AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 19 October: ದೇಶ ವಿದೇಶಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2023, October 19th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,450 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,490 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 74.60 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 55,450 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,250 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 19 October: ದೇಶ ವಿದೇಶಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
TV9 Web
| Edited By: |

Updated on: Oct 19, 2023 | 5:00 AM

Share

ಬೆಂಗಳೂರು, ಅಕ್ಟೋಬರ್ 19: ಈ ವಾರದ ಆರಂಭದಲ್ಲಿ ಇಳಿಕೆಯಲ್ಲಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಮತ್ತೆ ಏರತೊಡಗಿದೆ. ಭಾರತದಲ್ಲಿ ಹಬ್ಬದ ಸೀಸನ್​ಗೆ ಒಡವೆ ಮಾಡಿಸಿಕೊಳ್ಳುವವರು ಜ್ಯುವೆಲರಿ ಶಾಪ್ ಕಡೆಗೆ ಹೋಗುವ ಸಮಯ ಬಂದಂತಿದೆ. ಇಸ್ರೇಲ್ ಯುದ್ಧದ ಪರಿಣಾಮವಾಗಿ ಮತ್ತು ಹಬ್ಬಕ್ಕೆ ಭಾರತದಲ್ಲಿರುವ ಬೇಡಿಕೆಯ ಕಾರಣವಾಗಿ ಚಿನ್ನದ ಬೆಲೆ ಏರುತ್ತಿದೆ. ಬೆಳ್ಳಿಯೂ ಬೆಲೆ ಹೆಚ್ಚಿಸಿಕೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,450 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,490 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,460 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,250 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಅಕ್ಟೋಬರ್ 19ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,450 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,490 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 746 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,450 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,490 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 725 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 55,450 ರೂ
  • ಚೆನ್ನೈ: 55,650 ರೂ
  • ಮುಂಬೈ: 55,450 ರೂ
  • ದೆಹಲಿ: 55,600 ರೂ
  • ಕೋಲ್ಕತಾ: 55,450 ರೂ
  • ಕೇರಳ: 55,450 ರೂ
  • ಅಹ್ಮದಾಬಾದ್: 55,500 ರೂ
  • ಜೈಪುರ್: 55,600 ರೂ
  • ಲಕ್ನೋ: 55,600 ರೂ
  • ಭುವನೇಶ್ವರ್: 55,450 ರೂ

ಇದನ್ನೂ ಓದಿ: ಹಿಂಗಾರು ಬೆಳೆಗಳಿಗೆ ಎಂಎಸ್​ಪಿ ಹೆಚ್ಚಳ; ಲಡಾಖ್​ನಲ್ಲಿ ಗ್ರೀನ್ ಎನರ್ಜಿ ಕಾರಿಡಾರ್ ಯೋಜನೆ ಸೇರಿ ವಿವಿಧ ಯೋಜನೆಗಳಿಗೆ ಕೇಂದ್ರ ಸಂಪುಟ ಅಸ್ತು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,890 ರಿಂಗಿಟ್ (50,719 ರುಪಾಯಿ)
  • ದುಬೈ: 2,175 ಡಿರಾಮ್ (49,305 ರುಪಾಯಿ)
  • ಅಮೆರಿಕ: 595 ಡಾಲರ್ (49,542 ರುಪಾಯಿ)
  • ಸಿಂಗಾಪುರ: 827 ಸಿಂಗಾಪುರ್ ಡಾಲರ್ (50,268 ರುಪಾಯಿ)
  • ಕತಾರ್: 2,240 ಕತಾರಿ ರಿಯಾಲ್ (51,134 ರೂ)
  • ಸೌದಿ ಅರೇಬಿಯಾ: 2,250 ಸೌದಿ ರಿಯಾಲ್ (49,944 ರುಪಾಯಿ)
  • ಓಮನ್: 237 ಒಮಾನಿ ರಿಯಾಲ್ (51,264 ರುಪಾಯಿ)
  • ಕುವೇತ್: 187 ಕುವೇತಿ ದಿನಾರ್ (50,338 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,250 ರೂ
  • ಚೆನ್ನೈ: 7,800 ರೂ
  • ಮುಂಬೈ: 7,460 ರೂ
  • ದೆಹಲಿ: 7,460 ರೂ
  • ಕೋಲ್ಕತಾ: 7,460 ರೂ
  • ಕೇರಳ: 7,800 ರೂ
  • ಅಹ್ಮದಾಬಾದ್: 7,460 ರೂ
  • ಜೈಪುರ್: 7,460 ರೂ
  • ಲಕ್ನೋ: 7,460 ರೂ
  • ಭುವನೇಶ್ವರ್: 7,800 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ