Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಶುಕ್ರವಾರ ಜಿಗಿತ; ಇಲ್ಲಿದೆ ದರಪಟ್ಟಿ

Bullion Market 2025 March 28th: ಸತತವಾಗಿ ಏರಿಕೆ ಆಗುತ್ತಿರುವ ಚಿನ್ನದ ಬೆಲೆ ಇಂದು ಶುಕ್ರವಾರ ಹೈಜಂಪ್ ಮಾಡಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 8,340 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 9,098 ರೂಗೆ ಏರಿದೆ. ಬೆಳ್ಳಿ ಬೆಲೆ ಒಮ್ಮೆಗೇ 3 ರೂನಷ್ಟು ಹೆಚ್ಚಳ ಆಗಿದೆ. ಬೆಂಗಳೂರಿನಲ್ಲಿ ಅದರ ಬೆಲೆ 102 ರೂನಿಂದ 105 ರೂಗೆ ಜಿಗಿದಿದೆ.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಶುಕ್ರವಾರ ಜಿಗಿತ; ಇಲ್ಲಿದೆ ದರಪಟ್ಟಿ
ಚಿನ್ನ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Mar 28, 2025 | 11:30 AM

ಬೆಂಗಳೂರು, ಮಾರ್ಚ್ 28: ಚಿನ್ನ ಮತ್ತು ಬೆಳ್ಳಿ ಬೆಲೆ (Gold and Silver rates) ಇವತ್ತು ಶುಕ್ರವಾರ ಭಾರೀ ಪ್ರಮಾಣದಲ್ಲಿ ಏರಿಕೆ ಆಗಿದೆ. ಎರಡೂ ಕೂಡ ಹೊಸ ಎತ್ತರಕ್ಕೆ ಹೋಗಿದೆ. ಬೆಳ್ಳಿ ಬೆಲೆಯಂತೂ ಒಂದೇ ದಿನಕ್ಕೆ ಗ್ರಾಮ್​​ಗೆ 3 ರೂನಷ್ಟು ಜಂಪ್ ಕಂಡಿದೆ. ಇದು ಒಂದು ದಿನದಲ್ಲಿ ಬೆಳ್ಳಿ ಬೆಲೆ ಕಂಡ ಅತಿ ದೊಡ್ಡ ಹೆಚ್ಚಳಗಳಲ್ಲಿ ಒಂದು. ಚಿನ್ನದ ಬೆಲೆಯೂ ಗ್ರಾಮ್​​ಗೆ 100 ರೂಗೂ ಹೆಚ್ಚಿನ ಮೊತ್ತದಷ್ಟು ಏರಿಕೆ ಆಗಿದೆ. ಅಪರಂಜಿ ಚಿನ್ನದ ಬೆಲೆ 9,100 ರೂ ಗಡಿ ಸಮೀಪಕ್ಕೆ ಹೋಗಿದೆ. ಆಭರಣ ಚಿನ್ನದ ಬೆಲೆಯೂ 8,340 ರೂಗೆ ಏರಿದೆ. ಬೆಳ್ಳಿ ಬೆಲೆ ಗ್ರಾಮ್​​ಗೆ 105 ರೂಗೆ ಏರಿದೆ. ಇದು ಬೆಂಗಳೂರಿನಲ್ಲಿ ದಾಖಲೆಯ ಬೆಳ್ಳಿ ಬೆಲೆ. ಚೆನ್ನೈ ಮೊದಲಾದ ಕಡೆ ಬೆಳ್ಳಿ ಬೆಲೆ 114 ರೂಗೆ ಹೆಚ್ಚಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 83,400 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 90,980 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 83,400 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,500 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 28ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 83,400 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 90,980 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 68,240 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,050 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 83,400 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 90,980 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,050 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 83,400 ರೂ
  • ಚೆನ್ನೈ: 83,400 ರೂ
  • ಮುಂಬೈ: 83,400 ರೂ
  • ದೆಹಲಿ: 83,550 ರೂ
  • ಕೋಲ್ಕತಾ: 83,400 ರೂ
  • ಕೇರಳ: 83,400 ರೂ
  • ಅಹ್ಮದಾಬಾದ್: 83,450 ರೂ
  • ಜೈಪುರ್: 83,550 ರೂ
  • ಲಕ್ನೋ: 83,550 ರೂ
  • ಭುವನೇಶ್ವರ್: 83,400 ರೂ

ಇದನ್ನೂ ಓದಿ: ಒಂದಕ್ಕಿಂತ ಹೆಚ್ಚು ಹೆಲ್ತ್ ಇನ್ಷೂರೆನ್ಸ್ ಪಾಲಿಸಿಗಳನ್ನು ಒಂದೇ ಕ್ಲೇಮ್​​ಗೆ ಬಳಸಬಹುದಾ? ಇಲ್ಲಿದೆ ಮಾಹಿತಿ

ಇದನ್ನೂ ಓದಿ
Image
ಗೋಲ್ಡ್ ಮಾನಿಟೈಸೇಶನ್ ಸ್ಕೀಮ್ ನಿಲ್ಲಿಸಿದ ಸರ್ಕಾರ
Image
ಚಿನ್ನದ ಬೆಲೆ ಇಳಿಕೆ ಯಾವಾಗ?
Image
ದುಬೈನಿಂದ ಎಷ್ಟು ಚಿನ್ನ ತಂದರೆ ಎಷ್ಟು ಟ್ಯಾಕ್ಸ್?
Image
ಮುಂಬರುವ ದಿನಗಳಲ್ಲಿ ಚಿನ್ನಕ್ಕೆ ಪ್ರಾಶಸ್ತ್ಯ: ಸಿಇಎ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,260 ರಿಂಗಿಟ್ (82,280 ರುಪಾಯಿ)
  • ದುಬೈ: 3,395 ಡಿರಾಮ್ (79,140 ರುಪಾಯಿ)
  • ಅಮೆರಿಕ: 925 ಡಾಲರ್ (79,210 ರುಪಾಯಿ)
  • ಸಿಂಗಾಪುರ: 1,282 ಸಿಂಗಾಪುರ್ ಡಾಲರ್ (81,840 ರುಪಾಯಿ)
  • ಕತಾರ್: 3,440 ಕತಾರಿ ರಿಯಾಲ್ (80,800 ರೂ)
  • ಸೌದಿ ಅರೇಬಿಯಾ: 3,470 ಸೌದಿ ರಿಯಾಲ್ (79,210 ರುಪಾಯಿ)
  • ಓಮನ್: 362 ಒಮಾನಿ ರಿಯಾಲ್ (80,510 ರುಪಾಯಿ)
  • ಕುವೇತ್: 280.50 ಕುವೇತಿ ದಿನಾರ್ (77,890 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 10,800 ರೂ
  • ಚೆನ್ನೈ: 11,400 ರೂ
  • ಮುಂಬೈ: 10,500 ರೂ
  • ದೆಹಲಿ: 10,500 ರೂ
  • ಕೋಲ್ಕತಾ: 10,500 ರೂ
  • ಕೇರಳ: 11,400 ರೂ
  • ಅಹ್ಮದಾಬಾದ್: 10,500 ರೂ
  • ಜೈಪುರ್: 10,500 ರೂ
  • ಲಕ್ನೋ: 10,500 ರೂ
  • ಭುವನೇಶ್ವರ್: 11,400 ರೂ
  • ಪುಣೆ: 10,500

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ