AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದ ಟ್ಯಾರಿಫ್ ಎದುರಿಸಲು ಸರ್ಕಾರದಿಂದ 4 ಸ್ಕೀಮ್​ಗಳ ಪ್ಯಾಕೇಜ್ ಬಿಡುಗಡೆ ಸಾಧ್ಯತೆ

Government plans for package of 4 schemes: ಅಮೆರಿಕ ವಿಧಿಸಿರುವ ಶೇ. 50 ಟ್ಯಾರಿಫ್​ನಿಂದ ಭಾರತದ ಹಲವು ಉದ್ದಿಮೆಗಳಿಗೆ ಸಂಕಷ್ಟದ ಸ್ಥಿತಿ ಎದುರಾಗುವ ಸಂಭವ ಇದೆ. ಈ ಸಂಕಷ್ಟ ಪರಿಸ್ಥಿತಿಗೆ ಈ ಉದ್ದಿಮೆಗಳು ಎದುರಿಸುವಂತೆ ಬೆಂಬಲವಾಗಿ ಸರ್ಕಾರ 4 ಸ್ಕೀಮ್ ಹೊರತರುವ ಯೋಜನೆಯಲ್ಲಿದೆ. ಕೋವಿಡ್ ಸಂದರ್ಭದಲ್ಲಿ ಸರ್ಕಾರವು ಉದ್ಯಮಗಳಿಗೆ ಬೆಂಬಲವಾಗಿ ಬಿಡುಗಡೆ ಮಾಡಿದ ನೆರವಿನ ಪ್ಯಾಕೇಜ್ ರೀತಿಯಲ್ಲಿ ಈ ಸ್ಕೀಮ್​ಗಳು ಇರಲಿವೆ.

ಅಮೆರಿಕದ ಟ್ಯಾರಿಫ್ ಎದುರಿಸಲು ಸರ್ಕಾರದಿಂದ 4 ಸ್ಕೀಮ್​ಗಳ ಪ್ಯಾಕೇಜ್ ಬಿಡುಗಡೆ ಸಾಧ್ಯತೆ
ಸಣ್ಣ ಉದ್ದಿಮೆಗಳು
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 03, 2025 | 5:33 PM

Share

ನವದೆಹಲಿ, ಸೆಪ್ಟೆಂಬರ್ 3: ಭಾರತದ ಮೇಲೆ ಅಮೆರಿಕ ವಿಧಿಸಿರುವ ಶೇ. 50ರಷ್ಟು ಟ್ಯಾರಿಫ್​ನಿಂದ (US tariffs) ಕೆಲ ಸೆಕ್ಟರ್​ಗಳಿಗೆ ಘಾಸಿಯಾಗುವ ನಿರೀಕ್ಷೆ ಇದೆ. ಈ ಉದ್ಯಮಗಳು ನಲುಗಿ ಹೋಗದಂತೆ ಮುನ್ನೆಚ್ಚರಿಕೆಯಾಗಿ ಸರ್ಕಾರವು ವಿವಿಧ ಮಾರ್ಗೋಪಾಯಗಳನ್ನು ಅವಲೋಕಿಸುತ್ತಿದೆ. ಮಾರುಕಟ್ಟೆ ವಿಸ್ತರಣೆ ಇತ್ಯಾದಿ ಕ್ರಮ ಕೈಗೊಳ್ಳಲಾಗಿದೆ. ಇದರ ಜೊತೆಗೆ ಸರ್ಕಾರವು ರಫ್ತುದಾರರಿಗೆ ಬೆಂಬಲವಾಗಿ ಸಮಗ್ರ ಪ್ಯಾಕೇಜ್ ಬಿಡುಗಡೆ ಮಾಡುವ ಚಿಂತನೆಯಲ್ಲಿದೆ. ಕೇಂದ್ರ ಸಂಪುಟದ (union cabinet) ಮುಂದೆ ಇಂಥದ್ದೊಂದು ಪ್ರಸ್ತಾಪ ಇದ್ದು, ಸದ್ಯದಲ್ಲೇ ತೀರ್ಮಾನ ಆಗುವ ಸಂಭವ ಇದೆ.

ಏನಿದು ಪ್ಯಾಕೇಜ್?

ಅಮೆರಿಕಕ್ಕೆ ಹೆಚ್ಚು ರಫ್ತು ಮಾಡುವ ಉದ್ಯಮಗಳಿಗೆ ಆಗಬಹುದಾದ ಸಂಭವನೀಯ ಹಾನಿಯನ್ನು ಸಹಿಸಿಕೊಳ್ಳುವಂತೆ ವಿವಿಧ ಸ್ಕೀಮ್​ಗಳ ಮೂಲಕ ಶಕ್ತಿ ತುಂಬುವ ಆಲೋಚನೆ ಸರ್ಕಾರದ್ದಾಗಿದೆ.

ಜವಳಿ, ಉಡುಗೆ, ಹರಳು, ಆಭರಣ, ಲೆದರ್, ಪಾದರಕ್ಷೆ, ಎಂಜಿನಿಯರಿಂಗ್ ಸರಕು, ಕೃಷಿ, ಸಮುದ್ರ ಆಹಾರ ಇತ್ಯಾದಿ ರಫ್ತು ಅವಲಂಬಿತವಾದ ಹಾಗೂ ಅಧಿಕ ಕಾರ್ಮಿಕರ ಅಗತ್ಯ ಇರುವ ಸೆಕ್ಟರ್​ಗಳಲ್ಲಿ ಸಣ್ಣ ಉದ್ದಿಮೆಗಳು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ. ಇದನ್ನು ತಪ್ಪಿಸಲು ಕೋವಿಡ್ ಸಂದರ್ಭದಲ್ಲಿ ಬಿಡುಗಡೆ ಮಾಡಲಾದ ಪರಿಹಾರ ಪ್ಯಾಕೇಜ್​ಗಳ ಮಾದರಿಯಲ್ಲಿ ಸರ್ಕಾರ ಕ್ರಮ ತೆಗೆದುಕೊಳ್ಳಬಹುದು.

ಇದನ್ನೂ ಓದಿ: ವಿಶ್ವಕ್ಕೆ ಫ್ಯಾಕ್ಟರಿಯಾಗಲು ಭಾರತಕ್ಕೆ ಅಪೂರ್ವ ಅವಕಾಶ; ಆದರೆ, ಚೀನಾ ವಿಚಾರದಲ್ಲಿ ಈ ತಪ್ಪು ಬೇಡ ಎಂದ ಜಾನ್ಸನ್

ಅಂದರೆ, ಕ್ರೆಡಿಟ್ ಗ್ಯಾರಂಟಿ ಸ್ಕೀಮ್​ಗಳ ರೀತಿಯಲ್ಲಿ ಪ್ಯಾಕೇಜ್ ಇರಬಹುದು ಎಂದು ನಿರೀಕ್ಷಿಸಬಹುದು ಎಂದು ಬ್ಯುಸಿನೆಸ್ ಸ್ಟ್ಯಾಂಡರ್ಡ್ ಪತ್ರಿಕೆಯಲ್ಲಿ ಬಂದ ವರದಿಯಲ್ಲಿ ಸುಳಿವು ನೀಡಲಾಗಿದೆ. ಅಂದರೆ, ಅನಿಶ್ಚಿತ ಪರಿಸ್ಥಿತಿ ಕೊನೆಗೊಳ್ಳುವವರೆಗೂ ಅಸ್ತಿತ್ವ ಮುಂದುವರಿಸಿಕೊಂಡು ಹೋಗಲು ಸಾಧ್ಯವಾಗುವಂತೆ ಸುಲಭ ಸಾಲ ನೀಡುವುದು ಇತ್ಯಾದಿ ಉದ್ದೇಶವು ಸರ್ಕಾರಕ್ಕಿದೆ.

ವರದಿ ಪ್ರಕಾರ, ನಾಲ್ಕು ಸ್ಕೀಮ್​ಗಳಿರುವ ನೆರವಿನ ಪ್ಯಾಕೇಜ್ ಅನ್ನು ಸರ್ಕಾರ ಅವಲೋಕಿಸುತ್ತಿದೆ.

ಕೋವಿಡ್ ಸಂದರ್ಭದಲ್ಲಿ ಸರ್ಕಾರ ತೆಗೆದುಕೊಂಡ ಕ್ರಮಗಳೇನು?

ಕೋವಿಡ್ ಬಿಕ್ಕಟ್ಟು ಶುರುವಾಗಿ ಇಡೀ ದೇಶವೇ ಲಾಕ್ ಡೌನ್ ಆಗಿದ್ದಾಗ ಸರ್ಕಾರವು ವಿವಿಧ ಉದ್ದಿಮೆಗಳನ್ನು ಸಂಕಷ್ಟದಿಂದ ತಪ್ಪಿಸಲು 2020ರ ಮೇ ತಿಂಗಳಲ್ಲಿ ಆತ್ಮನಿರ್ಭರ್ ಭಾರತ್ ಪ್ಯಾಕೇಜ್ ಬಿಡುಗಡೆ ಮಾಡಲಾಗಿತ್ತು. ಇದರಲ್ಲಿ 3 ಲಕ್ಷ ಕೋಟಿ ರೂ ಮೊತ್ತದ ತುರ್ತು ಸಾಲ ಖಾತ್ರಿ ಸ್ಕೀಮ್ (ಎಮರ್ಜೆನ್ಸಿ ಕ್ರೆಡಿಟ್ ಲೈನ್ ಗ್ಯಾರಂಟಿ ಸ್ಕೀಮ್) ಪ್ರಮುಖವಾಗಿತ್ತು. ಸಣ್ಣ ಉದ್ದಿಮೆಗಳು ಅಡಮಾನರಹಿತವಾಗಿ ಸಾಲ ಪಡೆಯುವ ಅವಕಾಶ ಕೊಡಲಾಗಿತ್ತು.

ಇದನ್ನೂ ಓದಿ: ಅಮೆರಿಕದಿಂದ ಭಾರತಕ್ಕೆ ಜಾಸ್ತಿ ಲಾಭವಾ? ಭಾರತದಿಂದ ಅಮೆರಿಕಕ್ಕೆ ಹೆಚ್ಚು ಲಾಭವಾ? ಇಲ್ಲಿದೆ ಕಣ್ಣಿಗೆ ಕಾಣದ ಸತ್ಯ

ಇದಲ್ಲದೇ, ನಷ್ಟದ ಎಂಎಸ್​ಎಂಇಗಳಿಗೆ 20,000 ಕೋಟಿ ರೂ ಉಪಸಾಲ ಯೋಜನೆ; ಕ್ರೆಡಿಟ್ ಗ್ಯಾರಂಟಿ ಟ್ರಸ್ಟ್​ಗೆ 4,000 ಕೋಟಿ ರೂ; ಫಂಡ್ ಆಫ್ ಫಂಡ್ಸ್ ಆಗಿ 10,000 ಕೋಟಿ ರೂ ಹೀಗೇ ವಿವಿಧ ಸ್ಕೀಮ್​ಗಳಿರುವ ಪ್ಯಾಕೇಜ್ ಅನ್ನು ಕೋವಿಡ್ ಸಂದರ್ಭದಲ್ಲಿ ಸರ್ಕಾರ ಬಿಡುಗಡೆ ಮಾಡಿತ್ತು. ಕೋವಿಡ್​ನಿಂದ ನೆಲಕಚ್ಚುತ್ತಿದ್ದ ಅನೇಕ ಉದ್ದಿಮೆಗಳು ಉಸಿರು ಹಿಡಿದುಕೊಂಡು ನಿಲ್ಲಲು ಸಾಧ್ಯವಾಗಿತ್ತು.

ಈಗ ಅಮೆರಿಕದ ಟ್ಯಾರಿಫ್ ಸಂಕಷ್ಟವನ್ನು ಎದುರಿಸಲು ಅದೇ ರೀತಿಯ ಉತ್ತೇಜಕಗಳನ್ನು ಬಳಸಲು ಸರ್ಕಾರ ನಿರ್ಧರಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ