AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 13th September: ಜಾಗತಿಕವಾಗಿ ಚಿನ್ನದ ಬೆಲೆ ತೀವ್ರ ಹೆಚ್ಚಳ; ಭಾರತದಲ್ಲೂ ಏರಿಕೆ ಸಾಧ್ಯತೆ

Bullion Market 2024 September 13th: ವಿದೇಶಗಳಲ್ಲಿ ತೀವ್ರ ಏರಿಕೆ ಕಂಡರೂ ಭಾರತದಲ್ಲಿ ಚಿನ್ನ, ಬೆಳ್ಳಿ ಬೆಲೆ ಇಂದು ಶುಕ್ರವಾರ ಇಳಿಕೆ ಆಗಿದೆ. ಆಭರಣ ಚಿನ್ನದ ಬೆಲೆ ಇವತ್ತು ಗ್ರಾಮ್​ಗೆ 6,704 ರೂ ಆಗಿದೆ. ಅಪರಂಜಿ ಚಿನ್ನ 7,314 ರೂ ಆಗಿದೆ. ಬೆಳ್ಳಿ ಬೆಲೆ 86.40 ರೂ ಇದೆ. ಇಂದು ಮಧ್ಯಾಹ್ನದೊಳಗೆ ಎರಡೂ ಬೆಲೆ ಭಾರತದಲ್ಲೂ ಹೆಚ್ಚಾಗುವ ನಿರೀಕ್ಷೆ ಇದೆ.

Gold Silver Price on 13th September: ಜಾಗತಿಕವಾಗಿ ಚಿನ್ನದ ಬೆಲೆ ತೀವ್ರ ಹೆಚ್ಚಳ; ಭಾರತದಲ್ಲೂ ಏರಿಕೆ ಸಾಧ್ಯತೆ
ಚಿನ್ನ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Sep 13, 2024 | 10:34 AM

ಬೆಂಗಳೂರು, ಸೆಪ್ಟಂಬರ್ 13: ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ವಿದೇಶಗಳಲ್ಲಿ ತೀವ್ರ ಹೆಚ್ಚಳವಾಗಿದೆ. ಆದರೆ, ಭಾರತದಲ್ಲಿ ಈ ಎರಡೂ ಲೋಹಗಳ ಬೆಲೆ ಇಳಿದಿದೆ. ಇಂದು ಮಧ್ಯಾಹ್ನದೊಳಗೆ ಭಾರತದಲ್ಲೂ ಚಿನ್ನ, ಬೆಳ್ಳಿ ಬೆಲೆಗಳು ಏರಿಕೆ ಆಗುವ ಸಾಧ್ಯತೆ ಇದೆ. ಎಂಸಿಎಕ್ಸ್ ಬೆಲೆ ಈಗಾಗಲೇ ಜಂಪ್ ಆಗಿದೆ. ಗ್ರಾಮ್​ಗೆ 14 ರೂನಷ್ಟು ಏರಿಕೆ ಆಗಬಹುದು. ಆದರೆ, ಇಂದು ಶುಕ್ರವಾರ ಬೆಳಗ್ಗೆ 10 ಗಂಟೆಯ ವಹಿವಾಟಿನಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 10 ರೂನಷ್ಟು ಕಡಿಮೆ ಆಗಿರುವುದು ತಿಳಿದುಬಂದಿದೆ. ಬೆಳ್ಳಿ ಬೆಲೆ 10 ಪೈಸೆ ತಗ್ಗಿದೆ. ಅಮೆರಿಕದಲ್ಲಿ ಬಡ್ಡಿದರ ಇಳಿಕೆಯಾಗುವ ಸಾಧ್ಯತೆ ದಟ್ಟವಾಗಿರುವ ಹಿನ್ನೆಲೆಯಲ್ಲಿ ಚಿನ್ನದ ಬೆಲೆ ತೀವ್ರ ಏರಿಕೆ ಕಾಣವ ಸಂಭವವಂತೂ ಕಾಣುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 67,040 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 73,140 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,640 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 67,040 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,390 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಸೆಪ್ಟೆಂಬರ್ 13ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,040 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,140 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 864 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,040 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,140 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 839 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 67,040 ರೂ
  • ಚೆನ್ನೈ: 67,040 ರೂ
  • ಮುಂಬೈ: 67,040 ರೂ
  • ದೆಹಲಿ: 67,190 ರೂ
  • ಕೋಲ್ಕತಾ: 67,040 ರೂ
  • ಕೇರಳ: 67,040 ರೂ
  • ಅಹ್ಮದಾಬಾದ್: 67,090 ರೂ
  • ಜೈಪುರ್: 67,190 ರೂ
  • ಲಕ್ನೋ: 67,190 ರೂ
  • ಭುವನೇಶ್ವರ್: 67,040 ರೂ

ಇದನ್ನೂ ಓದಿ: Petrol Diesel Price on September 13: ಬಿಹಾರ, ಉತ್ತರ ಪ್ರದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಅಗ್ಗ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,500 ರಿಂಗಿಟ್ (68,020 ರುಪಾಯಿ)
  • ದುಬೈ: 2,855 ಡಿರಾಮ್ (65,270 ರುಪಾಯಿ)
  • ಅಮೆರಿಕ: 780 ಡಾಲರ್ (65,470 ರುಪಾಯಿ)
  • ಸಿಂಗಾಪುರ: 1,042 ಸಿಂಗಾಪುರ್ ಡಾಲರ್ (67,310 ರುಪಾಯಿ)
  • ಕತಾರ್: 2,895 ಕತಾರಿ ರಿಯಾಲ್ (66,660 ರೂ)
  • ಸೌದಿ ಅರೇಬಿಯಾ: 2,920 ಸೌದಿ ರಿಯಾಲ್ (65,320 ರುಪಾಯಿ)
  • ಓಮನ್: 303.50 ಒಮಾನಿ ರಿಯಾಲ್ (66,180 ರುಪಾಯಿ)
  • ಕುವೇತ್: 232 ಕುವೇತಿ ದಿನಾರ್ (63,790 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,390 ರೂ
  • ಚೆನ್ನೈ: 9,140 ರೂ
  • ಮುಂಬೈ: 8,640 ರೂ
  • ದೆಹಲಿ: 8,640 ರೂ
  • ಕೋಲ್ಕತಾ: 8,640 ರೂ
  • ಕೇರಳ: 9,140 ರೂ
  • ಅಹ್ಮದಾಬಾದ್: 8,640 ರೂ
  • ಜೈಪುರ್: 8,640 ರೂ
  • ಲಕ್ನೋ: 8,640 ರೂ
  • ಭುವನೇಶ್ವರ್: 9,140 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:23 am, Fri, 13 September 24

ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ