AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Google Jobs: ಅಮೆರಿಕದಲ್ಲಿ ಲೇ ಆಫ್ ಮಾಡಿದರೂ ಭಾರತದಲ್ಲಿ ಉದ್ಯೋಗಾವಕಾಶ ಹೆಚ್ಚಿಸಿದ ಗೂಗಲ್

Google hiring in USA: ಇಂಟರ್ನೆಟ್ ತಂತ್ರಜ್ಞಾನ ಸಂಸ್ಥೆ ಗೂಗಲ್ ಅಮೆರಿಕದಲ್ಲಿ ಕಳೆದ ವಾರ 200ಕ್ಕೂ ಹೆಚ್ಚು ಪ್ರಮುಖ ಎಂಜಿನಿಯರುಗಳನ್ನು ಕೆಲಸದಿಂದ ತೆಗೆದುಹಾಕಿದೆ. ವೆಚ್ಚ ಕಡಿತದ ಉದ್ದೇಶದಿಂದ ಗೂಗಲ್ ಈ ಕ್ರಮ ಕೈಗೊಂಡಿದೆ. ಲೇ ಆಫ್ ಆದವರಲ್ಲಿ ಹೆಚ್ಚಿನವರು ಅಮೆರಿಕದಲ್ಲಿರುವ ಗೂಗಲ್​ನ ನುರಿತ ತಂತ್ರಜ್ಞರೇ ಆಗಿದ್ದಾರೆ. ಈಗ ಭಾರತ, ಜರ್ಮನಿ, ಮೆಕ್ಸಿಕೋದಲ್ಲಿ ಆ ಸ್ಥಾನಗಳಿಗೆ ನೇಮಕಾತಿ ಮಾಡಲು ಗೂಗಲ್ ನಿರ್ಧರಿಸಿರುವುದು ತಿಳಿದುಬಂದಿದೆ.

Google Jobs: ಅಮೆರಿಕದಲ್ಲಿ ಲೇ ಆಫ್ ಮಾಡಿದರೂ ಭಾರತದಲ್ಲಿ ಉದ್ಯೋಗಾವಕಾಶ ಹೆಚ್ಚಿಸಿದ ಗೂಗಲ್
ಗೂಗಲ್
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 02, 2024 | 11:31 AM

ನವದೆಹಲಿ, ಮೇ 2: ಗೂಗಲ್ ಸಂಸ್ಥೆ ಕಳೆದ ಎರಡು ಮೂರು ವರ್ಷಗಳಿಂದ ಮಾಡುತ್ತಾ ಬಂದಿರುವ ಉದ್ಯೋಗ ಕಡಿತ (job cut) ಪ್ರಕ್ರಿಯೆ ಮುಂದುವರಿದಿದೆ. ಇತ್ತೀಚೆಗೆ ಗೂಗಲ್​ನ ಕೋರ್ ಟೀಮ್ ಅಥವಾ ಪ್ರಮುಖ ತಂತ್ರಜ್ಞರ ತಂಡಗಳಲ್ಲಿ ಸುಮಾರು 200 ಉದ್ಯೋಗಿಗಳನ್ನು ಲೇ ಆಫ್ ಮಾಡಿದೆ. ಇವರಲ್ಲಿ ಹೆಚ್ಚಿನವರು ಅಮೆರಿಕದ ಗೂಗಲ್ ಕಚೇರಿಗಳಲ್ಲಿ ಕೆಲಸ ಮಾಡುವವರೇ ಆಗಿದ್ದಾರೆ. ಕ್ಯಾಲಿಫೋರ್ನಿಯಾದಲ್ಲಿರುವ ಗೂಗಲ್ ಪ್ರಧಾನ ಕಚೇರಿಯಲ್ಲಿನ ಎಂಜಿನಿಯರಿಂಗ್ ತಂಡದಿಂದಲೇ 50ಕ್ಕೂ ಹೆಚ್ಚು ಮಂದಿ ಕೆಲಸ ಕಳೆದುಕೊಂಡಿದ್ದಾರೆ. ಇದೇ ವೇಳೆ ಬೇರೆ ದೇಶಗಳಲ್ಲಿ ಗೂಗಲ್ ನೇಮಕಾತಿ ಹೆಚ್ಚಿಸುತ್ತಿದೆ. ವರದಿಗಳ ಪ್ರಕಾರ ಮೆಕ್ಸಿಕೋ, ಭಾರತ, ಜರ್ಮನಿ ಮೊದಲಾದೆಡೆ ಗೂಗಲ್​ನಲ್ಲಿ ಉದ್ಯೋಗಾವಕಾಶ ಹೆಚ್ಚಲಿದೆ.

ಈಗ ಲೇ ಆಫ್ ಆಗಿರುವ 200ಕ್ಕೂ ಹೆಚ್ಚು ಮಂದಿಯ ತಂಡ ನುರಿತ ತಂತ್ರಜ್ಞರಿಂದ ಕೂಡಿದ್ದಾಗಿದೆ. ಗೂಗಲ್​ನ ಉತ್ಪನ್ನಗಳ ರೂವಾರಿಯೇ ಈ ತಂಡವಾಗಿತ್ತು. ಆದರೆ, ಅಧಿಕ ಸಂಬಳವಿದ್ದ ಕಾರಣ ವೆಚ್ಚ ಕಡಿತಕ್ಕೆ ಗೂಗಲ್ ಈ ಲೇ ಆಫ್ ಕ್ರಮ ಕೈಗೊಂಡಿದೆ. ಈ ವರ್ಷ ಈ ಪ್ರಮುಖ ತಂಡದಲ್ಲಿ ಆಗಿರುವ ಅತಿದೊಡ್ಡ ಲೇ ಆಫ್ ಇದಾಗಿದೆ ಎಂದು ಹೇಳಲಾಗಿದೆ. ಇದು ಉಳಿದ ಉದ್ಯೋಗಿಗಳನ್ನು ನಿರಾಳಗೊಳಿಸಿದೆ.

ಇದನ್ನೂ ಓದಿ: ಶೇ. 5.25ರಿಂದ ಶೇ. 5.50ರಲ್ಲಿ ಬಡ್ಡಿದರ ಮುಂದುವರಿಸಿದ ಅಮೆರಿಕ; ಬಡ್ಡಿ ಹೆಚ್ಚಳ ಸಾಧ್ಯತೆ ಇಲ್ಲ

ಗೂಗಲ್ ಈಗ ಲೇ ಆಫ್ ಮಾಡಿರುವುದು ಯಾಕೆ?

ಗೂಗಲ್ ಈ ಬಾರಿ ಲೇ ಆಫ್ ಮಾಡಲು ವೆಚ್ಚ ಕಡಿತ ಒಂದು ಕಾರಣವಾಗಿದೆ. ಹಾಗೆಯೇ, ಗೂಗಲ್​ನ ರಚನೆಯನ್ನು ಸರಳಗೊಳಿಸುವುದು, ಕಂಪನಿಯೊಳಗಿನ ಬ್ಯೂರೋಕ್ರಸಿ ವ್ಯವಸ್ಥೆ ಕಡಿಮೆ ಮಾಡುವುದು ಇದರ ಉದ್ದೇಶ.

ಗೂಗಲ್​ಗೆ ಜಾಹೀರಾತುಗಳಿಂದ ಹೆಚ್ಚು ಆದಾಯ ಬರುತ್ತದೆ. ಇತ್ತೀಚೆಗೆ ಅದು ಕಡಿಮೆ ಆಗಿದೆ. ಇದೇ ಕಾರಣಕ್ಕೆ 2022ರಿಂದ ಈಚೆಗೆ 12,000ಕ್ಕೂ ಹೆಚ್ಚು ಉದ್ಯೋಗಿಗಳನ್ನು ಗೂಗಲ್ ಕೆಲಸದಿಂದ ತೆಗೆದುಹಾಕಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಪಂಜಾಬ್ ವಿರುದ್ಧ RCBಗೆ ಗೆಲವು: ರಾಜ್ಯಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ
ಪಂಜಾಬ್ ವಿರುದ್ಧ RCBಗೆ ಗೆಲವು: ರಾಜ್ಯಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ
ಪಂಜಾಬ್ ವಿರುದ್ಧ RCBಗೆ ಗೆಲವು: ಈ ಸಲ ಕಪ್​ ನಮ್ದೇ...
ಪಂಜಾಬ್ ವಿರುದ್ಧ RCBಗೆ ಗೆಲವು: ಈ ಸಲ ಕಪ್​ ನಮ್ದೇ...
ಕೆಂಪೇಗೌಡ ಪ್ರಾಧಿಕಾರಕ್ಕೆ ಸರ್ಕಾರದಿಂದ ಸುಮನಹಳ್ಳಿ ಬಳಿ 5 ಎಕರೆ ಜಾಗ: DCM
ಕೆಂಪೇಗೌಡ ಪ್ರಾಧಿಕಾರಕ್ಕೆ ಸರ್ಕಾರದಿಂದ ಸುಮನಹಳ್ಳಿ ಬಳಿ 5 ಎಕರೆ ಜಾಗ: DCM
ಕರ್ನಾಟಕದ ಜನರೇ ಕಮಲ್ ಹಾಸನ್​ಗೆ ಪಾಠ ಕಲಿಸಬೇಕು: ಯದುವೀರ್ ಒಡೆಯರ್
ಕರ್ನಾಟಕದ ಜನರೇ ಕಮಲ್ ಹಾಸನ್​ಗೆ ಪಾಠ ಕಲಿಸಬೇಕು: ಯದುವೀರ್ ಒಡೆಯರ್
ಇದು ಒಂದು ರಾಷ್ಟ್ರ, ಒಂದು ಪತಿ ಯೋಜನೆಯಾ? ಭಗವಂತ್ ಮಾನ್ ವಿವಾದಾತ್ಮಕ ಹೇಳಿಕೆ
ಇದು ಒಂದು ರಾಷ್ಟ್ರ, ಒಂದು ಪತಿ ಯೋಜನೆಯಾ? ಭಗವಂತ್ ಮಾನ್ ವಿವಾದಾತ್ಮಕ ಹೇಳಿಕೆ
ರಷ್ಯಾಗೆ ಮತ್ತೊಂದು ಹೊಡೆತ; ಕ್ರಿಮಿಯನ್ ಸೇತುವೆ ಸ್ಫೋಟಗೊಳಿಸಿದ ಉಕ್ರೇನ್​
ರಷ್ಯಾಗೆ ಮತ್ತೊಂದು ಹೊಡೆತ; ಕ್ರಿಮಿಯನ್ ಸೇತುವೆ ಸ್ಫೋಟಗೊಳಿಸಿದ ಉಕ್ರೇನ್​
ಆರ್​ಸಿಬಿ ಗೆಲ್ಲುತ್ತೆ, ಬೈಕ್​ಗಳಲ್ಲಿ ಬೆಂಗಳೂರು ಸುತ್ತುತ್ತೇವೆ: ಯುವಕರು
ಆರ್​ಸಿಬಿ ಗೆಲ್ಲುತ್ತೆ, ಬೈಕ್​ಗಳಲ್ಲಿ ಬೆಂಗಳೂರು ಸುತ್ತುತ್ತೇವೆ: ಯುವಕರು
ಕಮಲ್ ಹಾಸನ್ ವಿವಾದ: ಕನ್ನಡಿಗರು ಕಾನೂನು ಕೈಗೆ ತೆಗೆದುಕೊಳ್ಳಬೇಡಿ: ಡಿಕೆಶಿ
ಕಮಲ್ ಹಾಸನ್ ವಿವಾದ: ಕನ್ನಡಿಗರು ಕಾನೂನು ಕೈಗೆ ತೆಗೆದುಕೊಳ್ಳಬೇಡಿ: ಡಿಕೆಶಿ
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆ ಮೋದಿಯಿಂದ ಉದ್ಘಾಟನೆಗೆ ಸಜ್ಜು
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆ ಮೋದಿಯಿಂದ ಉದ್ಘಾಟನೆಗೆ ಸಜ್ಜು
ಇವತ್ತಿನ ಪಂದ್ಯ ನೋಡಲು ವಿದೇಶಗಳಿಂದಲೂ ಆಗಮಿಸಿರುವ ಭಾರತೀಯರು!
ಇವತ್ತಿನ ಪಂದ್ಯ ನೋಡಲು ವಿದೇಶಗಳಿಂದಲೂ ಆಗಮಿಸಿರುವ ಭಾರತೀಯರು!