AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 17th January: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಏರಿಕೆ

Bullion Market 2024 January 17th: ನಿನ್ನೆ 50 ರೂ ಏರಿಕೆ ಕಂಡಿದ್ದ ಚಿನ್ನದ ಬೆಲೆ ಇಂದು 60 ರೂನಷ್ಟು ಹೆಚ್ಚಿದೆ. ಎರಡು ದಿನದಲ್ಲಿ ಗ್ರಾಮ್​ಗೆ 100 ರೂಗೂ ಹೆಚ್ಚು ಮೊತ್ತದಷ್ಟು ಬೆಲೆ ಏರಿಕೆ ಆಗಿದೆ. ಅಪರಂಜಿ ಚಿನ್ನದ ಬೆಲೆ 8,127 ರೂ ಆಗಿದೆ. ಬೆಳ್ಳಿ ಬೆಲೆ 96.50 ರೂ ಮತ್ತು 104 ರೂಗೆ ಏರಿದೆ. ಬೆಂಗಳೂರಿನಲ್ಲಿ ಬೆಲೆ 96.50 ರೂ ಆಗಿದೆ.

Gold Silver Price on 17th January: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಏರಿಕೆ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 17, 2025 | 10:15 AM

Share

ಬೆಂಗಳೂರು, ಜನವರಿ 17: ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ಮುಂದುವರಿದಿದೆ. ಇಂದು ಶುಕ್ರವಾರ ಈ ಎರಡೂ ಲೋಹಗಳ ಬೆಲೆಗಳಲ್ಲಿ ಗಣನೀಯ ಹೆಚ್ಚಳವಾಗಿದೆ. ಆಭರಣ ಚಿನ್ನದ ಬೆಲೆ ಗ್ರಾಮ್​ಗೆ 60 ರೂನಷ್ಟು ಹೆಚ್ಚಳವಾಗಿದೆ. ಬೆಳ್ಳಿ ಬೆಲೆ ನಿನ್ನೆ ಗ್ರಾಮ್​​ಗೆ 2 ರೂ ಏರಿಕೆ ಆಗಿದ್ದರೆ, ಇವತ್ತು ಒಂದು ರೂ ಹೆಚ್ಚಳವಾಗಿದೆ. ಅಪರಂಜಿ ಚಿನ್ನದ ಬೆಲೆ 8,062 ರೂ ಇದ್ದದ್ದು 8,127 ರೂಗೆ ಹೆಚ್ಚಿದೆ. 22 ಕ್ಯಾರಟ್ ಚಿನ್ನದ ಬೆಲೆ 7,450 ರೂಗೆ ಏರಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ 96.50 ರೂಗೆ ಏರಿದೆ. ಚೆನ್ನೈ ಮೊದಲಾದ ಕಡೆ ಅದರ ಬೆಲೆ 104 ರೂ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 74,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 81,270 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,650 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 74,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,650 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜನವರಿ 17ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 81,270 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,960 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 965 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 81,270 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 965 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 74,500 ರೂ
  • ಚೆನ್ನೈ: 74,500 ರೂ
  • ಮುಂಬೈ: 74,500 ರೂ
  • ದೆಹಲಿ: 74,650 ರೂ
  • ಕೋಲ್ಕತಾ: 74,500 ರೂ
  • ಕೇರಳ: 74,500 ರೂ
  • ಅಹ್ಮದಾಬಾದ್: 74,550 ರೂ
  • ಜೈಪುರ್: 74,650 ರೂ
  • ಲಕ್ನೋ: 74,650 ರೂ
  • ಭುವನೇಶ್ವರ್: 74,500 ರೂ

ಇದನ್ನೂ ಓದಿ: ಮೊಬೈಲ್ ನಂಬರ್ ರೀತಿ ನಿಮ್ಮ ಹೆಲ್ತ್ ಇನ್ಷೂರೆನ್ಸ್ ಪಾಲಿಸಿಯನ್ನೂ ಪೋರ್ಟ್ ಮಾಡಬಹುದಾ? ಇಲ್ಲಿದೆ ಡೀಟೇಲ್ಸ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,630 ರಿಂಗಿಟ್ (69,810 ರುಪಾಯಿ)
  • ದುಬೈ: 3,045 ಡಿರಾಮ್ (71,780 ರುಪಾಯಿ)
  • ಅಮೆರಿಕ: 780 ಡಾಲರ್ (67,530 ರುಪಾಯಿ)
  • ಸಿಂಗಾಪುರ: 1,086 ಸಿಂಗಾಪುರ್ ಡಾಲರ್ (68,820 ರುಪಾಯಿ)
  • ಕತಾರ್: 3,080 ಕತಾರಿ ರಿಯಾಲ್ (73,160 ರೂ)
  • ಸೌದಿ ಅರೇಬಿಯಾ: 3,090 ಸೌದಿ ರಿಯಾಲ್ (71,310 ರುಪಾಯಿ)
  • ಓಮನ್: 322.50 ಒಮಾನಿ ರಿಯಾಲ್ (72,530 ರುಪಾಯಿ)
  • ಕುವೇತ್: 249.80 ಕುವೇತಿ ದಿನಾರ್ (70,140 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,650 ರೂ
  • ಚೆನ್ನೈ: 10,400 ರೂ
  • ಮುಂಬೈ: 9,650 ರೂ
  • ದೆಹಲಿ: 9,650 ರೂ
  • ಕೋಲ್ಕತಾ: 9,650 ರೂ
  • ಕೇರಳ: 10,400 ರೂ
  • ಅಹ್ಮದಾಬಾದ್: 9,650 ರೂ
  • ಜೈಪುರ್: 9,650 ರೂ
  • ಲಕ್ನೋ: 9,650 ರೂ
  • ಭುವನೇಶ್ವರ್: 10,400 ರೂ
  • ಪುಣೆ: 9,650

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ