AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಮತ್ತೆ ಕುಸಿತ; ಇಲ್ಲಿದೆ ದರಪಟ್ಟಿ

Bullion Market 2025 April 6th: ಚಿನ್ನ, ಬೆಳ್ಳಿ ಬೆಲೆಗಳ ಇಳಿಕೆ ಮುಂದುವರಿದಿದೆ. ಚಿನ್ನದ ಬೆಲೆ ಗರಿಷ್ಠ ಮಟ್ಟದಿಂದ 250 ರೂ ಇಳಿದರೆ, ಬೆಳ್ಳಿ ಬೆಲೆ 11 ರೂ ಕುಸಿದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್ ಚಿನ್ನದ ಬೆಲೆ 8,310 ರೂ, 24 ಕ್ಯಾರಟ್ ಚಿನ್ನದ ಬೆಲೆ 9,066 ರೂಗೆ ಇಳಿಕೆ ಆಗಿದೆ. ಬೆಳ್ಳಿ ಬೆಲೆ 94 ರೂಗೆ ಕುಸಿದಿದೆ. ಚೆನ್ನೈ ಮೊದಲಾದೆಡೆ ಬೆಲೆ 103 ರೂಗೆ ಇಳಿಕೆ ಆಗಿದೆ.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಮತ್ತೆ ಕುಸಿತ; ಇಲ್ಲಿದೆ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 06, 2025 | 10:21 AM

Share

ಬೆಂಗಳೂರು, ಏಪ್ರಿಲ್ 6: ಚಿನ್ನ ಮತ್ತು ಬೆಳ್ಳಿ ಬೆಲೆಗಳ (Gold and silver rates) ಪ್ರಚಂಡ ಕುಸಿತ ಈ ವಾರಾಂತ್ಯದಲ್ಲೂ ಮುಂದುವರರಿದಿದೆ. ಚಿನ್ನದ ಬೆಲೆ ತನ್ನ ಗರಿಷ್ಠ ಮಟ್ಟದಿಂದ ಗ್ರಾಮ್​​ಗೆ ಬರೋಬ್ಬರಿ 250 ರೂನಷ್ಟು ಕುಸಿದಿದೆ. ಬೆಳ್ಳಿ ಬೆಲೆಯಂತೂ ಒಂದು ಗ್ರಾಮ್​​ಗೆ 11 ರೂನಷ್ಟು ಇಳಿಕೆ ಕಂಡಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್ ಚಿನ್ನದ ಬೆಲೆ 8,560 ರೂ ಇದ್ದದ್ದು 8,310 ರೂಗೆ ಇಳಿದಿದೆ. ಭಾರತದಲ್ಲಿ ಮಾತ್ರವಲ್ಲ, ಬಹುತೇಕ ಎಲ್ಲಾ ದೇಶಗಳಲ್ಲೂ ಚಿನ್ನದ ಬೆಲೆ ಗಣನೀಯವಾಗಿ ತಗ್ಗಿದೆ. ಚಿನ್ನಕ್ಕಿಂತ ಬೆಳ್ಳಿ ಬೆಲೆ ಸಖತ್ ಕುಸಿತ ಕಾಣುತ್ತಿದೆ. ಮೊನ್ನೆ ನಾಲ್ಕು ರುಪಾಯಿ ಇಳಿದಿದ್ದ ಬೆಳ್ಳಿ ಬೆಲೆ ನಿನ್ನೆ ಬರೋಬ್ಬರಿ 5 ರೂ ಇಳಿಕೆ ಕಂಡಿದೆ. ಬೆಂಗಳೂರಿನಲ್ಲಿ ಗ್ರಾಮ್​​​ಗೆ 105 ರೂ ಇದ್ದ ಬೆಳ್ಳಿ ಬೆಲೆ ಇವತ್ತು 94 ರೂ ಇಳಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 83,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 90,660 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,400 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 83,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,400 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 6ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 83,100 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 90,660 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,990 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 940 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 83,100 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 90,660 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 940 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 83,100 ರೂ
  • ಚೆನ್ನೈ: 83,100 ರೂ
  • ಮುಂಬೈ: 83,100 ರೂ
  • ದೆಹಲಿ: 83,250 ರೂ
  • ಕೋಲ್ಕತಾ: 83,100 ರೂ
  • ಕೇರಳ: 83,100 ರೂ
  • ಅಹ್ಮದಾಬಾದ್: 83,150 ರೂ
  • ಜೈಪುರ್: 83,250 ರೂ
  • ಲಕ್ನೋ: 83,250 ರೂ
  • ಭುವನೇಶ್ವರ್: 83,100 ರೂ

ಇದನ್ನೂ ಓದಿ: ಚಿನ್ನದ ಬೆಲೆ ದಿಢೀರ್ ಕುಸಿತಕ್ಕೆ ಏನು ಕಾರಣ? ಅಕ್ಷಯ ತೃತೀಯಕ್ಕೆ ಮತ್ತಷ್ಟು ಬೆಲೆ ಇಳಿಕೆ ಆಗುತ್ತಾ? ಶೇ. 38ರಷ್ಟು ಇಳಿಕೆ ಸಾಧ್ಯತೆ

ಇದನ್ನೂ ಓದಿ
Image
ಗೋಲ್ಡ್ ಮಾನಿಟೈಸೇಶನ್ ಸ್ಕೀಮ್ ನಿಲ್ಲಿಸಿದ ಸರ್ಕಾರ
Image
ಚಿನ್ನದ ಬೆಲೆ ಇಳಿಕೆ ಯಾವಾಗ?
Image
ದುಬೈನಿಂದ ಎಷ್ಟು ಚಿನ್ನ ತಂದರೆ ಎಷ್ಟು ಟ್ಯಾಕ್ಸ್?
Image
ಮುಂಬರುವ ದಿನಗಳಲ್ಲಿ ಚಿನ್ನಕ್ಕೆ ಪ್ರಾಶಸ್ತ್ಯ: ಸಿಇಎ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,300 ರಿಂಗಿಟ್ (82,850 ರುಪಾಯಿ)
  • ದುಬೈ: 3,390 ಡಿರಾಮ್ (78,910 ರುಪಾಯಿ)
  • ಅಮೆರಿಕ: 920 ಡಾಲರ್ (78,660 ರುಪಾಯಿ)
  • ಸಿಂಗಾಪುರ: 1,275 ಸಿಂಗಾಪುರ್ ಡಾಲರ್ (80,900 ರುಪಾಯಿ)
  • ಕತಾರ್: 3,425 ಕತಾರಿ ರಿಯಾಲ್ (80,330 ರೂ)
  • ಸೌದಿ ಅರೇಬಿಯಾ: 3,460 ಸೌದಿ ರಿಯಾಲ್ (78,830 ರುಪಾಯಿ)
  • ಓಮನ್: 360.50 ಒಮಾನಿ ರಿಯಾಲ್ (80,070 ರುಪಾಯಿ)
  • ಕುವೇತ್: 279.90 ಕುವೇತಿ ದಿನಾರ್ (77,750 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,400 ರೂ
  • ಚೆನ್ನೈ: 10,300 ರೂ
  • ಮುಂಬೈ: 9,400 ರೂ
  • ದೆಹಲಿ: 9,400 ರೂ
  • ಕೋಲ್ಕತಾ: 9,400 ರೂ
  • ಕೇರಳ: 10,300 ರೂ
  • ಅಹ್ಮದಾಬಾದ್: 9,400 ರೂ
  • ಜೈಪುರ್: 9,400 ರೂ
  • ಲಕ್ನೋ: 9,400 ರೂ
  • ಭುವನೇಶ್ವರ್: 10,300 ರೂ
  • ಪುಣೆ: 9,400

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ