AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 26th May: ಚಿನ್ನದ ಬೆಲೆ 10 ದಿನದಲ್ಲಿ ಗ್ರಾಮ್​ಗೆ 75 ರೂನಷ್ಟು ಇಳಿಕೆ; ಬೆಳ್ಳಿಯಲ್ಲಿ ಹೆಚ್ಚಳ; ಇಲ್ಲಿದೆ ದರಪಟ್ಟಿ

Bullion Market 2024 May 26th: ಚಿನ್ನದ ಬೆಲೆ ಇಳಿಕೆ ಮುಂದುವರಿದಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 67,300 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 73,420 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 92.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 67,300 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,560 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 26th May: ಚಿನ್ನದ ಬೆಲೆ 10 ದಿನದಲ್ಲಿ ಗ್ರಾಮ್​ಗೆ 75 ರೂನಷ್ಟು ಇಳಿಕೆ; ಬೆಳ್ಳಿಯಲ್ಲಿ ಹೆಚ್ಚಳ; ಇಲ್ಲಿದೆ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 26, 2024 | 5:08 AM

Share

ಬೆಂಗಳೂರು, ಮೇ 26: ಬೆಲೆ ಇಳಿಕೆಯಲ್ಲಿ ಚಿನ್ನ, ಬೆಳ್ಳಿ ನಡುವೆ ಪೈಪೋಟಿ ಬಿದ್ದಂತಿದೆ. ಮೊನ್ನೆ ಗ್ರಾಮ್​ಗೆ ಬರೋಬ್ಬರಿ 3.30 ರೂನಷ್ಟು ಬೆಳ್ಳಿ ಬೆಲೆ ಇಳಿಕೆಯಾಗಿದ್ದರೆ, ಈಗ ಚಿನ್ನದ ಬೆಲೆ (Gold and silver Rates) ಗ್ರಾಮ್​ಗೆ 90 ರೂನಷ್ಟು ಕಡಿಮೆ ಆಗಿದೆ. ಬೆಳ್ಳಿ ಬೆಲೆ ಐವತ್ತು ಪೈಸೆ ಇಳಿದಿದೆ. ಭಾರತದಲ್ಲಿ ಮಾತ್ರವಲ್ಲ, ಜಾಗತಿಕವಾಗಿಯೂ ಚಿನ್ನದ ಬೆಲೆಯಲ್ಲಿ ಇಳಿಕೆ ಆಗಿದೆ. ಈಗ ಇಳಿಕೆಯಾದರೂ ಕಳೆದ 10 ದಿನದಲ್ಲಿ ಆಗಿರುವ ಏರಿಕೆ ಗಮನಿಸಿದರೆ ಬೆಳ್ಳಿ ಬೆಲೆಯಲ್ಲಿ ಗ್ರಾಮ್​ಗೆ 4.4 ರೂನಷ್ಟು ಹೆಚ್ಚಳವಾಗಿದೆ. ಚಿನ್ನದ ಬೆಲೆಯಲ್ಲಿ 75 ರೂನಷ್ಟು ಇಳಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 67,300 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 73,420 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,250 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 67,300 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,560 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 26ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,400 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,440 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 925 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,400 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,440 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 956 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 66,400 ರೂ
  • ಚೆನ್ನೈ: 66,500 ರೂ
  • ಮುಂಬೈ: 66,400 ರೂ
  • ದೆಹಲಿ: 66,550 ರೂ
  • ಕೋಲ್ಕತಾ: 66,400 ರೂ
  • ಕೇರಳ: 66,400 ರೂ
  • ಅಹ್ಮದಾಬಾದ್: 66,450 ರೂ
  • ಜೈಪುರ್: 66,550 ರೂ
  • ಲಕ್ನೋ: 66,550 ರೂ
  • ಭುವನೇಶ್ವರ್: 66,400 ರೂ

ಇದನ್ನೂ ಓದಿ: ಕಂಪನಿ ಮಾರುವಂತೆ ಮಾಡಿದ್ರು… 2014ರ ಹಿಂದಿನ ದಿನಗಳನ್ನು ಸ್ಮರಿಸಿ ಮರುಗಿದ ಉದ್ಯಮಿ ಶಿವಶಂಕರನ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,500 ರಿಂಗಿಟ್ (61,730 ರುಪಾಯಿ)
  • ದುಬೈ: 2,625 ಡಿರಾಮ್ (59,380 ರುಪಾಯಿ)
  • ಅಮೆರಿಕ: 715 ಡಾಲರ್ (59,420 ರುಪಾಯಿ)
  • ಸಿಂಗಾಪುರ: 984 ಸಿಂಗಾಪುರ್ ಡಾಲರ್ (60,560 ರುಪಾಯಿ)
  • ಕತಾರ್: 2,670 ಕತಾರಿ ರಿಯಾಲ್ (60,860 ರೂ)
  • ಸೌದಿ ಅರೇಬಿಯಾ: 2,690 ಸೌದಿ ರಿಯಾಲ್ (59,600 ರುಪಾಯಿ)
  • ಓಮನ್: 283 ಒಮಾನಿ ರಿಯಾಲ್ (61,090 ರುಪಾಯಿ)
  • ಕುವೇತ್: 222.50 ಕುವೇತಿ ದಿನಾರ್ (60,210 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,250 ರೂ
  • ಚೆನ್ನೈ: 9,650 ರೂ
  • ಮುಂಬೈ: 9,200 ರೂ
  • ದೆಹಲಿ: 9,200 ರೂ
  • ಕೋಲ್ಕತಾ: 9,200 ರೂ
  • ಕೇರಳ: 9,650 ರೂ
  • ಅಹ್ಮದಾಬಾದ್: 9,200 ರೂ
  • ಜೈಪುರ್: 9,200 ರೂ
  • ಲಕ್ನೋ: 9,200 ರೂ
  • ಭುವನೇಶ್ವರ್: 9,650 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ