AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rates 24 Aug: 15,000 ಕೋಟಿ ರೂ ದಾಟಿದ ಆಭರಣ ಚಿನ್ನದ ಬೆಲೆ; ಇಲ್ಲಿದೆ ದರಪಟ್ಟಿ

Gold Price 24 August 2026: ಇವತ್ತು ಸೋಮವಾರ ಚಿನ್ನದ ಬೆಲೆ ಏರಿಕೆಯಾದರೆ, ಬೆಳ್ಳಿ ಬೆಲೆ ಸ್ಥಿರವಾಗಿದೆ. ಬಂಗಾರದ ದರ ಗ್ರಾಮ್​ಗೆ 80 ರೂ ಹಿಗ್ಗಿದೆ. ಆಭರಣ ಚಿನ್ನದ ಬೆಲೆ 14,950 ರಿಂದ 15,030 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 16,397 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 260 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 270 ರೂ ಇದೆ.

Gold Rates 24 Aug: 15,000 ಕೋಟಿ ರೂ ದಾಟಿದ ಆಭರಣ ಚಿನ್ನದ ಬೆಲೆ; ಇಲ್ಲಿದೆ ದರಪಟ್ಟಿ
ಚಿನ್ನImage Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Aug 24, 2026 | 11:19 AM

Share

ಮುಖ್ಯಾಂಶಗಳು

  • ಬಂಗಾರದ ದರ ಗ್ರಾಮ್​ಗೆ 80 ರೂ ಹಿಗ್ಗಿದೆ.
  • ಆಭರಣ ಚಿನ್ನದ ಬೆಲೆ 14,950 ರಿಂದ 15,030 ರೂಗೆ ಏರಿದೆ.
  • ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 260 ರೂ ಇದೆ.

ನವದೆಹಲಿ, ಆಗಸ್ಟ್ 24: ಕಳೆದ ಮೂರ್ನಾಲ್ಕು ದಿನಗಳಲ್ಲಿ 750 ರೂಗಳಷ್ಟು ಏರಿಕೆ ಕಂಡಿದ್ದ ಚಿನ್ನದ ಬೆಲೆ ಇವತ್ತು ಸೋಮವಾರವೂ ಹೆಚ್ಚಿದೆ. ಇಂದು ಅದರ ಒಂದು ಗ್ರಾಮ್ ಬೆಲೆ 80 ರೂ ಜಾಸ್ತಿಗೊಂಡಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸ್ಪಾಟ್ ಗೋಲ್ಡ್ ಬೆಲೆ (Spot gold price) ಒಂದು ಡಾಲರ್ ಏರಿದೆ. ನಿನ್ನೆ ಎರಡು ಡಾಲರ್ ಹೆಚ್ಚಿತ್ತು. ಈಗ ಒಂದು ಗ್ರಾಮ್ ಸ್ಪಾಟ್ ಗೋಲ್ಡ್ ಬೆಲೆ 149 ಡಾಲರ್ ದಾಟಿದೆ. ಆದರೆ, ಹೆಚ್ಚಿನ ದೇಶಗಳಲ್ಲಿ ಬಂಗಾರದ ದರದಲ್ಲಿ ಇವತ್ತು ಬದಲಾವಣೆ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,50,300 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,63,970 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 26,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,50,300 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 26,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 27,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಆಗಸ್ಟ್ 24ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 16,397
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,030
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,293
  • ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 15,030 ರೂ
  • ಚೆನ್ನೈ: 15,030 ರೂ
  • ಮುಂಬೈ: 15,030 ರೂ
  • ದೆಹಲಿ: 15,045
  • ಕೋಲ್ಕತಾ: 15,030 ರೂ
  • ಕೇರಳ: 15,030 ರೂ
  • ಅಹ್ಮದಾಬಾದ್: 15,035 ರೂ
  • ಜೈಪುರ್: 15,045
  • ಲಕ್ನೋ: 15,045
  • ಭುವನೇಶ್ವರ್: 15,030 ರೂ

ಅಂತಾರಾಷ್ಟ್ರೀಯ ಚಿನ್ನ, ಬೆಳ್ಳಿ ದರ

  • ಸ್ಪಾಟ್ ಗೋಲ್ಡ್ 1 ಗ್ರಾಮ್​ಗೆ 149.13 ಡಾಲರ್ (14,267 ರುಪಾಯಿ)
  • ಸ್ಪಾಟ್ ಸಿಲ್ವರ್ 1 ಗ್ರಾಮ್​ಗೆ 2.214 ಡಾಲರ್ (211 ರುಪಾಯಿ)

ಇದನ್ನೂ ಓದಿ: ಫಿಕ್ಸೆಡ್ ಡೆಪಾಸಿಟ್; ವಯಸ್ಸಿಗೆ ಅನುಗುಣವಾಗಿ ಠೇವಣಿ ಹೂಡಿಕೆ ನಿಯಮಗಳು; ಅವಿವಾಹಿತರು, ವಿವಾಹಿತರು, ನಿವೃತ್ತರು ಏನು ಮಾಡಬೇಕು?

ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಭಾರತ: 16,397 ರುಪಾಯಿ
  • ಮಲೇಷ್ಯಾ: 615 ರಿಂಗಿಟ್ (14,564 ರುಪಾಯಿ)
  • ದುಬೈ: 544.75 ಡಿರಾಮ್ (14,448 ರುಪಾಯಿ)
  • ಅಮೆರಿಕ: 151.50 ಡಾಲರ್ (14,494 ರುಪಾಯಿ)
  • ಸಿಂಗಾಪುರ: 201.50 ಸಿಂಗಾಪುರ್ ಡಾಲರ್ (15,185 ರುಪಾಯಿ)
  • ಕತಾರ್: 554 ಕತಾರಿ ರಿಯಾಲ್ (14,540 ರೂ)
  • ಸೌದಿ ಅರೇಬಿಯಾ: 571 ಸೌದಿ ರಿಯಾಲ್ (14,549 ರುಪಾಯಿ)
  • ಓಮನ್: 58.90 ಒಮಾನಿ ರಿಯಾಲ್ (14,637 ರುಪಾಯಿ)
  • ಕುವೇತ್: 45.87 ಕುವೇತಿ ದಿನಾರ್ (14,306 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 260 ರೂ
  • ಚೆನ್ನೈ: 270 ರೂ
  • ಮುಂಬೈ: 260 ರೂ
  • ದೆಹಲಿ: 260 ರೂ
  • ಕೋಲ್ಕತಾ: 260 ರೂ
  • ಕೇರಳ: 270 ರೂ
  • ಅಹ್ಮದಾಬಾದ್: 260 ರೂ
  • ಜೈಪುರ್: 260 ರೂ
  • ಲಕ್ನೋ: 260 ರೂ
  • ಭುವನೇಶ್ವರ್: 270 ರೂ
  • ಪುಣೆ: 260

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:16 am, Mon, 24 August 26

Follow Us
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ನಾಗೇಂದ್ರ ರಾಜೀನಾಮೆಗೆ ಆಗ್ರಹ:  3 ದಿಕ್ಕಲ್ಲೂ ವಿಧಾನಸೌಧ ಮುತ್ತಿಗೆ ಪ್ಲಾನ್
ನಾಗೇಂದ್ರ ರಾಜೀನಾಮೆಗೆ ಆಗ್ರಹ:  3 ದಿಕ್ಕಲ್ಲೂ ವಿಧಾನಸೌಧ ಮುತ್ತಿಗೆ ಪ್ಲಾನ್
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ