಕೆ; ಚಿನ್ನ 10 ದಿನದಲ್ಲಿ ಎಷ್ಟು ಹೆಚ್ಚಾಗಿದೆ ನೋಡಿ
ಚಿನ್ನ
TV9 Web
| Edited By: |

Updated on: Apr 17, 2024 | 5:00 AM

Share

ಬೆಂಗಳೂರು, ಏಪ್ರಿಲ್ 16: ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and silver Rates) ಯದ್ವಾ ತದ್ವಾ ಏರುವುದು ಮುಂದುವರಿದಿದೆ. ಚಿನ್ನದ ಬೆಲೆ ಗ್ರಾಮ್​ಗೆ 90 ರೂನಷ್ಟು ಹೆಚ್ಚಾಗಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ ಒಂದು ರೂ ದುಬಾರಿಯಾಗಿದೆ. ಚಿನ್ನದ ಬೆಲೆ ಕಳೆದ 10 ದಿನದಲ್ಲಿ ಗ್ರಾಮ್​ಗೆ 340 ರೂನಷ್ಟು ಏರಿದೆ. ಮಧ್ಯಪ್ರಾಚ್ಯ ಬಿಕ್ಕಟ್ಟು ಈ ಬೆಲೆ ಏರಿಕೆಗೆ ಒಂದು ಕಾರಣವಾಗಿರಬಹುದು. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 67,950 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 74,130 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,700 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 67,950 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,550 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 17ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,950 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,130 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 870 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,950 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,130 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 855 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 67,950 ರೂ
  • ಚೆನ್ನೈ: 68,700 ರೂ
  • ಮುಂಬೈ: 67,950 ರೂ
  • ದೆಹಲಿ: 68,100 ರೂ
  • ಕೋಲ್ಕತಾ: 67,950 ರೂ
  • ಕೇರಳ: 67,950 ರೂ
  • ಅಹ್ಮದಾಬಾದ್: 68,000 ರೂ
  • ಜೈಪುರ್: 68,100 ರೂ
  • ಲಕ್ನೋ: 68,100 ರೂ
  • ಭುವನೇಶ್ವರ್: 67,950 ರೂ

ಇದನ್ನೂ ಓದಿ: ಸರ್ಕಾರಕ್ಕೆ ಬೇಕಾದಂತೆ ಆರ್​ಬಿಐ ನಡೆಯಬೇಕಿತ್ತು: ಯುಪಿಐ ಅವಧಿಯ ಪರಿಸ್ಥಿತಿ ತೆರೆದಿಟ್ಟ ಡಿ ಸುಬ್ಬಾರಾವ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,620 ರಿಂಗಿಟ್ (63,159 ರುಪಾಯಿ)
  • ದುಬೈ: 2,655 ಡಿರಾಮ್ (60,442 ರುಪಾಯಿ)
  • ಅಮೆರಿಕ: 720 ಡಾಲರ್ (60,198 ರುಪಾಯಿ)
  • ಸಿಂಗಾಪುರ: 1,006 ಸಿಂಗಾಪುರ್ ಡಾಲರ್ (61,634 ರುಪಾಯಿ)
  • ಕತಾರ್: 2,720 ಕತಾರಿ ರಿಯಾಲ್ (62,356 ರೂ)
  • ಸೌದಿ ಅರೇಬಿಯಾ: 2,720 ಸೌದಿ ರಿಯಾಲ್ (60,625 ರುಪಾಯಿ)
  • ಓಮನ್: 287 ಒಮಾನಿ ರಿಯಾಲ್ (62,326 ರುಪಾಯಿ)
  • ಕುವೇತ್: 227 ಕುವೇತಿ ದಿನಾರ್ (61,557 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,550 ರೂ
  • ಚೆನ್ನೈ: 9,050 ರೂ
  • ಮುಂಬೈ: 8,700 ರೂ
  • ದೆಹಲಿ: 8,700 ರೂ
  • ಕೋಲ್ಕತಾ: 8,700 ರೂ
  • ಕೇರಳ: 9,050 ರೂ
  • ಅಹ್ಮದಾಬಾದ್: 8,700 ರೂ
  • ಜೈಪುರ್: 8,700 ರೂ
  • ಲಕ್ನೋ: 8,700 ರೂ
  • ಭುವನೇಶ್ವರ್: 9,050 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!