AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cryptocurrencies: ಕೆಲವರಿಗಷ್ಟೇ ಭಾರತದಲ್ಲಿ ಕ್ರಿಪ್ಟೋಕರೆನ್ಸಿಯಲ್ಲಿ ಹೂಡಿಕೆ ಅವಕಾಶಕ್ಕೆ ಸರ್ಕಾರ ಚಿಂತನೆ

ಸರ್ಕಾರವು ಕ್ರಿಪ್ಟೋಕರೆನ್ಸಿಯಲ್ಲಿ ಕೆಲವರಿಗೆ ಮಾತ್ರ ವಹಿವಾಟಿಗೆ ಅವಕಾಶ ಮಾಡಿಕೊಡುವ ಸಾಧ್ಯತೆ ಇದೆ. ಆ ಮೂಲಕ ಸಣ್ಣ ಹೂಡಿಕೆದಾರರ ಹಿತರಕ್ಷಣೆಯ ಉದ್ದೇಶ ಹೊಂದಿದೆ. ಅದು ಹೇಗೆ ಆಯ್ದ ಕೆಲವರಿಗೆ ಮಾತ್ರ ಅವಕಾಶ ನೀಡಲು ಸಾಧ್ಯ ಎಂಬ ವಿವರ ಇಲ್ಲಿದೆ.

Cryptocurrencies: ಕೆಲವರಿಗಷ್ಟೇ ಭಾರತದಲ್ಲಿ ಕ್ರಿಪ್ಟೋಕರೆನ್ಸಿಯಲ್ಲಿ ಹೂಡಿಕೆ ಅವಕಾಶಕ್ಕೆ ಸರ್ಕಾರ ಚಿಂತನೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Nov 24, 2021 | 6:02 PM

Share

ಸಣ್ಣ ಹೂಡಿಕೆದಾರರನ್ನು ಸಂರಕ್ಷಿಸುವ ಉದ್ದೇಶದಿಂದ ಕ್ರಿಪ್ಟೋಕರೆನ್ಸಿಗಳನ್ನು ಹಣಕಾಸಿನ ಆಸ್ತಿಯಾಗಿ ಪರಿಗಣಿಸುವ ಪ್ರಸ್ತಾವವನ್ನು ಭಾರತವು ಪರಿಗಣಿಸುತ್ತಿದೆ ಎಂದು ಈ ಬಗ್ಗೆ ಮಾಹಿತಿ ಇರುವವರು ತಿಳಿಸಿದ್ದಾರೆ. ನವೆಂಬರ್ 29ರಿಂದ ಪ್ರಾರಂಭವಾಗುವ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಸಂಸತ್ತಿನಲ್ಲಿ ಮಂಡಿಸಲು ಬಯಸುತ್ತಿರುವ ಮಸೂದೆಯನ್ನು ಅಂತಿಮಗೊಳಿಸಲು ಅಧಿಕಾರಿಗಳು ಹವಣಿಸುತ್ತಿರುವಾಗ ಈ ಚರ್ಚೆಗಳು ಬಂದಿವೆ. ಕಾಯ್ದೆಯು ಡಿಜಿಟಲ್ ಕರೆನ್ಸಿಗಳಲ್ಲಿನ ಹೂಡಿಕೆಗೆ ಕನಿಷ್ಠ ಮೊತ್ತವನ್ನು ನಿಗದಿಪಡಿಸಬಹುದು. ಆದರೆ ಕಾನೂನು ಬದ್ಧವಾಗಿ ಅವುಗಳ ಬಳಕೆಯನ್ನು ನಿಷೇಧಿಸುತ್ತದೆ. ಯಾವುದೇ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳದ ಕಾರಣ ಮೂಲಗಳು ತಮ್ಮ ಗುರುತನ್ನು ಬಹಿರಂಗ ಪಡಿಸಿಲ್ಲ.

ನೀತಿ ನಿರೂಪಕರು ಮಂಗಳವಾರ ತಡರಾತ್ರಿ ಸಂಸತ್ ವೆಬ್‌ಸೈಟ್‌ನಲ್ಲಿ ಮಸೂದೆಯ ವಿವರಣೆಯನ್ನು ಪೋಸ್ಟ್ ಮಾಡಿದಾಗ, “ಕ್ರಿಪ್ಟೋಕರೆನ್ಸಿಯ ಆಧಾರವಾಗಿರುವ ತಂತ್ರಜ್ಞಾನ ಮತ್ತು ಅದರ ಬಳಕೆಗಳನ್ನು ಉತ್ತೇಜಿಸಲು ಕೆಲವು ವಿನಾಯಿತಿಗಳನ್ನು ಹೊರತುಪಡಿಸಿ ಎಲ್ಲ ಖಾಸಗಿ ಕ್ರಿಪ್ಟೋಕರೆನ್ಸಿಗಳನ್ನು ನಿಷೇಧಿಸಲು ಮಸೂದೆ ಪ್ರಯತ್ನಿಸುತ್ತದೆ,” ಎಂದು ಹೇಳುವ ಮೂಲಕ ಕೆಲವು ಮಟ್ಟಿಗೆ ವ್ಯವಹಾರಕ್ಕೆ ಅವಕಾಶ ಹಾಗೇ ಬಿಟ್ಟಂತಿದೆ.

ಈ ಅನಿಶ್ಚಿತತೆಯು ಬುಧವಾರದಂದು ಶಿಬಾ ಇನು ಮತ್ತು Doge Coin ಸೇರಿದಂತೆ ಕ್ರಿಪ್ಟೋಕರೆನ್ಸಿಗಳಲ್ಲಿ ಮಾರಾಟವನ್ನು ಕಾಣುವಂತೆ ಮಾಡಿತು. ಇದು ಭಾರತದ ಪ್ರಮುಖ ಕ್ರಿಪ್ಟೋಕರೆನ್ಸಿ ವಿನಿಮಯ ಕೇಂದ್ರಗಳಲ್ಲಿ ಒಂದಾದ WazirX ಪ್ಲಾಟ್‌ಫಾರ್ಮ್‌ನಲ್ಲಿ ವ್ಯಾಪಾರದಲ್ಲಿ ಒಂದು ಹಂತದಲ್ಲಿ ಶೇ 20ಕ್ಕಿಂತ ಕಡಿಮೆಯಾಯಿತು. Binance ಅಥವಾ Krakenನಂತಹ ವ್ಯಾಪಾರ ಪ್ಲಾಟ್​ಫಾರ್ಮ್​ಗೆ ಹೋಲಿಸಿದರೆ ಕಡಿಮೆ ಪರಿಣಾಮ ಬೀರಿದೆ.

ಈ ಬಗ್ಗೆ ಅಭಿಪ್ರಾಯ ಪಡೆಯುವುದಕ್ಕೆ ಮಾಧ್ಯಮಗಳು ಯತ್ನಿಸಿದಾಗ ಹಣಕಾಸು ಸಚಿವಾಲಯದ ವಕ್ತಾರರನ್ನು ತಕ್ಷಣವೇ ಸಂಪರ್ಕಿಸಲು ಸಾಧ್ಯವಾಗಿಲ್ಲ.

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾವು ಡಿಜಿಟಲ್ ಕರೆನ್ಸಿಗಳ ಮೇಲೆ ಸಂಪೂರ್ಣ ನಿಷೇಧವನ್ನು ಬಯಸುತ್ತದೆ. ಏಕೆಂದರೆ ಇದು ರಾಷ್ಟ್ರದ ಸ್ಥೂಲ ಆರ್ಥಿಕ ಮತ್ತು ಆರ್ಥಿಕ ಸ್ಥಿರತೆಯ ಮೇಲೆ ಪರಿಣಾಮ ಬೀರಬಹುದು ಎಂದು ಕೇಂದ್ರ ಬ್ಯಾಂಕ್ ಭಾವಿಸುತ್ತದೆ. ಮುಂದಿನ ಬಜೆಟ್‌ನಲ್ಲಿ ಕ್ರಿಪ್ಟೋಕರೆನ್ಸಿಯಿಂದ ಬರುವ ಲಾಭದ ಮೇಲೆ ತೆರಿಗೆ ವಿಧಿಸಲು ಸರ್ಕಾರವು ಪರಿಗಣಿಸುತ್ತಿರುವಾಗ, ಗವರ್ನರ್ ಶಕ್ತಿಕಾಂತ ದಾಸ್ ಕಳೆದ ವಾರ ದೇಶಕ್ಕೆ ಈ ವಿಷಯದ ಬಗ್ಗೆ ಹೆಚ್ಚು ಆಳವಾದ ಚರ್ಚೆಗಳ ಅಗತ್ಯವಿದೆ ಎಂದು ಹೇಳಿದ್ದರು. ಪ್ರಧಾನ ಮಂತ್ರಿಗಳ ಕಾರ್ಯಾಲಯವು ಈ ಸಮಸ್ಯೆಯನ್ನು ಸಕ್ರಿಯವಾಗಿ ಗಮನಿಸುತ್ತಿದೆ ಮತ್ತು ಮಸೂದೆಯ ವಿಷಯಗಳು ಅಂತಿಮಗೊಂಡ ನಂತರ ಅದನ್ನು ಸಂಪುಟದ ಅನುಮೋದನೆಗಾಗಿ ತೆಗೆದುಕೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ.

ಈ ತಿಂಗಳ ಆರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕ್ರಿಪ್ಟೋಕರೆನ್ಸಿಗಳ ಕುರಿತು ಸಭೆಯನ್ನು ನಡೆಸಿದ್ದರು. ನಂತರ ಅಧಿಕಾರಿಗಳು ಅನಿಯಂತ್ರಿತ ಕ್ರಿಪ್ಟೋ ಮಾರುಕಟ್ಟೆಗಳನ್ನು ಅಕ್ರಮ ಹಣ ವರ್ಗಾವಣೆ ಮತ್ತು ಭಯೋತ್ಪಾದನೆಗೆ ಹಣಕಾಸು ಒದಗಿಸುವ ಮಾರ್ಗಗಳಾಗಲು ಬಿಡುವುದಿಲ್ಲ ಎಂದು ಹೇಳಿದ್ದರು. ನಂತರ, ಕಳೆದ ವಾರದ ಭಾಷಣದಲ್ಲಿ, ಖಾಸಗಿ ವರ್ಚುವಲ್ ಕರೆನ್ಸಿಗಳನ್ನು ನಿಯಂತ್ರಿಸುವಲ್ಲಿ ಸಹಕರಿಸಲು ಪ್ರಜಾಪ್ರಭುತ್ವ ರಾಷ್ಟ್ರಗಳನ್ನು ಒತ್ತಾಯಿಸಿದ್ದು, ವಿಫಲವಾದರೆ “ತಪ್ಪಾದ ಕೈಗಳಿಗೆ” ಸೇರಬಹುದು ಎಂದಿದ್ದರು.

ಇದನ್ನೂ ಓದಿ: Cryptocurrency Bill ಸಂಸತ್​ನ ಚಳಿಗಾಲದ ಅಧಿವೇಶನದಲ್ಲಿ ಮಂಡನೆಯಾಗಲಿದೆ ಕ್ರಿಪ್ಟೋಕರೆನ್ಸಿ ಮಸೂದೆ

Published On - 5:59 pm, Wed, 24 November 21

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್