AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Google: ಸಿಸಿಐ ದಂಡ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಗೂಗಲ್

ಗೂಗಲ್ ಕಂಪನಿಯು ಮೇಲ್ಮನವಿ ಸಲ್ಲಿಸಿರುವುದು ಸುಪ್ರೀಂ ಕೋರ್ಟ್​​ನ ದಾಖಲೆಗಳಿಂದ ತಿಳಿದುಬಂದಿದೆ. ಆದರೆ, ವಿಚಾರಣೆ ದಿನಾಂಕ ಇನ್ನಷ್ಟೇ ನಿಗದಿಯಾಗಬೇಕಿದೆ ಎಂದು ‘ರಾಯಿಟರ್ಸ್’ ಸುದ್ದಿಸಂಸ್ಥೆ ವರದಿ ಮಾಡಿದೆ.

Google: ಸಿಸಿಐ ದಂಡ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಗೂಗಲ್
ಗೂಗಲ್
TV9 Web
| Updated By: Ganapathi Sharma|

Updated on: Jan 10, 2023 | 10:02 AM

Share

ನವದೆಹಲಿ: ಸ್ಪರ್ಧಾ ವಿರೋಧಿ ಅಭ್ಯಾಸಗಳಿಗಾಗಿ ಭಾರಿ ಮೊತ್ತದ ದಂಡ ವಿಧಿಸಿದ್ದ ಭಾರತೀಯ ಸ್ಪರ್ಧಾ ಆಯೋಗದ (CCI) ತೀರ್ಪನ್ನು ಪ್ರಶ್ನಿಸಿ ಗೂಗಲ್ (Google) ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಇದಕ್ಕೂ ಮುನ್ನ ಗೂಗಲ್, ರಾಷ್ಟ್ರೀಯ ಕಂಪನಿ ಕಾನೂನು ಮೇಲ್ಮನವಿ ನ್ಯಾಯಮಂಡಳಿಗೆ (NCLAT) ಅರ್ಜಿ ಸಲ್ಲಿಸಿತ್ತು. ಆದರೆ, ಎನ್​​ಸಿಎಲ್​​ಎಟಿ ದಂಡದ ಶೇಕಡಾ 10ರಷ್ಟು ಮೊತ್ತವನ್ನು ಪಾವತಿಸುವಂತೆ ನಿರ್ದೇಶನ ನೀಡಿತ್ತು. ಆ್ಯಂಡ್ರಾಯ್ಡ್ ಮೊಬೈಲ್ ಆ್ಯಪ್​ಗಳಿಗೆ ಸಂಬಂಧಿಸಿದ ಸ್ಪರ್ಧಾ ವಿರೋಧಿ ಅಭ್ಯಾಸಗಳಿಗಾಗಿ ಅಲ್ಫಾಬೆಟ್ ಇಂಕ್‌ನ ಗೂಗಲ್‌ಗೆ ಸ್ಪರ್ಧಾ ಆಯೋಗವು 2022ರ ಅಕ್ಟೋಬರ್​ನಲ್ಲಿ 1,337 ಕೋಟಿ ರೂ. ದಂಡ ವಿಧಿಸಿತ್ತು. ದಂಡ ವಿಧಿಸಿದ ಕ್ರಮಕ್ಕೆ ಗೂಗಲ್​ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಇದರಿಂದ ಭಾರತದ ಗ್ರಾಹಕರು ಮತ್ತು ಉದ್ದಿಮೆಗಳಿಗೆ ದೊಡ್ಡ ಹಿನ್ನಡೆಯಾಗಲಿದೆ ಎಂದು ಕಂಪನಿ ಹೇಳಿತ್ತು.

ಗೂಗಲ್ ಕಂಪನಿಯು ಮೇಲ್ಮನವಿ ಸಲ್ಲಿಸಿರುವುದು ಸುಪ್ರೀಂ ಕೋರ್ಟ್​​ನ ದಾಖಲೆಗಳಿಂದ ತಿಳಿದುಬಂದಿದೆ. ಆದರೆ, ವಿಚಾರಣೆ ದಿನಾಂಕ ಇನ್ನಷ್ಟೇ ನಿಗದಿಯಾಗಬೇಕಿದೆ ಎಂದು ‘ರಾಯಿಟರ್ಸ್’ ಸುದ್ದಿಸಂಸ್ಥೆ ವರದಿ ಮಾಡಿದೆ. ಸಿಸಿಐ ತೀರ್ಪಿನಿಂದ ಬಚಾವಾಗಲು ಕೊನೆಯ ಪ್ರಯತ್ನವಾಗಿ ಗೂಗಲ್ ಕಾನೂನು ಸಮರದ ಮೊರೆ ಹೋಗಲಿದೆ ಎಂಬುದಾಗಿ ಇತ್ತೀಚೆಗೆ ವರದಿಯಾಗಿತ್ತು.

ಇದನ್ನೂ ಓದಿ: Google: ಗೂಗಲ್​ಗೆ ಮತ್ತೆ ಹಿನ್ನಡೆ; ಶೇ 10 ದಂಡ ಪಾವತಿಸಲು ಎನ್​ಸಿಎಲ್​ಎಟಿ ಸೂಚನೆ

ಗೂಗಲ್​ ಸಲ್ಲಿಸಿರುವ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆಗೆ ಕೈಗೆತ್ತಿಕೊಂಡರೆ ಸಿಸಿಐ ಆದೇಶಕ್ಕೆ ಸದ್ಯಕ್ಕೆ ತಡೆಯಾಗಲಿದೆ ಎಂದು ಮೂಲಗಳು ತಿಳಿಸಿವೆ. ಈ ವಿಚಾರವಾಗಿ ಗೂಗಲ್​ ವಕ್ತಾರರು ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಗೂಗಲ್ ಕಂಪನಿ ವಿರುದ್ಧ ಭಾರತವೂ ಸೇರಿದಂತೆ ವಿಶ್ವದ ಕೆಲವು ದೇಶಗಳಲ್ಲಿ ವಿವಿಧ ಪ್ರಕರಣಗಳಿವೆ. ಗೂಗಲ್ ಸ್ವಾಮ್ಯದ ಆ್ಯಂಡ್ರಾಯ್ಡ್ ಮಾರುಕಟ್ಟೆಯಲ್ಲಿ ತನಗಿರುವ ಪ್ರಾಬಲ್ಯದ ಸ್ಥಿತಿಯನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂಬುದು ಈ ಪ್ರಕರಣದ ಪ್ರಮುಖ ಅಂಶವಾಗಿದೆ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ