AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Google Jobs: ಅಮೆರಿಕದಲ್ಲಿ ಲೇ ಆಫ್ ಮಾಡಿದರೂ ಭಾರತದಲ್ಲಿ ಉದ್ಯೋಗಾವಕಾಶ ಹೆಚ್ಚಿಸಿದ ಗೂಗಲ್

Google hiring in USA: ಇಂಟರ್ನೆಟ್ ತಂತ್ರಜ್ಞಾನ ಸಂಸ್ಥೆ ಗೂಗಲ್ ಅಮೆರಿಕದಲ್ಲಿ ಕಳೆದ ವಾರ 200ಕ್ಕೂ ಹೆಚ್ಚು ಪ್ರಮುಖ ಎಂಜಿನಿಯರುಗಳನ್ನು ಕೆಲಸದಿಂದ ತೆಗೆದುಹಾಕಿದೆ. ವೆಚ್ಚ ಕಡಿತದ ಉದ್ದೇಶದಿಂದ ಗೂಗಲ್ ಈ ಕ್ರಮ ಕೈಗೊಂಡಿದೆ. ಲೇ ಆಫ್ ಆದವರಲ್ಲಿ ಹೆಚ್ಚಿನವರು ಅಮೆರಿಕದಲ್ಲಿರುವ ಗೂಗಲ್​ನ ನುರಿತ ತಂತ್ರಜ್ಞರೇ ಆಗಿದ್ದಾರೆ. ಈಗ ಭಾರತ, ಜರ್ಮನಿ, ಮೆಕ್ಸಿಕೋದಲ್ಲಿ ಆ ಸ್ಥಾನಗಳಿಗೆ ನೇಮಕಾತಿ ಮಾಡಲು ಗೂಗಲ್ ನಿರ್ಧರಿಸಿರುವುದು ತಿಳಿದುಬಂದಿದೆ.

Google Jobs: ಅಮೆರಿಕದಲ್ಲಿ ಲೇ ಆಫ್ ಮಾಡಿದರೂ ಭಾರತದಲ್ಲಿ ಉದ್ಯೋಗಾವಕಾಶ ಹೆಚ್ಚಿಸಿದ ಗೂಗಲ್
ಗೂಗಲ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 02, 2024 | 11:31 AM

Share

ನವದೆಹಲಿ, ಮೇ 2: ಗೂಗಲ್ ಸಂಸ್ಥೆ ಕಳೆದ ಎರಡು ಮೂರು ವರ್ಷಗಳಿಂದ ಮಾಡುತ್ತಾ ಬಂದಿರುವ ಉದ್ಯೋಗ ಕಡಿತ (job cut) ಪ್ರಕ್ರಿಯೆ ಮುಂದುವರಿದಿದೆ. ಇತ್ತೀಚೆಗೆ ಗೂಗಲ್​ನ ಕೋರ್ ಟೀಮ್ ಅಥವಾ ಪ್ರಮುಖ ತಂತ್ರಜ್ಞರ ತಂಡಗಳಲ್ಲಿ ಸುಮಾರು 200 ಉದ್ಯೋಗಿಗಳನ್ನು ಲೇ ಆಫ್ ಮಾಡಿದೆ. ಇವರಲ್ಲಿ ಹೆಚ್ಚಿನವರು ಅಮೆರಿಕದ ಗೂಗಲ್ ಕಚೇರಿಗಳಲ್ಲಿ ಕೆಲಸ ಮಾಡುವವರೇ ಆಗಿದ್ದಾರೆ. ಕ್ಯಾಲಿಫೋರ್ನಿಯಾದಲ್ಲಿರುವ ಗೂಗಲ್ ಪ್ರಧಾನ ಕಚೇರಿಯಲ್ಲಿನ ಎಂಜಿನಿಯರಿಂಗ್ ತಂಡದಿಂದಲೇ 50ಕ್ಕೂ ಹೆಚ್ಚು ಮಂದಿ ಕೆಲಸ ಕಳೆದುಕೊಂಡಿದ್ದಾರೆ. ಇದೇ ವೇಳೆ ಬೇರೆ ದೇಶಗಳಲ್ಲಿ ಗೂಗಲ್ ನೇಮಕಾತಿ ಹೆಚ್ಚಿಸುತ್ತಿದೆ. ವರದಿಗಳ ಪ್ರಕಾರ ಮೆಕ್ಸಿಕೋ, ಭಾರತ, ಜರ್ಮನಿ ಮೊದಲಾದೆಡೆ ಗೂಗಲ್​ನಲ್ಲಿ ಉದ್ಯೋಗಾವಕಾಶ ಹೆಚ್ಚಲಿದೆ.

ಈಗ ಲೇ ಆಫ್ ಆಗಿರುವ 200ಕ್ಕೂ ಹೆಚ್ಚು ಮಂದಿಯ ತಂಡ ನುರಿತ ತಂತ್ರಜ್ಞರಿಂದ ಕೂಡಿದ್ದಾಗಿದೆ. ಗೂಗಲ್​ನ ಉತ್ಪನ್ನಗಳ ರೂವಾರಿಯೇ ಈ ತಂಡವಾಗಿತ್ತು. ಆದರೆ, ಅಧಿಕ ಸಂಬಳವಿದ್ದ ಕಾರಣ ವೆಚ್ಚ ಕಡಿತಕ್ಕೆ ಗೂಗಲ್ ಈ ಲೇ ಆಫ್ ಕ್ರಮ ಕೈಗೊಂಡಿದೆ. ಈ ವರ್ಷ ಈ ಪ್ರಮುಖ ತಂಡದಲ್ಲಿ ಆಗಿರುವ ಅತಿದೊಡ್ಡ ಲೇ ಆಫ್ ಇದಾಗಿದೆ ಎಂದು ಹೇಳಲಾಗಿದೆ. ಇದು ಉಳಿದ ಉದ್ಯೋಗಿಗಳನ್ನು ನಿರಾಳಗೊಳಿಸಿದೆ.

ಇದನ್ನೂ ಓದಿ: ಶೇ. 5.25ರಿಂದ ಶೇ. 5.50ರಲ್ಲಿ ಬಡ್ಡಿದರ ಮುಂದುವರಿಸಿದ ಅಮೆರಿಕ; ಬಡ್ಡಿ ಹೆಚ್ಚಳ ಸಾಧ್ಯತೆ ಇಲ್ಲ

ಗೂಗಲ್ ಈಗ ಲೇ ಆಫ್ ಮಾಡಿರುವುದು ಯಾಕೆ?

ಗೂಗಲ್ ಈ ಬಾರಿ ಲೇ ಆಫ್ ಮಾಡಲು ವೆಚ್ಚ ಕಡಿತ ಒಂದು ಕಾರಣವಾಗಿದೆ. ಹಾಗೆಯೇ, ಗೂಗಲ್​ನ ರಚನೆಯನ್ನು ಸರಳಗೊಳಿಸುವುದು, ಕಂಪನಿಯೊಳಗಿನ ಬ್ಯೂರೋಕ್ರಸಿ ವ್ಯವಸ್ಥೆ ಕಡಿಮೆ ಮಾಡುವುದು ಇದರ ಉದ್ದೇಶ.

ಗೂಗಲ್​ಗೆ ಜಾಹೀರಾತುಗಳಿಂದ ಹೆಚ್ಚು ಆದಾಯ ಬರುತ್ತದೆ. ಇತ್ತೀಚೆಗೆ ಅದು ಕಡಿಮೆ ಆಗಿದೆ. ಇದೇ ಕಾರಣಕ್ಕೆ 2022ರಿಂದ ಈಚೆಗೆ 12,000ಕ್ಕೂ ಹೆಚ್ಚು ಉದ್ಯೋಗಿಗಳನ್ನು ಗೂಗಲ್ ಕೆಲಸದಿಂದ ತೆಗೆದುಹಾಕಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು