AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 12th August: ಹತ್ತು ದಿನದಲ್ಲಿ ಏರಿಕೆಗಿಂತ ಇಳಿಕೆ ಹೆಚ್ಚಿದ ಚಿನ್ನ, ಬೆಳ್ಳಿ ಬೆಲೆ

Bullion Market 2024 August 12th: ಕಳೆದ 10 ದಿನದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಹೊಯ್ದಾಟಗಳಾದರೂ ಅಂತಿಮವಾಗಿ ಏರಿಕೆಗಿಂತ ಇಳಿಕೆ ತುಸು ಹೆಚ್ಚಿದೆ. ಅದರಲ್ಲೂ ಬೆಳ್ಳಿ ಬೆಲೆ ಸಾಕಷ್ಟು ತಗ್ಗಿದೆ. ಚಿನ್ನದ ಬೆಲೆಯಲ್ಲಿ ಅಲ್ಪ ಇಳಿಕೆ ಆಗಿದೆ. ಅಪರಂಜಿ ಚಿನ್ನದ ಬೆಲೆ ಇನ್ನೂ ಕೂಡ 7,100 ರೂ ಒಳಗೇ ಇದೆ.

Gold Silver Price on 12th August: ಹತ್ತು ದಿನದಲ್ಲಿ ಏರಿಕೆಗಿಂತ ಇಳಿಕೆ ಹೆಚ್ಚಿದ ಚಿನ್ನ, ಬೆಳ್ಳಿ ಬೆಲೆ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 12, 2024 | 5:00 AM

Share

ಬೆಂಗಳೂರು, ಆಗಸ್ಟ್ 12: ಬೆಳ್ಳಿ ಬೆಲೆ ಕಳೆದ 10 ದಿನದಲ್ಲಿ ಗ್ರಾಮ್​ಗೆ ನಾಲ್ಕು ರೂನಷ್ಟು ಇಳಿಕೆ ಆಗಿದೆ. ಆಗಸ್ಟ್ 3ರಂದು ಕಿಲೋ ಚಿನ್ನದ ಬೆಲೆ 87,000 ರೂ ಇತ್ತು. ಈಗ ಅದು 83,100 ರೂಗೆ ಇಳಿದಿದೆ. ಆಭರಣ ಚಿನ್ನದ ಬೆಲೆ ಹತ್ತು ದಿನದಲ್ಲಿ ಗ್ರಾಮ್​ಗೆ 35 ರೂನಷ್ಟು ಇಳಿಕೆ ಆಗಿದೆ. ಆಗಸ್ಟ್ 3ರಂದು ಅಪರಂಜಿ ಚಿನ್ನದ ಬೆಲೆ ಗ್ರಾಮ್​ಗೆ 7,069 ರೂ ಇತ್ತು. ಇವತ್ತು ಈ 24 ಕ್ಯಾರಟ್ ಚಿನ್ನದ ಬೆಲೆ 7,031 ರೂ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 64,450 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 70,310 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,310 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 64,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,065 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 12ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 64,450 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 70,310 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 831 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 64,450 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 70,310 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 806.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 64,450 ರೂ
  • ಚೆನ್ನೈ: 64,450 ರೂ
  • ಮುಂಬೈ: 64,450 ರೂ
  • ದೆಹಲಿ: 64,600 ರೂ
  • ಕೋಲ್ಕತಾ: 64,450 ರೂ
  • ಕೇರಳ: 64,450 ರೂ
  • ಅಹ್ಮದಾಬಾದ್: 64,500 ರೂ
  • ಜೈಪುರ್: 64,600 ರೂ
  • ಲಕ್ನೋ: 64,600 ರೂ
  • ಭುವನೇಶ್ವರ್: 64,450 ರೂ

ಇದನ್ನೂ ಓದಿ: ಬಿಎಸ್ಸೆನ್ನೆಲ್​ನಿಂದ 5ಜಿ ಬೆಂಬಲಿತ ಒಟಿಎ ಮತ್ತು ಯುಸಿಮ್ ಪ್ಲಾಟ್​ಫಾರ್ಮ್ ಅನಾವರಣ; ಎಲ್ಲಿ ಬೇಕಾದರೂ ಸಿಮ್ ಸ್ವಾಪಿಂಗ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,420 ರಿಂಗಿಟ್ (64,970 ರುಪಾಯಿ)
  • ದುಬೈ: 2,730 ಡಿರಾಮ್ (62,340 ರುಪಾಯಿ)
  • ಅಮೆರಿಕ: 740 ಡಾಲರ್ (62,120 ರುಪಾಯಿ)
  • ಸಿಂಗಾಪುರ: 1000 ಸಿಂಗಾಪುರ್ ಡಾಲರ್ (63,350 ರುಪಾಯಿ)
  • ಕತಾರ್: 2,770 ಕತಾರಿ ರಿಯಾಲ್ (63,770 ರೂ)
  • ಸೌದಿ ಅರೇಬಿಯಾ: 2,790 ಸೌದಿ ರಿಯಾಲ್ (62,390 ರುಪಾಯಿ)
  • ಓಮನ್: 290 ಒಮಾನಿ ರಿಯಾಲ್ (64,000 ರುಪಾಯಿ)
  • ಕುವೇತ್: 220 ಕುವೇತಿ ದಿನಾರ್ (60,780 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,065 ರೂ
  • ಚೆನ್ನೈ: 8,810 ರೂ
  • ಮುಂಬೈ: 8,310 ರೂ
  • ದೆಹಲಿ: 8,310 ರೂ
  • ಕೋಲ್ಕತಾ: 8,310 ರೂ
  • ಕೇರಳ: 8,810 ರೂ
  • ಅಹ್ಮದಾಬಾದ್: 8,310 ರೂ
  • ಜೈಪುರ್: 8,310 ರೂ
  • ಲಕ್ನೋ: 8,310 ರೂ
  • ಭುವನೇಶ್ವರ್: 8,810 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!