AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 01 September: ಇವತ್ತೂ ಕೂಡ ಚಿನ್ನದ ಬೆಲೆ ಹೆಚ್ಚಳ; ಬೆಳ್ಳಿ ಬೆಲೆ ಶಾಂತ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ

Bullion Market 2023, September 1st: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,160 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 77.60 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 01 September: ಇವತ್ತೂ ಕೂಡ ಚಿನ್ನದ ಬೆಲೆ ಹೆಚ್ಚಳ; ಬೆಳ್ಳಿ ಬೆಲೆ ಶಾಂತ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ
ಚಿನ್ನ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 01, 2023 | 5:00 AM

ಬೆಂಗಳೂರು, ಸೆಪ್ಟೆಂಬರ್ 1: ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver Rates) ಸತತವಾಗಿ ಭರ್ಜರಿ ಏರಿಕೆ ಕಂಡಿವೆ. ಭಾರತ ಸೇರಿದಂತೆ ಎಲ್ಲೆಡೆ ಚಿನ್ನದ ಬೆಲೆ ಗಮನಾರ್ಹವಾಗಿ ಹೆಚ್ಚಳವಾಗಿದೆ. ನಿನ್ನೆ ಮೊನ್ನೆ ಏರಿಕೆಯಾಗಿದ್ದ ಬೆಳ್ಳಿ ಬೆಲೆ ಇಂದು ಯಥಾಸ್ಥಿತಿಯಲ್ಲಿದೆ. ತಜ್ಞರು ನಿರೀಕ್ಷಿಸಿದಂತೆ ಈ ಏರಿಕೆ ಇನ್ನೂ ದೀರ್ಘಕಾಲ ಮುಂದುವರಿಯುವ ಸಾಧ್ಯತೆ ಇದೆ. ಅಮೆರಿಕದ ಆರ್ಥಿಕತೆ ಬಗ್ಗೆ ಮತ್ತೆ ಸಂಶಯದ ಗೆರೆಗಳು ಮೂಡುತ್ತಿರುವಂತೆಯೇ ಹೂಡಿಕೆದಾರರು ಸುರಕ್ಷತೆಗೆ ಚಿನ್ನದತ್ತ ಮುಗಿಬೀಳುತ್ತಿರುವ ಟ್ರೆಂಡ್ ನಿರೀಕ್ಷೆಯಂತೆ ಈ ವಾರ ಮುಂದುವರಿಯುತ್ತಿದೆ. ಡಾಲರ್ ಮೌಲ್ಯವೃದ್ಧಿ ಬಳಿಕ ಹೂಡಿಕೆದಾರರು ಚಿನ್ನದಿಂದ ದೂರ ಸರಿದರಾದರೂ ಅದು ತಾತ್ಕಾಲಿಕ ಹಂತ ಎಂಬುದು ರುಜುವಾತಾಗಿದೆ. ಈಗ ಚಿನ್ನ ಮತ್ತು ಬೆಳ್ಳಿ ಮತ್ತೆ ಬೇಡಿಕೆ ಕಂಡುಕೊಂಡಿವೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,160 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,760 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,650 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಸೆಪ್ಟೆಂಬರ್ 1ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,150 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,160 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 776 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,150 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,160 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 765 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 55,150 ರೂ
  • ಚೆನ್ನೈ: 55,450 ರೂ
  • ಮುಂಬೈ: 55,150 ರೂ
  • ದೆಹಲಿ: 55,300 ರೂ
  • ಕೋಲ್ಕತಾ: 55,150 ರೂ
  • ಕೇರಳ: 55,150 ರೂ
  • ಅಹ್ಮದಾಬಾದ್: 55,200 ರೂ
  • ಜೈಪುರ್: 55,300 ರೂ
  • ಲಕ್ನೋ: 55,300 ರೂ
  • ಭುವನೇಶ್ವರ್: 55,150 ರೂ

ಇದನ್ನೂ ಓದಿ: 25,000 ಮಹಿಳೆಯರಿಗೆ ಆರ್ಥಿಕ ಮತ್ತು ಡಿಜಿಟಲ್ ಸಾಕ್ಷರತೆ ತರಬೇತಿ ನೀಡಲು ಮುಂದಾದ ಕೋಕಾ-ಕೋಲಾ ಕಂಪನಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,870 ರಿಂಗಿಟ್ (51,185 ರುಪಾಯಿ)
  • ದುಬೈ: 2180 ಡಿರಾಮ್ (49,117 ರುಪಾಯಿ)
  • ಅಮೆರಿಕ: 600 ಡಾಲರ್ (49,652 ರುಪಾಯಿ)
  • ಸಿಂಗಾಪುರ: 817 ಸಿಂಗಾಪುರ್ ಡಾಲರ್ (50,029 ರುಪಾಯಿ)
  • ಕತಾರ್: 2,250 ಕತಾರಿ ರಿಯಾಲ್ (51,072 ರೂ)
  • ಓಮನ್: 238 ಒಮಾನಿ ರಿಯಾಲ್ (51,223 ರುಪಾಯಿ)
  • ಕುವೇತ್: 187.50 ಕುವೇತಿ ದಿನಾರ್ (50,335 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,650 ರೂ
  • ಚೆನ್ನೈ: 8,070 ರೂ
  • ಮುಂಬೈ: 7,760 ರೂ
  • ದೆಹಲಿ: 7,760 ರೂ
  • ಕೋಲ್ಕತಾ: 7,760 ರೂ
  • ಕೇರಳ: 8,070 ರೂ
  • ಅಹ್ಮದಾಬಾದ್: 7,760 ರೂ
  • ಜೈಪುರ್: 7,760 ರೂ
  • ಲಕ್ನೋ: 7,760 ರೂ
  • ಭುವನೇಶ್ವರ್: 8,070 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ