AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Google Jobs: ಅಮೆರಿಕದಲ್ಲಿ ಲೇ ಆಫ್ ಮಾಡಿದರೂ ಭಾರತದಲ್ಲಿ ಉದ್ಯೋಗಾವಕಾಶ ಹೆಚ್ಚಿಸಿದ ಗೂಗಲ್

Google hiring in USA: ಇಂಟರ್ನೆಟ್ ತಂತ್ರಜ್ಞಾನ ಸಂಸ್ಥೆ ಗೂಗಲ್ ಅಮೆರಿಕದಲ್ಲಿ ಕಳೆದ ವಾರ 200ಕ್ಕೂ ಹೆಚ್ಚು ಪ್ರಮುಖ ಎಂಜಿನಿಯರುಗಳನ್ನು ಕೆಲಸದಿಂದ ತೆಗೆದುಹಾಕಿದೆ. ವೆಚ್ಚ ಕಡಿತದ ಉದ್ದೇಶದಿಂದ ಗೂಗಲ್ ಈ ಕ್ರಮ ಕೈಗೊಂಡಿದೆ. ಲೇ ಆಫ್ ಆದವರಲ್ಲಿ ಹೆಚ್ಚಿನವರು ಅಮೆರಿಕದಲ್ಲಿರುವ ಗೂಗಲ್​ನ ನುರಿತ ತಂತ್ರಜ್ಞರೇ ಆಗಿದ್ದಾರೆ. ಈಗ ಭಾರತ, ಜರ್ಮನಿ, ಮೆಕ್ಸಿಕೋದಲ್ಲಿ ಆ ಸ್ಥಾನಗಳಿಗೆ ನೇಮಕಾತಿ ಮಾಡಲು ಗೂಗಲ್ ನಿರ್ಧರಿಸಿರುವುದು ತಿಳಿದುಬಂದಿದೆ.

Google Jobs: ಅಮೆರಿಕದಲ್ಲಿ ಲೇ ಆಫ್ ಮಾಡಿದರೂ ಭಾರತದಲ್ಲಿ ಉದ್ಯೋಗಾವಕಾಶ ಹೆಚ್ಚಿಸಿದ ಗೂಗಲ್
ಗೂಗಲ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 02, 2024 | 11:31 AM

Share

ನವದೆಹಲಿ, ಮೇ 2: ಗೂಗಲ್ ಸಂಸ್ಥೆ ಕಳೆದ ಎರಡು ಮೂರು ವರ್ಷಗಳಿಂದ ಮಾಡುತ್ತಾ ಬಂದಿರುವ ಉದ್ಯೋಗ ಕಡಿತ (job cut) ಪ್ರಕ್ರಿಯೆ ಮುಂದುವರಿದಿದೆ. ಇತ್ತೀಚೆಗೆ ಗೂಗಲ್​ನ ಕೋರ್ ಟೀಮ್ ಅಥವಾ ಪ್ರಮುಖ ತಂತ್ರಜ್ಞರ ತಂಡಗಳಲ್ಲಿ ಸುಮಾರು 200 ಉದ್ಯೋಗಿಗಳನ್ನು ಲೇ ಆಫ್ ಮಾಡಿದೆ. ಇವರಲ್ಲಿ ಹೆಚ್ಚಿನವರು ಅಮೆರಿಕದ ಗೂಗಲ್ ಕಚೇರಿಗಳಲ್ಲಿ ಕೆಲಸ ಮಾಡುವವರೇ ಆಗಿದ್ದಾರೆ. ಕ್ಯಾಲಿಫೋರ್ನಿಯಾದಲ್ಲಿರುವ ಗೂಗಲ್ ಪ್ರಧಾನ ಕಚೇರಿಯಲ್ಲಿನ ಎಂಜಿನಿಯರಿಂಗ್ ತಂಡದಿಂದಲೇ 50ಕ್ಕೂ ಹೆಚ್ಚು ಮಂದಿ ಕೆಲಸ ಕಳೆದುಕೊಂಡಿದ್ದಾರೆ. ಇದೇ ವೇಳೆ ಬೇರೆ ದೇಶಗಳಲ್ಲಿ ಗೂಗಲ್ ನೇಮಕಾತಿ ಹೆಚ್ಚಿಸುತ್ತಿದೆ. ವರದಿಗಳ ಪ್ರಕಾರ ಮೆಕ್ಸಿಕೋ, ಭಾರತ, ಜರ್ಮನಿ ಮೊದಲಾದೆಡೆ ಗೂಗಲ್​ನಲ್ಲಿ ಉದ್ಯೋಗಾವಕಾಶ ಹೆಚ್ಚಲಿದೆ.

ಈಗ ಲೇ ಆಫ್ ಆಗಿರುವ 200ಕ್ಕೂ ಹೆಚ್ಚು ಮಂದಿಯ ತಂಡ ನುರಿತ ತಂತ್ರಜ್ಞರಿಂದ ಕೂಡಿದ್ದಾಗಿದೆ. ಗೂಗಲ್​ನ ಉತ್ಪನ್ನಗಳ ರೂವಾರಿಯೇ ಈ ತಂಡವಾಗಿತ್ತು. ಆದರೆ, ಅಧಿಕ ಸಂಬಳವಿದ್ದ ಕಾರಣ ವೆಚ್ಚ ಕಡಿತಕ್ಕೆ ಗೂಗಲ್ ಈ ಲೇ ಆಫ್ ಕ್ರಮ ಕೈಗೊಂಡಿದೆ. ಈ ವರ್ಷ ಈ ಪ್ರಮುಖ ತಂಡದಲ್ಲಿ ಆಗಿರುವ ಅತಿದೊಡ್ಡ ಲೇ ಆಫ್ ಇದಾಗಿದೆ ಎಂದು ಹೇಳಲಾಗಿದೆ. ಇದು ಉಳಿದ ಉದ್ಯೋಗಿಗಳನ್ನು ನಿರಾಳಗೊಳಿಸಿದೆ.

ಇದನ್ನೂ ಓದಿ: ಶೇ. 5.25ರಿಂದ ಶೇ. 5.50ರಲ್ಲಿ ಬಡ್ಡಿದರ ಮುಂದುವರಿಸಿದ ಅಮೆರಿಕ; ಬಡ್ಡಿ ಹೆಚ್ಚಳ ಸಾಧ್ಯತೆ ಇಲ್ಲ

ಗೂಗಲ್ ಈಗ ಲೇ ಆಫ್ ಮಾಡಿರುವುದು ಯಾಕೆ?

ಗೂಗಲ್ ಈ ಬಾರಿ ಲೇ ಆಫ್ ಮಾಡಲು ವೆಚ್ಚ ಕಡಿತ ಒಂದು ಕಾರಣವಾಗಿದೆ. ಹಾಗೆಯೇ, ಗೂಗಲ್​ನ ರಚನೆಯನ್ನು ಸರಳಗೊಳಿಸುವುದು, ಕಂಪನಿಯೊಳಗಿನ ಬ್ಯೂರೋಕ್ರಸಿ ವ್ಯವಸ್ಥೆ ಕಡಿಮೆ ಮಾಡುವುದು ಇದರ ಉದ್ದೇಶ.

ಗೂಗಲ್​ಗೆ ಜಾಹೀರಾತುಗಳಿಂದ ಹೆಚ್ಚು ಆದಾಯ ಬರುತ್ತದೆ. ಇತ್ತೀಚೆಗೆ ಅದು ಕಡಿಮೆ ಆಗಿದೆ. ಇದೇ ಕಾರಣಕ್ಕೆ 2022ರಿಂದ ಈಚೆಗೆ 12,000ಕ್ಕೂ ಹೆಚ್ಚು ಉದ್ಯೋಗಿಗಳನ್ನು ಗೂಗಲ್ ಕೆಲಸದಿಂದ ತೆಗೆದುಹಾಕಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?