AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Google Super App A: ಜನಸಾಮಾನ್ಯರಿಗಾಗಿ ಗೂಗಲ್ ಸೂಪರ್ ಆಪ್, ವಿಶೇಷತೆಗಳು ಹೀಗಿವೆ

Google For India 2023: ಈ ಅಪ್ಲಿಕೇಶನ್‌ನ ಸಹಾಯದಿಂದ ನಮ್ಮ ಸುತ್ತಮುತ್ತ ಯಾವ ಆಯುಷ್ಮಾನ್ ಭಾರತ್ ಆಸ್ಪತ್ರೆಗಳಿವೆ ಎಂಬುದನ್ನು ಸಹ ನಾವು ತಿಳಿದುಕೊಳ್ಳಬಹುದು. ರೈತರು ತಮ್ಮ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಎಲ್ಲಿ ಸಿಗುತ್ತದೆ ಎಂಬುದನ್ನು ಈ ಆ್ಯಪ್ ಮೂಲಕ ತಿಳಿದುಕೊಳ್ಳಬಹುದು. ಈ ಸೂಪರ್ ಆಪ್ ನ ಮತ್ತೊಂದು ವಿಶೇಷತೆ ಏನೆಂದರೆ ಇದನ್ನು ಬಹು ಭಾಷಾಗಳಿಗೆ ಅನ್ವಯವಾಗುವಂತೆ ತಯಾರಿಸಲಾಗಿದೆ.

Google Super App A: ಜನಸಾಮಾನ್ಯರಿಗಾಗಿ ಗೂಗಲ್ ಸೂಪರ್ ಆಪ್, ವಿಶೇಷತೆಗಳು ಹೀಗಿವೆ
ಜನಸಾಮಾನ್ಯರಿಗಾಗಿ ಗೂಗಲ್ ಸೂಪರ್ ಆಪ್
Follow us
ಸಾಧು ಶ್ರೀನಾಥ್​
|

Updated on: Oct 21, 2023 | 1:52 PM

ಗೂಗಲ್ ಸಾಮಾನ್ಯ ಜನರಿಗಾಗಿ ಒಂದು ಸೂಪರ್ ಆಪ್ (Super App ‘A’) ಅನ್ನು ಸಿದ್ಧಗೊಳಿಸಿದೆ. ಆಕ್ಸಿಸ್ ಮೈ ಇಂಡಿಯಾ ಸಹಯೋಗದಲ್ಲಿ ಅಭಿವೃದ್ಧಿಪಡಿಸಲಾದ ಅಪ್ಲಿಕೇಶನ್ ಅನ್ನು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ (ಐಟಿ) ಸಚಿವ ಅಶ್ವಿನಿ ವೈಷ್ಣವ್ (Union Minister Ashwini Vaishnaw) ಅವರು ಬಿಡುಗಡೆ ಮಾಡಿದರು. ಅವರು ಗೂಗಲ್ ಫಾರ್ ಇಂಡಿಯಾ 2023 (Google For India 2023) ಈವೆಂಟ್‌ನಲ್ಲಿ ಭಾಗವಹಿಸಿ, ಈ ಸೂಪರ್ ಅಪ್ಲಿಕೇಶನ್ ಅನ್ನು ಅನಾವರಣಗೊಳಿಸಿದರು.

ಕೃತಕ ಬುದ್ಧಿಮತ್ತೆಯ ಸಹಾಯದಿಂದ ಗೂಗಲ್ ಈ ಅಪ್ಲಿಕೇಶನ್ ಅನ್ನು ರಚಿಸಿದೆ. ಈ ಸೂಪರ್ ಅಪ್ಲಿಕೇಶನ್ ಲಾಗಿನ್ ಮಾಡಲು, ನೀವು ನಿಮ್ಮ ಮೊಬೈಲ್ ಸಂಖ್ಯೆಯನ್ನು ನಮೂದಿಸಬೇಕು. ಈ ಅಪ್ಲಿಕೇಶನ್ ಜನರಿಗೆ ಸರ್ಕಾರದ ಯೋಜನೆಗಳು ಮತ್ತು ಇತರ ಸೇವೆಗಳ ಬಗ್ಗೆ ಎಲ್ಲಾ ಮಾಹಿತಿಯನ್ನು ಒದಗಿಸುತ್ತದೆ.

ಇದನ್ನೂ ಓದಿ: ಪ್ರಧಾನಿ ಮೋದಿ ಜೊತೆ ವರ್ಚುವಲ್ ಸಭೆ: ಭಾರತದ ಅಭಿವೃದ್ಧಿಗೆ ಗೂಗಲ್‌ ಬದ್ಧ ಎಂದು ಒತ್ತಿ ಹೇಳಿದ ಸುಂದರ್ ಪಿಚೈ, AI ಶೃಂಗಸಭೆಗೆ ಗೂಗಲ್​​ಗೆ ಆಹ್ವಾನ

ಆಕ್ಸಿಸ್ ಮೈ ಇಂಡಿಯಾ ಮತ್ತು ಗೂಗಲ್ ಜಂಟಿಯಾಗಿ ಅಭಿವೃದ್ಧಿಪಡಿಸಿರುವ ಈ ಆ್ಯಪ್‌ನ ವಿಶೇಷತೆ ಎಂದರೆ ಈ ಆಪ್ ವಾಯ್ಸ್ ಆಕ್ಟಿವೇಟೆಡ್ ಪರ್ಸನಲ್ ಅಸಿಸ್ಟೆಂಟ್ ಸೌಲಭ್ಯವನ್ನು ಹೊಂದಿದೆ. ಇಷ್ಟೇ ಅಲ್ಲ, ಈ ಆಪ್ ಮೂಲಕ ನೀವು ಆಯುಷ್ಮಾನ್ ಭಾರತ್, ಕೃಷಿ, ಸರ್ಕಾರಿ ಯೋಜನೆಗಳು, ಉದ್ಯೋಗ ಇತ್ಯಾದಿಗಳ ಬಗ್ಗೆ ಸಂಪೂರ್ಣ ಜ್ಞಾನವನ್ನು ಪಡೆಯಬಹುದು.

ಉದಾಹರಣೆಗೆ, ಈ ಅಪ್ಲಿಕೇಶನ್‌ನ ಸಹಾಯದಿಂದ ನಮ್ಮ ಸುತ್ತಮುತ್ತ ಯಾವ ಆಯುಷ್ಮಾನ್ ಭಾರತ್ ಆಸ್ಪತ್ರೆಗಳಿವೆ ಎಂಬುದನ್ನು ಸಹ ನಾವು ತಿಳಿದುಕೊಳ್ಳಬಹುದು. ರೈತರು ತಮ್ಮ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಎಲ್ಲಿ ಸಿಗುತ್ತದೆ ಎಂಬುದನ್ನು ಈ ಆ್ಯಪ್ ಮೂಲಕ ತಿಳಿದುಕೊಳ್ಳಬಹುದು. ಈ ಸೂಪರ್ ಆಪ್ ನ ಮತ್ತೊಂದು ವಿಶೇಷತೆ ಏನೆಂದರೆ ಇದನ್ನು ಬಹು ಭಾಷಾಗಳಿಗೆ ಅನ್ವಯವಾಗುವಂತೆ ತಯಾರಿಸಲಾಗಿದೆ. ಈ ಅಪ್ಲಿಕೇಶನ್ 13 ವಿವಿಧ ಭಾಷೆಗಳಲ್ಲಿ ಕಾರ್ಯನಿರ್ವಹಿಸುತ್ತದೆ. ಏಕೆಂದರೆ ಇದನ್ನು ಸಾಮಾನ್ಯ ಜನರ ಅನುಕೂಲಕ್ಕಾಗಿ ಮಾಡಲಾಗಿದೆ. ಅಂದರೆ ನಮಗೆ ಇಷ್ಟವಾದ ಭಾಷೆಯಲ್ಲಿ ಮಾಹಿತಿ ಪಡೆಯಬಹುದು. ಈ ನಡುವೆ ಕೇಂದ್ರ ಸಚಿವೆ ಅಶ್ವಿನಿ ವೈಷ್ಣವ್ ಈ ಸೂಪರ್ ಆಪ್ ಬಗ್ಗೆ ಟ್ವೀಟ್ ಮಾಡಿದ್ದಾರೆ.

ಸುಂದರ್ ಪಿಚೈ (Sundar Pichai) ಟ್ವೀಟ್..

ನವದೆಹಲಿಯಲ್ಲಿ ನಡೆದ ಒಂಬತ್ತನೇ ವಾರ್ಷಿಕ ಗೂಗಲ್ ಫಾರ್ ಇಂಡಿಯಾ ಈವೆಂಟ್‌ನಲ್ಲಿ ಹಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಗೂಗಲ್ ಇಂಡಿಯಾ ಉಪಾಧ್ಯಕ್ಷ ಸಂಜಯ್ ಗುಪ್ತಾ ಘೋಷಿಸಿದ್ದಾರೆ. ಈವೆಂಟ್‌ನಲ್ಲಿ, ಅವರು ಹೊಸ ಉತ್ಪಾದಕ AI-ಚಾಲಿತ ಪಾಲುದಾರಿಕೆಗಳು ಮತ್ತು ಹೂಡಿಕೆಗಳನ್ನು ಘೋಷಿಸಿದರು.

VIDEO: ಮಂಕಡ್ ರನೌಟ್​ಗೆ ಅಪೀಲ್​ ಮಾಡುತ್ತಿದ್ದಂತೆ, ವಿರಾಟ್ ಕೊಹ್ಲಿ ಆಕ್ರೋಶ
VIDEO: ಮಂಕಡ್ ರನೌಟ್​ಗೆ ಅಪೀಲ್​ ಮಾಡುತ್ತಿದ್ದಂತೆ, ವಿರಾಟ್ ಕೊಹ್ಲಿ ಆಕ್ರೋಶ
ಪರೀಕ್ಷಾರ್ಥ ಹಾರಾಟ ವೇಳೆ ಸಮುದ್ರಕ್ಕೆ ಅಪ್ಪಳಿಸಿದ ಸ್ಪೇಸ್​ಎಕ್ಸ್​ನ ರಾಕೆಟ್
ಪರೀಕ್ಷಾರ್ಥ ಹಾರಾಟ ವೇಳೆ ಸಮುದ್ರಕ್ಕೆ ಅಪ್ಪಳಿಸಿದ ಸ್ಪೇಸ್​ಎಕ್ಸ್​ನ ರಾಕೆಟ್
VIDEO: ದಿಗ್ವೇಶ್ ಮಹಾ ಎಡವಟ್ಟು... ಇದೇ ಕಾರಣಕ್ಕೆ ಅಂಪೈರ್ ಔಟ್ ನೀಡಿಲ್ಲ
VIDEO: ದಿಗ್ವೇಶ್ ಮಹಾ ಎಡವಟ್ಟು... ಇದೇ ಕಾರಣಕ್ಕೆ ಅಂಪೈರ್ ಔಟ್ ನೀಡಿಲ್ಲ
ವಸ್ತ್ರದಾನದ ಮಹತ್ವ ಬಗ್ಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ
ವಸ್ತ್ರದಾನದ ಮಹತ್ವ ಬಗ್ಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ
ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದ್ದು, ಆರ್ಥಿಕವಾಗಿ ಪ್ರಗತಿ ಹೊಂದುವರು
ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದ್ದು, ಆರ್ಥಿಕವಾಗಿ ಪ್ರಗತಿ ಹೊಂದುವರು
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್
ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್