AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 16 June: ಅಮೆರಿಕ ಎಫೆಕ್ಟ್; ಭರ್ಜರಿಯಾಗಿ ಇಳಿಯುತ್ತಿರುವ ಚಿನ್ನ ಮತ್ತು ಬೆಳ್ಳಿ ಬೆಲೆಗಳು; ಎಷ್ಟಿದೆ ನೋಡಿ ಇವತ್ತಿನ ರೇಟ್?

Bullion Market 2023, June 16th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,670 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 73.10 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 16 June: ಅಮೆರಿಕ ಎಫೆಕ್ಟ್; ಭರ್ಜರಿಯಾಗಿ ಇಳಿಯುತ್ತಿರುವ ಚಿನ್ನ ಮತ್ತು ಬೆಳ್ಳಿ ಬೆಲೆಗಳು; ಎಷ್ಟಿದೆ ನೋಡಿ ಇವತ್ತಿನ ರೇಟ್?
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 16, 2023 | 5:00 AM

Share

ಮುಖ್ಯಾಂಶಗಳು

  • ಭಾರತದಲ್ಲಿ ಜೂನ್ 16ರಂದು 22 ಕ್ಯಾರಟ್​ನ 10 ಗ್ರಾಮ್ ಚಿನ್ನದ ಬೆಲೆ 54,700 ರುಪಾಯಿ. 100 ಗ್ರಾಮ್ ಬೆಳ್ಳಿ ಬೆಲೆ 7,310 ರೂ ಇದೆ.
  • ದುಬೈನಲ್ಲಿ ಚಿನ್ನದ ಬೆಲೆ ಸತತವಾಗಿ ಇಳಿಮುಖವಾಗಿ ಈಗ 49,000 ರೂ ಮಟ್ಟಕ್ಕಿಂತ ಕೆಳಗೆ ಬಂದಿದೆ. ಅಮೆರಿಕ, ಸಿಂಗಾಪುರ ಮತ್ತು ಕುವೇತ್​ನಲ್ಲೂ 50,000 ರೂಗಿಂತ ಕೆಳಗಿಳಿದಿದೆ.
  • ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 54,750 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,425 ರೂ ಇದೆ.

ಬೆಂಗಳೂರು: ದೇಶ ವಿದೇಶಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳ (Gold and Silver Prices) ಭರ್ಜರಿ ಇಳಿಕೆ ಮುಂದುವರಿದಿದೆ. ದುಬೈನಲ್ಲಿ ಬಹಳ ದಿನಗಳ ಬಳಿಕ ಚಿನ್ನದ ಬೆಲೆ 49,000 ರೂ ಒಳಗೆ ಬಂದಿದೆ. ಭಾರತದ ವಿವಿಧೆಡೆಯೂ ಚಿನ್ನ ಅಗ್ಗಗೊಂಡಿದೆ. ಬೆಳ್ಳಿ ಬೆಲೆಯೂ ಬಹಳ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,050 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,050 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,400 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,425 ರುಪಾಯಿಯಲ್ಲಿ ಇದೆ.

ಚಿನ್ನದ ಬೆಲೆ ಇಳಿಕೆಗೆ ಏನು ಕಾರಣ?

ಅಮೆರಿಕದಲ್ಲಿನ ಫೆಡರಲ್ ಬ್ಯಾಂಕು ಬಡ್ಡಿ ದರ ಏರಿಕೆಗೆ ಅಲ್ಪವಿರಾಮ ಕೊಟ್ಟಿದೆಯಾದರೂ ಈ ವರ್ಷದಲ್ಲಿ ಎರಡು ಬಾರಿ ಬಡ್ಡಿ ದರ ಹೆಚ್ಚಿಸುವುದಾಗಿ ಸುಳಿವು ಕೊಟ್ಟಿದೆ. ಬೆಲೆ ಏರಿಕೆ ನಿರೀಕ್ಷಿಸದ ಹೂಡಿಕೆದಾರರಲ್ಲಿ ಇದು ತುಸು ಆತಂಕ ಭರಿಸಿದೆ. ಇದು ಚಿನ್ನದ ಬೆಲೆ ಮೇಲೆ ಪರಿಣಾಮ ಬೀರುತ್ತಿದೆ.

ಆದರೆ, ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿBHEL: ಬೆಂಗಳೂರಿನ ಬಿಎಚ್​ಇಎಲ್​ನಿಂದ ತಯಾರಾಗಲಿವೆ 80 ವಂದೇ ಭಾರತ್ ಟ್ರೈನುಗಳು; 24 ಸಾವಿರ ಕೋಟಿ ರೂ ಗುತ್ತಿಗೆ ನೀಡಿದ ಭಾರತೀಯ ರೈಲ್ವೆ

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 16ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,670 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 731 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,750 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,720 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 74.25 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 54,750 ರೂ
  • ಚೆನ್ನೈ: 55,050 ರೂ
  • ಮುಂಬೈ: 54,700 ರೂ
  • ದೆಹಲಿ: 54,850 ರೂ
  • ಕೋಲ್ಕತಾ: 54,700 ರೂ
  • ಕೇರಳ: 54,700 ರೂ
  • ಅಹ್ಮದಾಬಾದ್: 54,750 ರೂ
  • ಜೈಪುರ್: 54,850 ರೂ
  • ಲಕ್ನೋ: 54,850 ರೂ
  • ಭುವನೇಶ್ವರ್: 54,700 ರೂ

ಇದನ್ನೂ ಓದಿSovereign Gold Bond: ಸಾವರಿನ್ ಗೋಲ್ಡ್ ಬಾಂಡ್ ಜೂನ್ 17ರಿಂದ: ಅಮೋಘ ಹೂಡಿಕೆ ಅವಕಾಶ ಕಳೆದುಕೊಳ್ಳದಿರಿ; ಏನಿದು ಸ್ಕೀಮ್, ಹೆಚ್ಚಿನ ಮಾಹಿತಿ ತಿಳಿಯಿರಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,870 ರಿಂಗಿಟ್ (50,959 ರುಪಾಯಿ)
  • ದುಬೈ: 2167.50 ಡಿರಾಮ್ (48,472 ರುಪಾಯಿ)
  • ಅಮೆರಿಕ: 600 ಡಾಲರ್ (49,282 ರುಪಾಯಿ)
  • ಸಿಂಗಾಪುರ: 808 ಸಿಂಗಾಪುರ್ ಡಾಲರ್ (49,443 ರುಪಾಯಿ)
  • ಕತಾರ್: 2,235 ಕತಾರಿ ರಿಯಾಲ್ (50,420 ರೂ)
  • ಓಮನ್: 236.50 ಒಮಾನಿ ರಿಯಾಲ್ (50,452 ರುಪಾಯಿ)
  • ಕುವೇತ್: 185.50 ಕುವೇತಿ ದಿನಾರ್ (49,619 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,425 ರೂ
  • ಚೆನ್ನೈ: 7,750 ರೂ
  • ಮುಂಬೈ: 7,310 ರೂ
  • ದೆಹಲಿ: 7,310 ರೂ
  • ಕೋಲ್ಕತಾ: 7,310 ರೂ
  • ಕೇರಳ: 7,750 ರೂ
  • ಅಹ್ಮದಾಬಾದ್: 7,310 ರೂ
  • ಜೈಪುರ್: 7,310 ರೂ
  • ಲಕ್ನೋ: 7,310 ರೂ
  • ಭುವನೇಶ್ವರ್: 7,750 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ