AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈರುಳ್ಳಿ ರಫ್ತು ನಿಷೇಧದಿಂದ ಕೆಲ ವರ್ತಕರಿಗೆ ತೊಂದರೆ, ಸಾಮಾನ್ಯರಿಗೆ ಲಾಭ: ಐಎಎಸ್ ಅಧಿಕಾರಿ

Onion Prices: ಈರುಳ್ಳಿ ರಫ್ತು ನಿಷೇಧಿಸಿರುವುದರಿಂದ ಬೆಳೆಗಾರರಿಗೆ ತೊಂದರೆ ಇಲ್ಲ. ಆದರೆ, ಕೆಲವೇ ವರ್ತಕರ ಲಾಭಕ್ಕೆ ಸಂಚಕಾರ ಆಗಬಹುದು. ರಫ್ತು ನಿಷೇಧದಿಂದ ಹೆಚ್ಚಿನ ಲಾಭ ಆಗುವುದು ಸಾಮಾನ್ಯ ಜನರಿಗೆ ಎಂದು ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ ರೋಹಿತ್ ಕುಮಾರ್ ಹೇಳಿದ್ದಾರೆ. ಸದ್ಯ ರಾಷ್ಟ್ರೀಯ ಸರಾಸರಿ ಈರುಳ್ಳಿ ಬೆಲೆ 57 ರೂ ಇದ್ದು ಜನವರಿಯೊಳಗೆ ಅದು 40 ರೂಗೆ ಇಳಿಯಲಿದೆ ಎಂಬುದು ಸರ್ಕಾರದ ನಿರೀಕ್ಷೆ.

ಈರುಳ್ಳಿ ರಫ್ತು ನಿಷೇಧದಿಂದ ಕೆಲ ವರ್ತಕರಿಗೆ ತೊಂದರೆ, ಸಾಮಾನ್ಯರಿಗೆ ಲಾಭ: ಐಎಎಸ್ ಅಧಿಕಾರಿ
ಈರುಳ್ಳಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Dec 11, 2023 | 4:27 PM

Share

ನವದೆಹಲಿ, ಡಿಸೆಂಬರ್ 11: ಏರುಗತಿಯಲ್ಲಿರುವ ಈರುಳ್ಳಿ ಬೆಲೆಯನ್ನು ಕಡಿಮೆ ಮಾಡಲು ಸರ್ಕಾರ ವಿವಿಧ ಕ್ರಮಗಳನ್ನು (Measures to control onion prices) ಕೈಗೊಳ್ಳುತ್ತಿದೆ. ಇನ್ನೆರಡು ತಿಂಗಳಲ್ಲಿ ಅದರ ಬೆಲೆ ಕಿಲೋಗೆ ಬಹಳಷ್ಟು ಕಡಿಮೆ ಆಗುವ ನಿರೀಕ್ಷೆ ಇದೆ. ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆಯ (consumer affairs dept) ಕಾರ್ಯದರ್ಶಿ ರೋಹಿತ್ ಕುಮಾರ್ ಸಿಂಗ್ ನೀಡಿರುವ ಮಾಹಿತಿ ಪ್ರಕಾರ ಜನವರಿ ತಿಂಗಳಿನೊಳಗೆ ಈರುಳ್ಳಿ ಬೆಲೆ ಕಿಲೋಗೆ 40 ರೂಗಿಂತ ಕೆಳಗೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ. ಸದ್ಯ ಈರುಳ್ಳಿ ಬೆಲೆ 80 ರೂ ಆಸುಪಾಸಿನಲ್ಲಿ ಇದೆ.

ಎರಡು ತಿಂಗಳ ಹಿಂದೆ ಟೊಮೆಟೋ ಬೆಲೆ ಕೈಮೀರಿ ಹೋಗಿದ್ದ ಹಿನ್ನೆಲೆಯಲ್ಲಿ ಸರ್ಕಾರ ಈರುಳ್ಳಿ ವಿಚಾರದಲ್ಲಿ ಮುಂಚಿತವಾಗಿ ಎಚ್ಚೆತ್ತುಕೊಂಡಿದೆ. ಈರುಳ್ಳಿ ಮೇಲಿದ್ದ ಕನಿಷ್ಠ ರಫ್ತು ಬೆಲೆಯ ನಿರ್ಬಂಧದ ಬದಲು ಇಡೀ ಈರುಳ್ಳಿ ರಫ್ತನ್ನೇ ನಿಷೇಧಿಸಿದೆ. 2024ರ ಮಾರ್ಚ್ ತಿಂಗಳವರೆಗೂ ಈರುಳ್ಳಿ ರಫ್ತು ಬ್ಯಾನ್ ಆಗಿದೆ.

ಇದನ್ನೂ ಓದಿ: ಚಿನ್ನದ ಬೆಲೆ ಹೆಚ್ಚಾದರೆ ಸಾಲದ ದರ ಹೆಚ್ಚುತ್ತದಾ, ಕಡಿಮೆ ಆಗುತ್ತದಾ? ಇಲ್ಲಿದೆ ಡೀಟೇಲ್ಸ್

ಕನ್ಸೂಮರ್ ಅಫೇರ್ಸ್ ಇಲಾಖೆಯ ಕಾರ್ಯದರ್ಶಿ ರೋಹಿತ್ ಕುಮಾರ್, ಈರುಳ್ಳಿ ಬೆಲೆ ಯಾವಾಗ ತಗ್ಗುತ್ತದೆ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ, ‘ಬಹಳ ಶೀಘ್ರದಲ್ಲಿ… ಜನರಿಯಲ್ಲಿ ಬೆಲೆ ಇಳಿಯಲಿದೆ,’ ಎಂದು ಮಾಹಿತಿ ನೀಡಿದ್ದಾರೆ.

‘ಕೆಲವರು ಈರುಳ್ಳಿ ಕಿಲೋಗೆ 100 ರೂ ಮುಟ್ಟುತ್ತದೆ ಎಂದಿದ್ದರು. ಅದು 60 ರೂ ಬೆಲೆ ದಾಟುವುದಿಲ್ಲ ಎಂದು ನಾವು ಹೇಳಿದ್ದೆವು. ಈಗ ದೇಶದಲ್ಲಿ ಸರಾಸರಿ ಬೆಲೆ 57.02 ರೂ ಇದೆ. ಬೆಲೆ 60 ರೂ ದಾಟುವುದಿಲ್ಲ,’ ಎಂದು ರೋಹಿತ್ ಕುಮಾರ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Coca Cola: ಭಾರತದಲ್ಲಿ ಮದ್ಯ ಮಾರಾಟಕ್ಕಿಳಿದ ಕೋಕ ಕೋಲ; ರೆಡಿ ಟು ಡ್ರಿಂಕ್ ಲೆಮನ್ ಡೋ ಬಿಡುಗಡೆ

ಈರುಳ್ಳಿ ರಫ್ತು ನಿಷೇಧದಿಂದ ರೈತರಿಗೆ ಮೋಸವಾಗುತ್ತದಾ?

ತಜ್ಞರ ಪ್ರಕಾರ ಈರುಳ್ಳಿ ರಫ್ತನ್ನು ಸರ್ಕಾರ ನಿಷೇಧ ಮಾಡಿದ್ದರಿಂದ ಬೆಳೆಗಾರರಿಗೆ ಯಾವ ಪರಿಣಾಮ ಆಗದು. ಕೆಲವೇ ವರ್ತಕರು ಈರುಳ್ಳಿ ಸಂಗ್ರಹ ಇಟ್ಟುಕೊಂಡು ರಫ್ತಿನ ಮೂಲಕ ಲಾಭ ಮಾಡಿಕೊಳ್ಳುತ್ತಿದ್ದಾರೆ. ರಫ್ತು ನಿಷೇಧದಿಂದ ಈ ವರ್ತಕರ ಅತಿಲಾಭಕ್ಕೆ ಸಂಚಕಾರ ತರಬಹದು.

ಅದಕ್ಕಿಂತ ಹೆಚ್ಚಾಗಿ ರಫ್ತು ನಿಷೇಧದಿಂದ ಈರುಳ್ಳಿ ಬೆಲೆ ಕಡಿಮೆ ಆಗಿ, ಸಾಮಾನ್ಯ ಗ್ರಾಹಕರಿಗೆ ಲಾಭ ಆಗಲಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 4:22 pm, Mon, 11 December 23

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​