AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೂಡಿಕೆದಾರರಿಗೆ ಉತ್ತಮ ಗಳಿಕೆ ತಂದುಕೊಡಲು ಕಾರ್ಯತಂತ್ರ ಬದಲಿಸಿ: ಎಲ್​ಐಸಿಗೆ ಸರ್ಕಾರ

ಹೂಡಿಕೆದಾರರಿಗೆ ಉತ್ತಮ ಗಳಿಕೆ ತಂದುಕೊಡುವ ನಿಟ್ಟಿನಲ್ಲಿ ಉತ್ಪನ್ನ ತಂತ್ರಗಾರಿಕೆಯಲ್ಲಿ ಬದಲಾವಣೆ ಮಾಡಲು ಜೀವ ವಿಮಾ ಸಂಸ್ಥೆ ಎಲ್​ಐಸಿಗೆ ಉತ್ತೇಜನ ನೀಡಲು ಸರ್ಕಾರ ಮುಂದಾಗಿದೆ.

ಹೂಡಿಕೆದಾರರಿಗೆ ಉತ್ತಮ ಗಳಿಕೆ ತಂದುಕೊಡಲು ಕಾರ್ಯತಂತ್ರ ಬದಲಿಸಿ: ಎಲ್​ಐಸಿಗೆ ಸರ್ಕಾರ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Oct 26, 2022 | 3:41 PM

Share

ನವದೆಹಲಿ: ಹೂಡಿಕೆದಾರರಿಗೆ ಉತ್ತಮ ಗಳಿಕೆ ತಂದುಕೊಡುವ ನಿಟ್ಟಿನಲ್ಲಿ ಉತ್ಪನ್ನ ತಂತ್ರಗಾರಿಕೆಯಲ್ಲಿ ಬದಲಾವಣೆ ಮಾಡಲು ಜೀವ ವಿಮಾ ಸಂಸ್ಥೆ ಎಲ್​ಐಸಿಗೆ (LIC) ಉತ್ತೇಜನ ನೀಡಲು ಸರ್ಕಾರ ಮುಂದಾಗಿದೆ. ತನ್ನ ಸಂಪೂರ್ಣ ಬೆಳವಣಿಗೆಯ ಸಾಮರ್ಥ್ಯವನ್ನು ಅರಿತುಕೊಳ್ಳಲು ಮತ್ತು ಹೂಡಿಕೆದಾರರಿಗೆ ಉತ್ತಮ ಆದಾಯವನ್ನು ತಂದುಕೊಡುವಂತೆ ಮಾಡಲು ಎಲ್​ಐಸಿಗೆ ಸಹಾಯ ಮಾಡುವ ಪ್ರಯತ್ನದಲ್ಲಿ ಸರ್ಕಾರ ನಿರತವಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜೀವ ವಿಮಾ ನಿಗಮವು ಷೇರು ಮಾರುಕಟ್ಟೆಯಲ್ಲಿ 949 ರೂ. ಆರಂಭಿಕ ಮುಖಬೆಲೆಯೊಂದಿಗೆ ಮೇ 17ರಂದು ಷೇರು ವಹಿವಾಟು (ಐಪಿಒ ಅಥವಾ ಇನೀಷಿಯಲ್ ಪಬ್ಲಿಕ್ ಆಫರಿಂಗ್) ಆರಂಭಿಸಿತ್ತು. ಆ ಬಳಿಕ ಅದಕ್ಕಿಂತ ಕಡಿಮೆ ಬೆಲೆಯಲ್ಲೇ ಟ್ರೇಡಿಂಗ್ ನಡೆಸುತ್ತಿದೆ. 872 ರೂ. ಮುಖಬೆಲೆಯೊಂದಿಗೆ ಎಲ್​ಐಸಿ ಷೇರನ್ನು ಎನ್​ಎಸ್​ಇಯಲ್ಲಿ ಪರಿಚಯಿಸಲಾಗಿತ್ತು.

ಮಂಗಳವಾರದ ವಹಿವಾಟಿನ ಕೊನೆಯಲ್ಲಿ ಎಲ್​ಐಸಿ ಷೇರು 595.50 ರೂ. ಮುಖಬೆಲೆಯೊಂದಿಗೆ ವಹಿವಾಟು ನಡೆಸುತ್ತಿದೆ. ಇದು ಸೋಮವಾರದ ವಹಿವಾಟಿನ ಮುಕ್ತಾಯದ ಸಂದರ್ಭದಲ್ಲಿದ್ದ ಮೌಲ್ಯಕ್ಕಿಂತಲೂ ಶೇಕಡಾ 0.72 ಕಡಿಮೆಯಾಗಿದೆ.

ಇದನ್ನೂ ಓದಿ
Image
Banking Frauds: ಆನ್​ಲೈನ್ ಮಾರುಕಟ್ಟೆಯಲ್ಲಿ ವ್ಯವಹರಿಸುವಾಗ ಹೀಗೆ ಮೋಸ ಹೋಗಬೇಡಿ
Image
CCI Fine on Google: ಬಳಕೆದಾರರು, ಡೆವಲಪರ್​ಗಳಿಗೆ ಬದ್ಧರಾಗಿದ್ದೇವೆ; ಸಿಸಿಐ ದಂಡಕ್ಕೆ ಗೂಗಲ್ ಪ್ರತಿಕ್ರಿಯೆ
Image
Tech Stocks: ಗೂಗಲ್, ಮೈಕ್ರೋಸಾಫ್ಟ್ ನಿರಾಶಾದಾಯಕ ಫಲಿತಾಂಶ; ಐಟಿ ಷೇರುಗಳಲ್ಲಿ ಕುಸಿತ
Image
Pre-approved Personal Loan: ಪ್ರಿ ಅಪ್ರೂವ್ಡ್ ಪರ್ಸನಲ್ ಲೋನ್, ಅನಿವಾರ್ಯವಿದ್ದರಷ್ಟೇ ಪಡೆಯಿರಿ

ಇದನ್ನೂ ಓದಿ: LIC Pension Plus: ಹೊಸ ಪಿಂಚಣಿ ಯೋಜನೆ ಪರಿಚಯಿಸಿದ ಎಲ್​ಐಸಿ; ಅರ್ಹತೆಗಳು ಮತ್ತು ವೈಶಿಷ್ಟ್ಯಗಳು ಇಲ್ಲಿವೆ

ವಿದೇಶಿ ಬ್ರೋಕರೇಜ್​ಗಳು ಮುಂದಿನ ವರ್ಷಕ್ಕೆ ಎಲ್​ಐಸಿಗೆ ಉತ್ತಮ ದರದ ನಿರೀಕ್ಷೆಯಲ್ಲಿದ್ದು, ವಿಮಾ ಕಂಪನಿಯು ಮಧ್ಯಮ ಅವಧಿಗೆ ಉತ್ತಮ ಮಾರುಕಟ್ಟೆ ಸಾಮರ್ಥ್ಯ ಹೊಂದಿದೆ ಎಂದು ಭಾವಿಸಿದ್ದಾರೆ. ಅತಿ ಹೆಚ್ಚಿನ ರಿಸ್ಕ್​ ಅನ್ನು ಕಡೆಗಣಿಸಿ ಉತ್ತಮ ‘ರಿಟರ್ನ್ ಆನ್ ಎಂಬೆಡೆಡ್ ವ್ಯಾಲ್ಯೂ (ಕಂಪನಿಯ ಬಂಡವಾಳ, ಸರ್​ಪ್ಲಸ್​ಗೆ ಭವಿಷ್ಯದ ಲಾಭಗಳ ಪ್ರಸಕ್ತ ಮೌಲ್ಯವನ್ನು ಲೆಕ್ಕ ಹಾಕುವುದು)’ ನಿರೀಕ್ಷೆಯಲ್ಲಿದ್ದಾರೆ.

ಅಕ್ಟೋಬರ್ 14ಕ್ಕೆ ಪ್ರಕಟವಾದ ಸಿಟಿ ಸಂಶೋಧನಾ ವರದಿಯಲ್ಲಿ ಎಲ್​ಐಸಿ ಭವಿಷ್ಯದಲ್ಲಿ ಉತ್ತಮ ಗಳಿಕೆ ತರಬಲ್ಲದು ಎಂದು ಹೇಳಲಾಗಿದ್ದು, 1000 ರೂ. ಟಾರ್ಗೆಟ್ ಪ್ರೈಸ್ ನಿಗದಿಪಡಿಸಲಾಗಿದೆ.

ಹೂಡಿಕೆದಾರರಿಗೆ ಉತ್ತಮ ಸಂಪತ್ತು ಮರಳಿಸಲು ಗಮನಹರಿಸಬೇಕು. ಉತ್ತಮವಾಗಿ ಕಾರ್ಯನಿರ್ವಹಿಸದ ಉತ್ಪನ್ನಗಳ ಲಾಭದಾಯಕತೆಯನ್ನು ಸುಧಾರಿಸುವುದಕ್ಕಾಗಿ ಯೋಜನೆಗಳನ್ನು ರೂಪಿಸಿ ಅವುಗಳ ಮೇಲೆ ಗಮನ ಕೇಂದ್ರೀಕರಿಸುವಂತೆ ಹಣಕಾಸು ಸಚಿವಾಲಯವು ಇತ್ತೀಚೆಗೆ ನಡೆದ ಪರಾಮರ್ಶೆ ಸಭೆಯಲ್ಲಿ ಎಲ್​ಐಸಿಗೆ ಸೂಚಿಸಿತ್ತು.

ವರ್ಷ ಹಿಂದಿನ ಮೊದಲ ತ್ರೈಮಾಸಿಕಕ್ಕೆ ಹೋಲಿಸಿದರೆ ಈ ವರ್ಷ ಎಲ್​ಐಸಿ ನಿವ್ವಳ ಲಾಭ 682.88 ಕೋಟಿ ರೂ.ಗೆ ಹೆಚ್ಚಳವಾಗಿತ್ತು. ಕಳೆದ ವರ್ಷ ಇದು 2.94 ಕೋಟಿ ರೂ. ಆಗಿತ್ತು.

ಎಲ್​ಐಸಿಯ ಐಪಿಒ 902-949 ರೂ. ಮುಖಬೆಲೆಯೊಂದಿಗೆ ಆರಂಭಗೊಂಡಿತ್ತು. ಇದರಿಂದ ಸರ್ಕಾರದ ಬೊಕ್ಕಸಕ್ಕೆ 21,000 ಕೋಟಿ ರೂ. ಹರಿದುಬಂದಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ