AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಮೂರನೇ ಅಲೆ, ಸರ್ಕಾರದ ಪ್ಯಾಕೇಜ್, ಷೇರು ಮಾರುಕಟ್ಟೆ ತನಕ ಮುಖ್ಯ ಆರ್ಥಿಕ ಸಲಹೆಗಾರರು ಹೇಳಿದ್ದೇನು?

CEA KV Subramanian: ಕೊರೊನಾ ಮೂರನೇ ಅಲೆ ಸೇರಿದಂತೆ ಸರ್ಕಾರದ ಉತ್ತೇಜನಾ ಪ್ಯಾಕೇಜ್ ಹಾಗೂ ಷೇರುಪೇಟೆ ಇತ್ಯಾದಿಗಳ ಬಗ್ಗೆ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರ ಕೆ.ವಿ. ಸುಬ್ರಮಣಿಯನ್ ಮಾತನಾಡಿದ್ದಾರೆ.

ಕೊರೊನಾ ಮೂರನೇ ಅಲೆ, ಸರ್ಕಾರದ ಪ್ಯಾಕೇಜ್, ಷೇರು ಮಾರುಕಟ್ಟೆ ತನಕ ಮುಖ್ಯ ಆರ್ಥಿಕ ಸಲಹೆಗಾರರು ಹೇಳಿದ್ದೇನು?
ಮುಖ್ಯ ಆರ್ಥಿಕ ಸಲಹೆಗಾರ ಕೆ.ವಿ. ಸುಬ್ರಮಣಿಯನ್ (ಸಂಗ್ರಹ ಚಿತ್ರ)
Follow us
TV9 Web
| Updated By: Srinivas Mata

Updated on:Jun 03, 2021 | 10:49 PM

ಆರ್ಥಿಕ ಚೇತರಿಕೆಯ ಚಲನೆ ಮೇಲೆ ಕೊರೊನಾ ಎರಡನೇ ಅಲೆಯು ಪರಿಣಾಮ ಬೀರಿದೆ ಎಂದು ಭಾರತದ ಮುಖ್ಯ ಆರ್ಥಿಕ ಸಲಹೆಗಾರ ಕೆ.ವಿ. ಸುಬ್ರಮಣಿಯನ್ ಗುರುವಾರ ಹೇಳಿದ್ದಾರೆ. ಜುಲೈ ನಂತರ ಆರ್ಥಿಕ ಚೇತರಿಕೆಯನ್ನು ನಿರೀಕ್ಷೆ ಮಾಡಬಹುದು ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ. ಸುದ್ದಿ ಸಂಸ್ಥೆಯೊಂದರ ಜತೆಗೆ ಮಾತನಾಡಿ, ಹಲವು ರಾಜ್ಯಗಳು ನಿರ್ಬಂಧಗಳನ್ನು ತೆರವು ಮಾಡಲು ಆರಂಭಿಸಿವೆ. ಲಸಿಕೆ ನೀಡುವ ಅಭಿಯಾನಕ್ಕೆ ನಾವು ವೇಗ ನೀಡಿದಲ್ಲಿ ನಮ್ಮ ಆರ್ಥಿಕತೆ ಚೇತರಿಸಿಕೊಳ್ಳುವುದಕ್ಕೆ ಆರಂಭವಾಗುತ್ತದೆ ಎಂದಿದ್ದಾರೆ. ಈ ಡಿಸೆಂಬರ್​ನೊಳಗೆ ಎಲ್ಲರಿಗೂ ಲಸಿಕೆ ನೀಡುವಲ್ಲಿ ಭಾರತ ಯಶಸ್ವಿ ಆಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿರುವ ಅವರು, ಮೂರು ಪಾಳಿಯಂತೆ ದಿನಕ್ಕೆ 1 ಕೋಟಿ ಜನಕ್ಕೆ ಲಸಿಕೆ ಹಾಕಬಹುದು. ಇದು ಖಂಡಿತಾ ಮಹತ್ವಾಕಾಂಕ್ಷೆಯೇ ಆದರೂ ಅಸಾಧ್ಯ ಅಲ್ಲ. ನಾನು ಎರಡೂ ಡೋಸ್ ಲಸಿಕೆ ಹಾಕಿಸಿಕೊಂಡಿದ್ದೀನಿ. ಎಷ್ಟು ಬೇಗ ಸಾಧ್ಯವೋ ಅಷ್ಟು ಬೇಗ ಎಲ್ಲರೂ ತಾವಾಗಿಯೇ ಲಸಿಕೆ ಹಾಕಿಸಿಕೊಳ್ಳುವುದಕ್ಕೆ ಮುಂದೆ ಬನ್ನಿ ಎಂಬ ಮನವಿ ಮಾಡುತ್ತೇನೆ ಎಂದು ಹೇಳಿದರು.

ದೇಶದ ಬಹುತೇಕ ಭಾಗಗಳಲ್ಲಿ ಕಠಿಣ ಲಾಕ್​ಡೌನ್ ಹೇರಲಾಗಿದೆ. ಮೂಡೀಸ್ ಇನ್ವೆಸ್ಟರ್ಸ್ ಸರ್ವೀಸ್ ಹೇಳಿರುವಂತೆ, ಭಾರತದ ಆರ್ಥಿಕತೆಯು ಪ್ರಸಕ್ತ ಹಣಕಾಸು ವರ್ಷದ ಕೊನೆಯ 2022ರ ಮಾರ್ಚ್​ಗೆ ಹಳಿಗೆ ಮರಳುತ್ತದೆ ಮತ್ತು ಶೇ 9.3ರಷ್ಟು ಬೆಳವಣಿಗೆ ಸಾಧಿಸುತ್ತದೆ. ಈ ಮಧ್ಯೆ ದೇಶದ ಅತಿ ದೊಡ್ಡ ಬ್ಯಾಂಕ್ ಆದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು 2021- 22ನೇ ಸಾಲಿನ ಹಣಕಾಸು ವರ್ಷದ ಬೆಳವಣಿಗೆ ಅಂದಾಜನ್ನು ಇಳಿಕೆ ಮಾಡಿದೆ.

ಇನ್ನು ಕೊರೆನಾದ ಮೂರನೇ ಅಲೆಯ ಬಗ್ಗೆ ಮುಖ್ಯ ಆರ್ಥಿಕ ಸಲಹೆಗಾರರು ಉತ್ತರಿಸಿದ್ದು, ಸದ್ಯಕ್ಕೆ ನಡೆಯುತ್ತಿರುವ ಲಸಿಕೆ ಅಭಿಯಾನ ಕೊರೊನಾ ಬಿಕ್ಕಟ್ಟಿನ ಪರಿಣಾಮವನ್ನು ಗಣನೀಯವಾಗಿ ಕಡಿಮೆ ಮಾಡುತ್ತದೆ. ಹೆಚ್ಚು ಜನರು ಲಸಿಕೆ ಹಾಕಿಸಿಕೊಂಡಷ್ಟೂ ಮೂರನೇ ಅಲೆಯ ಪರಿಣಾಮ ಕಡಿಮೆ ಆಗುತ್ತದೆ. ನಿರೀಕ್ಷೆ ಮಾಡಿದಷ್ಟು ಹಾನಿ ತರುವುದಿಲ್ಲ ಎಂದಿದ್ದಾರೆ. ಕೊರೊನಾವೈರಸ್ ನಮ್ಮ ವಿತ್ತೀಯ ಕೊರತೆ ಹಾಗೂ ಬಂಡವಾಳ ಹಿಂತೆಗೆತ ಗುರಿಯ ಮೇಲೆ ಪರಿಣಾಮ ಮಾಡುವುದಿಲ್ಲ ಎಂದು ಅಭಿಪ್ರಾಯ ಪಟ್ಟಿದ್ದಾರೆ. ಅಂದಹಾಗೆ 2021- 22ನೇ ಸಾಲಿನ ಕೇಂದ್ರ ಬಜೆಟ್​ನಲ್ಲಿ ಶೇ 6.8ರಷ್ಟು ವಿತ್ತೀಯ ಕೊರತೆ ಹಾಗೂ 1.75 ಲಕ್ಷ ಕೋಟಿ ರೂಪಾಯಿ ಬಂಡವಾಳ ಹಿಂತೆಗೆತದ ಗುರಿಯನ್ನು ಇರಿಸಿಕೊಳ್ಳಲಾಗಿದೆ.

ಸರ್ಕಾರದಿಂದ ಉತ್ತೇಜನಾ ಪ್ಯಾಕೇಜ್ ಘೋಷಿಸುವ ಸಾಧ್ಯತೆ ಇದೆಯಾ ಎಂಬ ಪ್ರಶ್ನೆಗೆ ಸುಬ್ರಮಣಿಯನ್ ಉತ್ತರಿಸಿ, ಕಳೆದ ವರ್ಷದ ಬಜೆಟ್​ನಲ್ಲಿ ಕೊರೊನಾ ಬಿಕ್ಕಟ್ಟಿಗೆ ಯಾವುದೇ ಮೀಸಲಿಟ್ಟಿರಲಿಲ್ಲ. ಕಳೆದ ವರ್ಷದ ಬಜೆಟ್​ ನಂತರ ಕೊರೊನಾ ಎದುರಾಯಿತು. ಈ ವರ್ಷದ ಬಜೆಟ್​ನಲ್ಲಿ ಕೊರೊನಾಗೆ ಮೀಸಲಿರಿಸಲಾಗಿದೆ. ಮೂಲಸೌಕರ್ಯ ಹಾಗೂ ನಿರ್ಮಾಣ ವಲಯದ ವೆಚ್ಚದಲ್ಲಿ ಬಜೆಟ್​ ಮೀಸಲಿರಿಸಲಾಗಿದೆ. ಕೊರೊನಾ ಮಧ್ಯೆ ಮೂಲಸೌಕರ್ಯ ಮತ್ತು ನಿರ್ಮಾಣಕ್ಕಾಗಿ ಹೆಚ್ಚು ವೆಚ್ಚ ಮಾಡಿಲ್ಲ. ಸನ್ನಿವೇಶ ಸುಧಾರಿಸುತ್ತಿದ್ದಂತೆಯೇ ಬಜೆಟ್​ನಲ್ಲಿ ಮೀಸಲಿಟ್ಟಂತೆಯೇ ಖರ್ಚು ಮಾಡುತ್ತೇವೆ. ಸರ್ಕಾರ ಕೂಡ ಸನ್ನಿವೇಶದ ಮೌಲ್ಯಮಾಪನ ಮಾಡುತ್ತಿದೆ. ಅಗತ್ಯ ಬಿದ್ದಲ್ಲಿ ಕೇಂದ್ರ ಸರ್ಕಾರವು ಹಾಗೆ ಮಾಡಲು ಸಿದ್ಧ ಎಂದು ಹೇಳಿದ್ದಾರೆ.

ದೇಶದ ಷೇರು ಮಾರುಕಟ್ಟೆ ಬಗ್ಗೆ ಮಾತನಾಡಿದ ಅವರು, ಷೇರು ಮಾರುಕಟ್ಟೆ ದಾಖಲೆ ಮಟ್ಟದಲ್ಲಿದೆ. ಭಾರತದ ಆರ್ಥಿಕತೆ ಉತ್ತಮವಾಗಿ ಕಾರ್ಯ ನಿರ್ವಹಿಸಲಿದೆ ಎಂಬ ನಂಬಿಕೆ ಹೂಡಿಕೆದಾರರಲ್ಲಿದೆ. ಉತ್ತಮ ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿ ಹೊಂದಿದ ದೇಶಗಳು ಭಾರತದ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುತ್ತಿರುವುದರಿಂದ ದಾಖಲೆಯ ಎತ್ತರಕ್ಕೆ ಏರಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಭಾರತ ಮುಳುಗಿಹೋಗಿಲ್ಲ; ಕಾಂಗ್ರೆಸ್ ನಾಯಕ ಚಿದಂಬರಂ ಬೆವರಿಳಿಯುವಂತೆ ಬಿಜೆಪಿ ಸಾಧನೆ ತೆರೆದಿಟ್ಟ ಅನುರಾಗ್ ಠಾಕೂರ್

(Chief Economic Advisor KV Subramanian speaks about corona third wave to govt stimulus package and share market)

Published On - 10:47 pm, Thu, 3 June 21

ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ