AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 15th February: ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ; ಬೆಳ್ಳಿಯೂ ಇನ್ನಷ್ಟು ಅಗ್ಗ; ಇಲ್ಲಿದೆ ನೋಡಿ ಇವತ್ತಿನ ದರಪಟ್ಟಿ

Bullion Market 2024, February 15th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,180 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 74 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 57,000 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,285 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 15th February: ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ; ಬೆಳ್ಳಿಯೂ ಇನ್ನಷ್ಟು ಅಗ್ಗ; ಇಲ್ಲಿದೆ ನೋಡಿ ಇವತ್ತಿನ ದರಪಟ್ಟಿ
ಚಿನ್ನ
TV9 Web
| Edited By: |

Updated on: Feb 15, 2024 | 6:00 AM

Share

ಬೆಂಗಳೂರು, ಫೆಬ್ರುವರಿ 15: ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಎರಡೂ ಇಂದು ಕಡಿಮೆ ಆಗಿವೆ. ಚಿನ್ನದ ಬೆಲೆ ಗ್ರಾಮ್​ಗೆ ಬರೋಬ್ಬರಿ 60 ರೂನಷ್ಟು ಕುಸಿತ ಕಂಡಿದೆ. ಇತ್ತೀಚಿನ ತಿಂಗಳಲ್ಲಿ ಇದು ಕಂಡ ಅತಿದೊಡ್ಡ ಇಳಿಕೆ ಎನಿಸಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 15 ಪೈಸೆಯಷ್ಟು ಇಳಿಕೆ ಆಗಿದೆ. ಬೆಂಗಳೂರು ಹೊರತುಪಡಿಸಿ ಉಳಿದ ಕಡಿಮೆ ಬೆಳ್ಳಿ ಸ್ವಲ್ಪ ಅಗ್ಗವಾಗಿದೆ. ವಿದೇಶಗಳಲ್ಲೂ ಬಹಳ ಕಡೆ ಚಿನ್ನದ ಬೆಲೆ ಇಳಿಕೆ ಮುಂದುವರಿದಿದೆ. ಅಮೆರಿಕದಂಥ ಕೆಲ ದೇಶಗಳಲ್ಲಿ ಯಥಾಸ್ಥಿತಿ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,180 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,400 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 57,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,285 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರುವರಿ 15ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,180 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 740 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,180 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 728.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 57,000 ರೂ
  • ಚೆನ್ನೈ: 57,500 ರೂ
  • ಮುಂಬೈ: 57,000 ರೂ
  • ದೆಹಲಿ: 57,150 ರೂ
  • ಕೋಲ್ಕತಾ: 57,000 ರೂ
  • ಕೇರಳ: 57,000 ರೂ
  • ಅಹ್ಮದಾಬಾದ್: 57,050 ರೂ
  • ಜೈಪುರ್: 57,150 ರೂ
  • ಲಕ್ನೋ: 57,150 ರೂ
  • ಭುವನೇಶ್ವರ್: 57,000 ರೂ

ಇದನ್ನೂ ಓದಿ: ಸ್ವಾಮಿನಾಥನ್ ಆಯೋಗದ ಎಂಎಸ್​ಪಿ ಸೂತ್ರದ ಅನುಷ್ಠಾನ ಸಾಧ್ಯವಾ? ತಜ್ಞರ ಅನಿಸಿಕೆ ಇದು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,060 ರಿಂಗಿಟ್ (53,074 ರುಪಾಯಿ)
  • ದುಬೈ: 2,232.50 ಡಿರಾಮ್ (50,473 ರುಪಾಯಿ)
  • ಅಮೆರಿಕ: 620 ಡಾಲರ್ (51,485 ರುಪಾಯಿ)
  • ಸಿಂಗಾಪುರ: 836 ಸಿಂಗಾಪುರ್ ಡಾಲರ್ (51,424 ರುಪಾಯಿ)
  • ಕತಾರ್: 2,300 ಕತಾರಿ ರಿಯಾಲ್ (52,376 ರೂ)
  • ಸೌದಿ ಅರೇಬಿಯಾ: 2,300 ಸೌದಿ ರಿಯಾಲ್ (50,922 ರುಪಾಯಿ)
  • ಓಮನ್: 243 ಒಮಾನಿ ರಿಯಾಲ್ (52,411 ರುಪಾಯಿ)
  • ಕುವೇತ್: 192.50 ಕುವೇತಿ ದಿನಾರ್ (51,839 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,285 ರೂ
  • ಚೆನ್ನೈ: 7,550 ರೂ
  • ಮುಂಬೈ: 7,400 ರೂ
  • ದೆಹಲಿ: 7,400 ರೂ
  • ಕೋಲ್ಕತಾ: 7,400 ರೂ
  • ಕೇರಳ: 7,550 ರೂ
  • ಅಹ್ಮದಾಬಾದ್: 7,400 ರೂ
  • ಜೈಪುರ್: 7,400 ರೂ
  • ಲಕ್ನೋ: 7,400 ರೂ
  • ಭುವನೇಶ್ವರ್: 7,550 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು
ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು
ಸಿಎಂ ಸಿದ್ದರಾಮಯ್ಯ, ಸುನಿಲ್ ಕುಮಾರ್ ನಡುವೆ ಜಟಾಪಟಿ
ಸಿಎಂ ಸಿದ್ದರಾಮಯ್ಯ, ಸುನಿಲ್ ಕುಮಾರ್ ನಡುವೆ ಜಟಾಪಟಿ