ಎಲ್​ಐಸಿ ಏಜೆಂಟ್ಸ್​ಗೆ ಸರ್ಕಾರದಿಂದ ಸಖತ್ ಕೊಡುಗೆ; ಗ್ರಾಜುಟಿ ಮಿತಿ, ಕುಟುಂಬ ಪಿಂಚಣಿ ಇತ್ಯಾದಿಗಳ ಹೆಚ್ಚಳ

Happy News For LIC Employees and Agents: ಎಲ್​ಐಸಿ ಏಜೆಂಟ್​ಗಳಿಗೆ ಸಿಗುವ ಗ್ರಾಚುಟಿಯ ಮಿತಿಯನ್ನು 3 ಲಕ್ಷ ರೂನಿಂದ 5 ಲಕ್ಷ ರೂಗೆ ಏರಿಕೆ; ಏಜೆಂಟ್ ಆಗಿ ಮರು ನೇಮಕವಾದವರಿಗೆ ಅವರ ಹಿಂದಿನ ಏಜೆನ್ಸಿ ವೇಳೆ ಮಾಡಿಸಿದ್ದ ಪಾಲಿಸಿ ವ್ಯವಹಾರದಲ್ಲಿ ರಿನಿವಲ್ ಕಮಿಷನ್ ಅನ್ನು ಪಡೆಯುವ ಅವಕಾಶ; ಟರ್ಮ್ ಇನ್ಷೂರೆನ್ಸ್ ಮೊತ್ತವನ್ನು 1.50 ಲಕ್ಷ ರೂವರೆಗೂ ಏರಿಕೆ ಕ್ರಮಗಳನ್ನು ಸರ್ಕಾರ ಪ್ರಕಟಿಸಿದೆ. ಎಲ್​ಐಸಿ ಉದ್ಯೋಗಿಗಳ ಕುಟುಂಬ ಪಿಂಚಣಿಯನ್ನೂ ಹೆಚ್ಚಿಸಲಾಗಿದೆ.

ಎಲ್​ಐಸಿ ಏಜೆಂಟ್ಸ್​ಗೆ ಸರ್ಕಾರದಿಂದ ಸಖತ್ ಕೊಡುಗೆ; ಗ್ರಾಜುಟಿ ಮಿತಿ, ಕುಟುಂಬ ಪಿಂಚಣಿ ಇತ್ಯಾದಿಗಳ ಹೆಚ್ಚಳ
ಎಲ್​ಐಸಿ
Follow us
|

Updated on: Sep 18, 2023 | 4:32 PM

ನವದೆಹಲಿ, ಸೆಪ್ಟೆಂಬರ್ 18: ಭಾರತೀಯ ಜೀವ ವಿಮಾ ನಿಗಮದ (LIC) ಏಜೆಂಟ್ಸ್ ಮತ್ತು ಉದ್ಯೋಗಿಗಳಿಗೆ ಸಂತಸ ತರುವ ಸುದ್ದಿ ಇದು. ಎಲ್​ಐಸಿಯ ಉದ್ಯೋಗಿಗಳು ಮತ್ತು ಏಜೆಂಟ್​ಗಳಿಗೆ ಸರ್ಕಾರ ವಿವಿಧ ಕೊಡುಗೆಗಳನ್ನು ಪ್ರಕಟಿಸಿದೆ. ಗ್ರಾಚ್ಯುಟಿ ಮಿತಿ, ಮರುನೇಮಿತ ಏಜೆಂಟ್​ಗಳ (Reappointed Agents) ರಿನಿವಲ್ ಕಮಿಷನ್, ಅವಧಿ ವಿಮಾ ವ್ಯಾಪ್ತಿ, ಕುಟುಂಬ ಪಿಂಚಣಿ ಹೆಚ್ಚಳ ಇತ್ಯಾದಿ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಎಲ್​ಐಸಿಯಲ್ಲಿ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಮಂದಿ ಉದ್ಯೋಗಿಗಳಿದ್ದಾರೆ. 13 ಲಕ್ಷಕ್ಕೂ ಹೆಚ್ಚು ಏಜೆಂಟ್​ಗಳಿದ್ದಾರೆ. ಇವರೆಲ್ಲರ ಉತ್ಸಾಹ ಇನ್ನಷ್ಟು ಹೆಚ್ಚುವ ನಿರೀಕ್ಷೆ ಇದೆ.

ಹಣಕಾಸು ಸಚಿವಾಲಯದಿಂದ ಘೋಷಣೆ ಆಗಿರುವ ಕ್ರಮಗಳು

  • ಎಲ್​ಐಸಿ ಏಜೆಂಟ್​ಗಳಿಗೆ ಸಿಗುವ ಗ್ರಾಚುಟಿಯ ಮಿತಿ 3 ಲಕ್ಷದಿಂದ 5 ಲಕ್ಷ ರೂಗೆ ಹೆಚ್ಚಳ ಮಾಡಲಾಗಿದೆ. ಇದು 13 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿರುವ ಏಜೆಂಟ್​ಗಳಿಗೆ ಲಾಭವಾಗಲಿದೆ.
  • ಮರುನೇಮಕವಾದ ಏಜೆಂಟ್​ಗಳಿಗೆ ಅವರ ಹಳೆಯ ಪಾಲಿಸಿ ವ್ಯವಹಾರಗಳ ರಿನಿವಲ್ ಕಮಿಷನ್ ನೀಡಲಾಗುವುದು. ಹಿಂದಿನ ಏಜೆನ್ಸಿಯಲ್ಲಿ ಎಲ್​ಐಸಿ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದಾಗ ಗ್ರಾಹಕರಿಂದ ಮಾಡಿಸಿದ್ದ ಪಾಲಿಸಿಗಳ ರಿನಿವಲ್​ಗೆ ಸಂಬಂಧಿಸಿದ್ದು ಇದು.
  • ಏಜೆಂಟ್​ಗಳಿಗೆ ಟರ್ಮ್ ಇನ್ಷೂರೆನ್ಸ್ ಕವರ್ 3,000 ರೂನಿಂದ 10,000 ರೂವರೆಗಿನ ಶ್ರೇಣಿಯಲ್ಲಿ ಇದೆ. ಇದನ್ನು 25,000ದಿಂದ 1,50,000 ರೂಗೆ ಏರಿಸಲಾಗಿದೆ.
  • ಎಲ್​ಐಸಿ ಉದ್ಯೋಗಿಗಳ ಕುಟುಂಬಗಳ ಯೋಗಕ್ಷೇಮಕ್ಕಾಗಿ ಶೇ. 30ರ ಸಮಾನ ದರದಲ್ಲಿ ಫ್ಯಾಮಿಲಿ ಪೆನ್ಷನ್ ನೀಡಲಾಗುವುದು.

ಇದನ್ನೂ ಓದಿ: ಇಎಂಐ ಕಟ್ಟಲು ಹಿಂದೇಟು ಹಾಕುತ್ತಿದ್ದೀರಾ? ಮನೆಬಾಗಿಲಿಗೆ ಬರಲಿದೆ ಚಾಕೊಲೇಟ್; ಎಸ್​ಬಿಐ ಹೊಸ ಪ್ರಯೋಗ

ಸರ್ಕಾರಿ ಸ್ವಾಮ್ಯದ ಎಲ್​ಐಸಿ ಭಾರತದ ಅತಿದೊಡ್ಡ ಜೀವ ವಿಮಾ ಸಂಸ್ಥೆ ಎಂಬ ದಾಖಲೆಯನ್ನು ಈಗಲೂ ಉಳಿಸಿಕೊಂಡು ಬರುತ್ತಿದೆ. ಹಲವು ಖಾಸಗಿ ವಿಮಾ ಸಂಸ್ಥೆಗಳ ಪೈಪೋಟಿ ನಡುವೆಯೂ ಎಲ್​ಐಸಿ ಪ್ರಾಬಲ್ಯ ಹಾಗೇ ಉಳಿದಿದೆ. ಅದರ ಆದಾಯ ಹೆಚ್ಚಳದ ವೇಗವೂ ವೃದ್ಧಿಸುತ್ತಾ ಬರುತ್ತಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ