AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 8th August: ಮತ್ತಷ್ಟು ಕುಗ್ಗಿದ ಚಿನ್ನ, ಬೆಳ್ಳಿ ಬೆಲೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024 August 8th: ಅನಿರೀಕ್ಷಿತವಾಗಿ ಮತ್ತು ಅಸಹಜವಾಗಿ ಉಬ್ಬಿ ನಿಂತಿದ್ದ ಚಿನ್ನದ ಬೆಲೆ ಈಗ ಸಾಕಷ್ಟು ತಗ್ಗಿದೆ. ಇಂದು ಗುರುವಾರ ಚಿನ್ನದ ಬೆಲೆ ಗ್ರಾಮ್​ಗೆ 40 ರೂನಷ್ಟು ಇಳಿದಿದೆ. ಬೆಳ್ಳಿ ಬೆಲೆ 50 ಪೈಸೆ ಕಡಿಮೆ ಆಗಿದೆ.

Gold Silver Price on 8th August: ಮತ್ತಷ್ಟು ಕುಗ್ಗಿದ ಚಿನ್ನ, ಬೆಳ್ಳಿ ಬೆಲೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 08, 2024 | 5:00 AM

Share

ಬೆಂಗಳೂರು, ಆಗಸ್ಟ್ 8: ಚಿನ್ನ, ಬೆಳ್ಳಿ ಬೆಲೆ ಇಳಿಕೆಯ ಟ್ರೆಂಡ್ ಮುಂದುವರಿದಿದೆ. ಚಿನ್ನದ ಬೆಲೆ ಇವತ್ತು ಗ್ರಾಮ್​ಗೆ 40 ರೂನಷ್ಟು ಕಡಿಮೆ ಆಗಿದೆ. ಒಂದು ಗ್ರಾಮ್ ಆಭರಣ ಚಿನ್ನದ (22 ಕ್ಯಾರಟ್) ಬೆಲೆ ಇವತ್ತು 6,350 ರೂ ಇದೆ. ಭಾರತದಲ್ಲಿ ಮಾತ್ರವಲ್ಲ, ಜಾಗತಿಕವಾಗಿ ಎಲ್ಲೆಡೆ ಚಿನ್ನದ ಬೆಲೆ ತಗ್ಗಿದೆ. ಬೆಳ್ಳಿ ಬೆಲೆಯೂ ಇಳಿಕೆ ಆಗಿದೆ. ಕಳೆದ ಕೆಲ ವಾರಗಳ ಹಿಂದೆ ಅಸಹಜವಾಗಿ ಉಬ್ಬಿಹೋಗಿದ್ದ ಚಿನಿವಾರ ಪೇಟೆ ಈಗ ಪ್ರೈಸ್ ಕರೆಕ್ಷನ್ ಹಂತಕ್ಕೆ ಹೋದಂತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 63,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 69,270 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,200 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 63,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,100 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 8ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 69,270 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 820 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 69,270 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 810 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 63,500 ರೂ
  • ಚೆನ್ನೈ: 63,300 ರೂ
  • ಮುಂಬೈ: 63,500 ರೂ
  • ದೆಹಲಿ: 63,650 ರೂ
  • ಕೋಲ್ಕತಾ: 63,500 ರೂ
  • ಕೇರಳ: 63,500 ರೂ
  • ಅಹ್ಮದಾಬಾದ್: 63,550 ರೂ
  • ಜೈಪುರ್: 64,650 ರೂ
  • ಲಕ್ನೋ: 64,650 ರೂ
  • ಭುವನೇಶ್ವರ್: 63,500 ರೂ

ಇದನ್ನೂ ಓದಿ: ಇನ್ಕಮ್ ಟ್ಯಾಕ್ಸ್ ನೋಟೀಸ್ ಬಂದಿದೆಯಾ? ಭಯ ಬೀಳದೆ ಹೀಗೆ ಮಾಡಿ…

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,420 ರಿಂಗಿಟ್ (63,760 ರುಪಾಯಿ)
  • ದುಬೈ: 2,680 ಡಿರಾಮ್ (61,300 ರುಪಾಯಿ)
  • ಅಮೆರಿಕ: 720 ಡಾಲರ್ (60,870 ರುಪಾಯಿ)
  • ಸಿಂಗಾಪುರ: 990 ಸಿಂಗಾಪುರ್ ಡಾಲರ್ (62,370 ರುಪಾಯಿ)
  • ಕತಾರ್: 2,730 ಕತಾರಿ ರಿಯಾಲ್ (62,850 ರೂ)
  • ಸೌದಿ ಅರೇಬಿಯಾ: 2,750 ಸೌದಿ ರಿಯಾಲ್ (61,470 ರುಪಾಯಿ)
  • ಓಮನ್: 290 ಒಮಾನಿ ರಿಯಾಲ್ (63,020 ರುಪಾಯಿ)
  • ಕುವೇತ್: 220 ಕುವೇತಿ ದಿನಾರ್ (59,830 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,100 ರೂ
  • ಚೆನ್ನೈ: 8,700 ರೂ
  • ಮುಂಬೈ: 8,200 ರೂ
  • ದೆಹಲಿ: 8,200 ರೂ
  • ಕೋಲ್ಕತಾ: 8,200 ರೂ
  • ಕೇರಳ: 8,700 ರೂ
  • ಅಹ್ಮದಾಬಾದ್: 8,200 ರೂ
  • ಜೈಪುರ್: 8,200 ರೂ
  • ಲಕ್ನೋ: 8,200 ರೂ
  • ಭುವನೇಶ್ವರ್: 8,700 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ