AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಈ ವರ್ಷದಲ್ಲಿ ಮೊದಲ ಬಾರಿಗೆ ಭಾರತದಲ್ಲಿ ಚಿನ್ನದ ದರ ಇಳಿಕೆ

ಮೊದಲ ವಾರಕ್ಕೆ ಹೋಲಿಸಿದರೆ ಈ ವಾರದಲ್ಲಿ ವ್ಯಾಪಾರಸ್ಥರು 2 ಡಾಲರ್​ನಷ್ಟು ಚಿನ್ನಕ್ಕೆ ರಿಯಾಯತಿ ನೀಡಿದ್ದಾರೆ ಎಂದು ರಾಯಿಟರ್ಸ್​​ ಸುದ್ದಿ ಸಂಸ್ಥೆ ವರದಿ ಮಾಡಿದೆ.

Gold Price Today: ಈ ವರ್ಷದಲ್ಲಿ ಮೊದಲ ಬಾರಿಗೆ ಭಾರತದಲ್ಲಿ ಚಿನ್ನದ ದರ ಇಳಿಕೆ
ಚಿನ್ನಾಭರಣ (ಸಾಂದರ್ಭಿಕ ಚಿತ್ರ)
shruti hegde
|

Updated on:May 03, 2021 | 8:06 AM

Share

ಕೊವಿಡ್​19 ಸಾಂಕ್ರಾಮಿಕ ಕಾಯಿಲೆ ದೇಶದಾದ್ಯಂತ ಹೆಚ್ಚಾಗಿ ಹರಡುತ್ತಿದ್ದಂತೆಯೇ ಕೊರೊನಾ ತಡೆಯಲು ಸರ್ಕಾರ ಕೆಲವು ನಿರ್ಬಂಧಗಳನ್ನು ಹೇರಿದೆ. ಇದು ಚಿನ್ನದ ಬೇಡಿಕೆಯ ಮೇಲೂ ಪರಿಣಾಮ ಬೀರಿದ್ದು, ಸದ್ಯದ ಪರಿಸ್ಥಿತಿಯಲ್ಲಿ ಚಿನ್ನದ ದರ ಕಡಿಮೆಯಾಗಿದೆ.  ಮೇಲೆ ರಿಯಾಯತಿ ನೀಡಲಾಗಿದೆ. ಮೊದಲ ವಾರಕ್ಕೆ ಹೋಲಿಸಿದರೆ ಈ ವಾರದಲ್ಲಿ ವ್ಯಾಪಾರಸ್ಥರು 2 ಡಾಲರ್​ನಷ್ಟು ಚಿನ್ನದ ದರ ಕಡಿಮೆ ಮಾಡಿದ್ದಾರೆ ಎಂದು ರಾಯಿಟರ್ಸ್​​ ಸುದ್ದಿಸಂಸ್ಥೆ ವರದಿ ಮಾಡಿದೆ.

ಆಮದು ಮಾಡಿಕೊಳ್ಳುವ ಚಿನ್ನದ ಮೇಲೆ ಭಾರತದಲ್ಲಿ ಶೇ 10.57 ಆಮದು ಸುಂಕ ಮತ್ತು ಶೇ 3 ಜಿಎಸ್​ಟಿ ತೆರಿಗೆ ವಿಧಿಸಲಾಗುತ್ತದೆ. ಬಹುತೇಕ ಎಲ್ಲಾ ರಾಜ್ಯಗಳಲ್ಲಿಯೂ ಕೊವಿಡ್-​19 ನಿಯಂತ್ರಣಕ್ಕೆ ಸಂಬಂಧಿಸಿದ ನಿರ್ಬಂಧಗಳು ಇರುವುದಿಂದ ಚಿನ್ನಕ್ಕೆ ರಿಯಾಯತಿ ನೀಡಲಾಗಿದೆ ಎಂದು ಮುಂಬೈ ಮೂಲದ ವ್ಯಾಪರಿಯೊಬ್ಬರು ತಿಳಿಸಿದ್ದಾರೆ. ಕಳೆದ ಮಾರ್ಚ್​ ತಿಂಗಳಿನಲ್ಲಿ ಚಿನ್ನದ ಬೇಡಿಕೆಯು 140 ಟನ್​ಗಳಿಗೆ ಅಂದರೆ ಶೇ 37ರಷ್ಟು ಬೇಡಿಕೆ ಏರಿಕೆಯಾಗಿದೆ ಎಂದು ವರ್ಲ್ಡ್​ ಗೋಲ್ಡ್​ ಕೌನ್ಸಿಲ್​ ತಿಳಿಸಿದೆ.

ಮುಂಬರುವ ದಿನಗಳಲ್ಲಿ 10 ಗ್ರಾಂ ಚಿನ್ನದ ದರ ಶೇ 0.13ರಷ್ಟು ಹೆಚ್ಚಳವಾಗಿ, 46,785 ರೂಪಾಯಿ ಆಗುವ ಸಾಧ್ಯತೆ ಇದೆ. ಹಾಗೆಯೇ ಬೆಳ್ಳಿ ದರ 1 ಕೆಜಿಗೆ 68,423 ರೂಪಾಯಿಗೆ ಏರಿಕೆಯಾಗುವ ಸಾಧ್ಯತೆ ಇದೆ. ಪ್ರತಿ ತಿಂಗಳಿಗೂ ಭಾರತದಲ್ಲಿ 10 ಗ್ರಾಂ ಗೆ 1,800ರಂತೆ ದರ ಏರಿಕೆಯಾಗಿದೆ. ಮುಂಬರುವ ದಿನಗಳಲ್ಲಿ ಎಂಸಿಎಕ್ಸ್​ ಗೋಲ್ಡ್​ 49,000 ವರೆಗೂ ತಲುಪಬಹುದು. ಚಿನ್ನದ ದರ ಏರಿಳಿಕೆ ಹೊಂದಿದ್ದರೂ ಕೂಡಾ ಟ್ರೇಡರ್ಸ್,​ ಚಿನ್ನ ಖರೀದಿಗೆ ಮುಂದಾಗುತ್ತಾರೆ ಎಂದು ಎಂಸಿಎಕ್ಸ್​ ಗೋಲ್ಡ್​ ತಿಳಿಸಿದೆ. ಚಿನ್ನದ ಬೇಡಿಕೆ ಪ್ರತಿದಿನದ ಏರಿಳಿತದ ಮೇಲೆ ಅವಲಂಬಿತವಾಗಿದೆ.

ಇದನ್ನೂ ಓದಿ: Gold Rate Today: ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿ ಚಿನ್ನದ ದರ ಇಳಿಕೆ, ಹೈದರಾಬಾದ್​ನಲ್ಲಿ ಏರಿದ ಚಿನ್ನದ ಬೆಲೆ; ಸಂಪೂರ್ಣ ವಿವರ ಇಲ್ಲಿದೆ

Published On - 2:10 pm, Sun, 2 May 21

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್