AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 20th September: ಭಾರತದಲ್ಲಿ ಮುಂದುವರಿದ ಚಿನ್ನ, ಬೆಳ್ಳಿ ಬೆಲೆ ಕುಸಿತ; ವಿದೇಶಗಳಲ್ಲಿ ಬೆಲೆ ಏರಿಕೆ

Bullion Market 2024 September 20th: ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳ ಇಳಿಕೆ ಸತತವಾಗಿ ಆಗುತ್ತಿದೆ. ಅಮೆರಿಕದಲ್ಲಿ ಬಡ್ಡಿದರ ತುಸು ಹೆಚ್ಚೇ ಇಳಿಕೆಯಾದರೂ ಚಿನ್ನಕ್ಕೆ ಬೇಡಿಕೆ ಸದ್ಯಕ್ಕೆ ಹೆಚ್ಚಿದಂತೆ ಕಾಣುತ್ತಿಲ್ಲ. ಆದರೆ, ಜಾಗತಿಕವಾಗಿ ಹಲವು ದೇಶಗಳಲ್ಲಿ ಚಿನ್ನದ ಬೆಲೆ ಸ್ವಲ್ಪ ಹೆಚ್ಚಾಗಿದೆ. ಅಪರಂಜಿ ಚಿನ್ನದ ಬೆಲೆ ಗ್ರಾಮ್​ಗೆ 7,450 ರೂ ಇದ್ದದ್ದು 7,440 ರೂಗೆ ಇಳಿದಿದೆ.

Gold Silver Price on 20th September: ಭಾರತದಲ್ಲಿ ಮುಂದುವರಿದ ಚಿನ್ನ, ಬೆಳ್ಳಿ ಬೆಲೆ ಕುಸಿತ; ವಿದೇಶಗಳಲ್ಲಿ ಬೆಲೆ ಏರಿಕೆ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 20, 2024 | 10:14 AM

Share

ಬೆಂಗಳೂರು, ಸೆಪ್ಟಂಬರ್ 20: ವಿದೇಶಗಳಲ್ಲಿ ಚಿನ್ನದ ಬೆಲೆ ಏರಿಕೆ ಆದರೂ ಭಾರತದಲ್ಲಿ ಚಿನ್ನ, ಬೆಳ್ಳಿ ದರ ಇಳಿಕೆ ಮುಂದುವರಿದಿದೆ. ಆದರೆ ತೀರಾ ಅಲ್ಪ ಇಳಿಕೆ ಆಗಿದೆ. ಚಿನ್ನದ ಬೆಲೆ ಗ್ರಾಮ್​ಗೆ 1 ರೂ ಮಾತ್ರವೇ ಇಳಿದಿರುವುದು. ಬೆಳ್ಳಿ ಬೆಲೆಯೂ ಕೇವಲ 10 ಪೈಸೆ ಕಡಿಮೆ ಆಗಿದೆ. ವಿದೇಶಗಳಲ್ಲಿ ಹೆಚ್ಚಿನ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆಯಲ್ಲಿ ಸ್ವಲ್ಪ ಹೆಚ್ಚಳವಾಗಿದೆ. ವಾರಾಂತ್ಯದಲ್ಲಿ ಭಾರತದಲ್ಲೂ ಚಿನ್ನದ ಬೆಲೆ ಏರಿಕೆ ಆಗುವ ನಿರೀಕ್ಷೆ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 68,240 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 74,440 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,090 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 68,240 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,490 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಸೆಪ್ಟೆಂಬರ್ 20ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 68,240 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,440 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 909 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 68,240 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,440 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 849 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 68,240 ರೂ
  • ಚೆನ್ನೈ: 68,240 ರೂ
  • ಮುಂಬೈ: 68,240 ರೂ
  • ದೆಹಲಿ: 68,390 ರೂ
  • ಕೋಲ್ಕತಾ: 68,240 ರೂ
  • ಕೇರಳ: 68,240 ರೂ
  • ಅಹ್ಮದಾಬಾದ್: 68,290 ರೂ
  • ಜೈಪುರ್: 68,390 ರೂ
  • ಲಕ್ನೋ: 68,390 ರೂ
  • ಭುವನೇಶ್ವರ್: 68,240 ರೂ

ಇದನ್ನೂ ಓದಿ: Petrol Diesel Price on September 20: ಚೆನ್ನೈನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,440 ರಿಂಗಿಟ್ (68,820 ರುಪಾಯಿ)
  • ದುಬೈ: 2,887.50 ಡಿರಾಮ್ (65,720 ರುಪಾಯಿ)
  • ಅಮೆರಿಕ: 785 ಡಾಲರ್ (65,620 ರುಪಾಯಿ)
  • ಸಿಂಗಾಪುರ: 1,045 ಸಿಂಗಾಪುರ್ ಡಾಲರ್ (67,730 ರುಪಾಯಿ)
  • ಕತಾರ್: 2,935 ಕತಾರಿ ರಿಯಾಲ್ (67,300 ರೂ)
  • ಸೌದಿ ಅರೇಬಿಯಾ: 2,960 ಸೌದಿ ರಿಯಾಲ್ (65,940 ರುಪಾಯಿ)
  • ಓಮನ್: 309.50 ಒಮಾನಿ ರಿಯಾಲ್ (67,200 ರುಪಾಯಿ)
  • ಕುವೇತ್: 234.40 ಕುವೇತಿ ದಿನಾರ್ (64,260 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,490 ರೂ
  • ಚೆನ್ನೈ: 9,590 ರೂ
  • ಮುಂಬೈ: 9,090 ರೂ
  • ದೆಹಲಿ: 9,090 ರೂ
  • ಕೋಲ್ಕತಾ: 9,090 ರೂ
  • ಕೇರಳ: 9,590 ರೂ
  • ಅಹ್ಮದಾಬಾದ್: 9,090 ರೂ
  • ಜೈಪುರ್: 9,090 ರೂ
  • ಲಕ್ನೋ: 9,090 ರೂ
  • ಭುವನೇಶ್ವರ್: 9,590 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ