AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನಷ್ಟು ಕುಸಿತ ಕಾಣುತ್ತಾ ಚಿನ್ನದ ದರ; ಎಲ್ಲಿಯವರೆಗೆ ಇಳಿಯಬಹುದು ಬಂಗಾರದ ಬೆಲೆ?

Gold rates may come down drastically to Rs 10,000: ಕಳೆದ ತಿಂಗಳ ಕೊನೆಯ ವಾರದಲ್ಲಿ ಗರಿಷ್ಠ ಮಟ್ಟಕ್ಕೆ ಹೋಗಿದ್ದ ಚಿನ್ನ, ಬೆಳ್ಳಿ ಬೆಲೆಗಳು ಈಗ ಇಳಿಜಾರಿನಲ್ಲಿ ಜಾರುತ್ತಿವೆ. ಚಿನ್ನದ ಬೆಲೆ ಗರಿಷ್ಠ ಮಟ್ಟದಿಂದ 2,000 ರೂಗಳಷ್ಟು ಕಡಿಮೆಗೊಂಡಿದೆ. ಮುಂದಿನ ಒಂದು ವರ್ಷದಲ್ಲಿ ಇದರ ಬೆಲೆ ಗ್ರಾಮ್​ಗೆ 10,000 ರೂಗೆ ಇಳಿಯಬಹುದು ಎನ್ನಲಾಗುತ್ತಿದೆ. ಬಂಗಾರದ ಬೆಲೆ ಏರಿದ್ದು ಯಾಕೆ, ಇಳಿಯುತ್ತಿರುವುದು ಯಾಕೆ ಎನ್ನುವುದರ ಸುದ್ದಿ ಇಲ್ಲಿದೆ.

ಇನ್ನಷ್ಟು ಕುಸಿತ ಕಾಣುತ್ತಾ ಚಿನ್ನದ ದರ; ಎಲ್ಲಿಯವರೆಗೆ ಇಳಿಯಬಹುದು ಬಂಗಾರದ ಬೆಲೆ?
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 17, 2026 | 3:48 PM

Share

ನವದೆಹಲಿ, ಫೆಬ್ರುವರಿ 17: ಚಿನ್ನ ಮತ್ತು ಬೆಳ್ಳಿ ಬೆಲೆ ಕಳೆದ ತಿಂಗಳು (ಜನವರಿ) ಯದ್ವಾತದ್ವಾ ಏರಿಕೆ ಕಂಡಿವೆ. ಈ ಅಮೂಲ್ಯ ಲೋಹಗಳ ಬೆಲೆ ಏರಿಕೆಗೆ ಕಡಿವಾಣವೇ ಇಲ್ಲ ಎನ್ನುವಂತೆ ನಾಗಾಲೋಟ ನಡೆದಿತ್ತು. ಈಗ ಏರಿದಷ್ಟೇ ವೇಗವಾಗಿ ಕುಸಿತವೂ ಆಗುತ್ತಿದೆ. ಬೆಲೆ ಏರಿದಷ್ಟೂ ಕಂಗಾಲಾದ ಜನಸಾಮಾನ್ಯರು, ದುಬಾರಿ ಬೆಲೆಯಲ್ಲೂ ಆಭರಣ ಖರೀದಿಸಲು ಮುಗಿಬಿದ್ದದ್ದು ವಿಪರ್ಯಾಸ ಎನಿಸಿತ್ತು. ಸದ್ಯ ಚಿನ್ನದ ಬೆಲೆ (Gold Rate) ಇಳಿಕೆ ಆಗುತ್ತಿರುವುದು ಬಹಳಷ್ಟು ಭಾರತೀಯ ಜನಸಾಮಾನ್ಯರಿಗೆ ಉಸಿರು ಸಿಕ್ಕಂತಾಗಿದೆ.

ಜನವರಿ 29ರಂದು ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗರಿಷ್ಠ ಮಟ್ಟ ಮುಟ್ಟಿದ್ದವು. ಚಿನ್ನದ ಬೆಲೆ 24 ಕ್ಯಾರಟ್​ನದ್ದು 17,885 ರೂ ತಲುಪಿತ್ತು. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 16,395 ರೂಗೆ ಏರಿತ್ತು. ಇವತ್ತು ಈ ಆಭರಣ ಚಿನ್ನದ ಬೆಲೆ 14,200 ರೂಗೆ ಇಳಿದಿದೆ. ಮುಂದಿನ ದಿನಗಳಲ್ಲೂ ಬಂಗಾರದ ಬೆಲೆ ಮತ್ತಷ್ಟು ಕುಸಿಯುವ ಸಾಧ್ಯತೆ ಇದೆ ಎನ್ನುತ್ತಿದ್ದಾರೆ ತಜ್ಞರು.

ಇದನ್ನೂ ಓದಿ: Gold Rate Today: ಮುಂದುವರಿದಿದೆ ಚಿನ್ನ, ಬೆಳ್ಳಿ ಬೆಲೆಗಳ ಕುಸಿತ

ಚಿನ್ನದ ಬೆಲೆ ಇಳಿಕೆಯಾಗುತ್ತಿರುವುದು ಯಾಕೆ?

ಚಿನ್ನದ ಬೆಲೆ ಇಳಿಯುತ್ತಿರುವುದು ಯಾಕೆ ಎಂದು ತಿಳಿಯುವ ಮೊದಲು ಅದರ ಬೆಲೆ ಏರಿದ್ದು ಯಾಕೆ ಎಂದು ತಿಳಿಯುವುದು ಮುಖ್ಯ. ಜಾಗತಿಕ ರಾಜಕೀಯ ಅನಿಶ್ಚಿತ ಪರಿಸ್ಥಿತಿಯಿಂದಾಗಿ ಬಹಳಷ್ಟು ಹೂಡಿಕೆದಾರರು ಗೋಲ್ಡ್ ಮತ್ತು ಸಿಲ್ವರ್ ಇಟಿಎಫ್​ಗಳಲ್ಲಿ ಹೂಡಿಕೆ ಮಾಡಿದ್ದರು. ಜೊತೆಗೆ, ವಿವಿಧ ಸೆಂಟ್ರಲ್ ಬ್ಯಾಂಕುಗಳು ಚಿನ್ನದ ಖರೀದಿಗೆ ಮುಗಿಬಿದ್ದಿದ್ದವು. ಇವೆರಡು ಪ್ರಮುಖ ಕಾರಣಗಳು ಬಂಗಾರ ದುಬಾರಿಯಾಗಲು.

ಇನ್ನು, ಚಿನ್ನದ ಬೆಲೆ ಈಗ ಇಳಿಯಲೂ ಕೆಲ ಕಾರಣಗಳಿವೆ. ಗೋಲ್ಡ್ ಇಟಿಎಫ್​ಗಳಲ್ಲಿ ಹೂಡಿಕೆ ಮಾಡಿದ್ದವರು ಪ್ರಾಫಿಟ್ ಬುಕ್ ಮಾಡುತ್ತಿರುವುದು ಒಂದು ಕಾರಣ. ಹಾಗೆಯೇ, ರಷ್ಯಾ ದೇಶವು ಅಮೆರಿಕದ ಕೆಲ ಅಣತಿಗಳನ್ನು ಪಾಲಿಸಲು ಮನಸ್ಸು ಮಾಡಿದೆ. ರಷ್ಯಾ ಮತ್ತು ಅಮೆರಿಕ ನಡುವೆ ವ್ಯಾಪಾರ ಒಪ್ಪಂದ ಏರ್ಪಡಬಹುದು ಎನ್ನುವ ಸುದ್ದಿ ಇದೆ. ಇವು ಚಿನ್ನದ ಬೆಲೆ ಇಳಿಯಲು ಕಾರಣ ಎನ್ನಲಾಗುತ್ತಿದೆ.

ಇದನ್ನೂ ಓದಿ: ಹೂಡಿಕೆಗಳು ಎತ್ತ..? ಕುಗ್ಗಿದ ಈಕ್ವಿಟಿ ಮ್ಯೂಚುವಲ್ ಫಂಡ್​ಗಳು; ಹಿಗ್ಗಿದ ಗೋಲ್ಡ್ ಇಟಿಎಫ್​ಗಳು

10,000 ರೂಗೆ ಇಳಿಯುತ್ತಾ ಚಿನ್ನದ ಬೆಲೆ?

ಡಾಲರ್​ಗಳಲ್ಲಿ ವಹಿವಾಟು ನಡೆಸಲು ಒಪ್ಪದಿದ್ದ ರಷ್ಯಾ ಇದೀಗ ತನ್ನ ನಿಲುವು ಬದಲಿಸಿದೆ. ತನ್ನಲ್ಲಿರುವ ಚಿನ್ನವನ್ನು ಮಾರಿ ಡಾಲರ್ ಕರೆನ್ಸಿಯನ್ನು ಖರೀದಿಸಲು ರಷ್ಯಾ ಮುಂದಾಗಬಹುದು ಎನ್ನುವ ಸುದ್ದಿ ಇದೆ. ಅಮೆರಿಕ ಮತ್ತು ರಷ್ಯಾ ನಡುವೆ ವ್ಯಾಪಾರ ಒಪ್ಪಂದ ಏರ್ಪಡುವ, ಮತ್ತು ರಷ್ಯಾ ಉಕ್ರೇನ್ ಯುದ್ಧ ಕೊನೆಗೊಳ್ಳುವ ಸಾಧ್ಯತೆ ಎಲ್ಲೋ ಕಾಣುತ್ತಿದೆ. ಇವೇನಾದರೂ ನಿಜವೇ ಆದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು ತೀವ್ರ ಕುಸಿತ ಕಾಣಬಹುದು. ಚಿನ್ನದ ಬೆಲೆ ಗ್ರಾಮ್​ಗೆ 10,000 ರೂಗೆ ಇಳಿದರೂ ಅಚ್ಚರಿ ಇಲ್ಲ ಎನ್ನಲಾಗುತ್ತಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ