AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಲ್ಕು ಸರ್ಕಾರಿ ಬ್ಯಾಂಕುಗಳಲ್ಲಿ ಕೆಲ ಪಾಲನ್ನು ಮಾರಲಿರುವ ಸರ್ಕಾರ; ಸೆಬಿ ನಿಯಮ ಕಾರಣ

Govt stakes to sold through OFS: ನಾಲ್ಕು ಸರ್ಕಾರಿ ಬ್ಯಾಂಕುಗಳಲ್ಲಿ ತಾನು ಹೊಂದಿರುವ ಕೆಲ ಷೇರುಪಾಲನ್ನು ಸರ್ಕಾರ ಮಾರುತ್ತಿದೆ. ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಇಂಡಿಯನ್ ಓವರ್​ಸೀಸ್ ಬ್ಯಾಂಕ್ ಮತ್ತು ಪಂಜಾಬ್ ಅಂಡ್ ಸಿಂದ್ ಬ್ಯಾಂಕುಗಳಲ್ಲಿ ಸರ್ಕಾರದ ಸಾಕಷ್ಟು ಷೇರುಗಳು ಬಿಕರಿಯಾಗಲಿವೆ. ಲಿಸ್ಟೆಡ್ ಕಂಪನಿಗಳು ಕನಿಷ್ಠ ಶೇ. 25ರಷ್ಟಾದರೂ ಪಬ್ಲಿಕ್ ಶೇರ್​ಹೋಲ್ಡಿಂಗ್ ಹೊಂದಿರಬೇಕು ಎನ್ನುವ ಸೆಬಿ ನಿಯಮ ಇದಕ್ಕೆ ಕಾರಣವಾಗಿದೆ.

ನಾಲ್ಕು ಸರ್ಕಾರಿ ಬ್ಯಾಂಕುಗಳಲ್ಲಿ ಕೆಲ ಪಾಲನ್ನು ಮಾರಲಿರುವ ಸರ್ಕಾರ; ಸೆಬಿ ನಿಯಮ ಕಾರಣ
ಷೇರು
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 19, 2024 | 6:03 PM

Share

ನವದೆಹಲಿ, ನವೆಂಬರ್ 19: ಸರ್ಕಾರಿ ಸ್ವಾಮ್ಯದ ನಾಲ್ಕು ಬ್ಯಾಂಕುಗಳಲ್ಲಿ ಸರ್ಕಾರ ಹೊಂದಿರುವ ಕೆಲ ಷೇರುಪಾಲನ್ನು ಮಾರಲಾಗುತ್ತಿದೆ. ಸೆಬಿ ರೂಪಿಸಿರುವ ಪಬ್ಲಿಕ್ ಷೇರ್​ಹೋಲ್ಡಿಂಗ್ ನಿಯಮದಿಂದಾಗಿ ಸರ್ಕಾರವು ಈ ನಾಲ್ಕು ಬ್ಯಾಂಕುಗಳಲ್ಲಿರುವ ತನ್ನ ಪಾಲಿನ ಕೆಲ ಷೇರುಗಳನ್ನು ಮಾರುವುದು ಅನಿವಾರ್ಯ ಎನ್ನಲಾಗಿದೆ. ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಇಂಡಿಯನ್ ಓವರ್​ಸೀಸ್ ಬ್ಯಾಂಕ್, ಯುಕೋ ಬ್ಯಾಂಕ್ ಮತ್ತು ಪಂಜಾಬ್ ಅಂಡ್ ಸಿಂದ್ ಬ್ಯಾಂಕ್​ನಲ್ಲಿ ಸರ್ಕಾರ ತನ್ನ ಕೆಲ ಷೇರುಗಳನ್ನು ಸಾರ್ವಜನಿಕರಿಗೆ ಆಫರ್ ಫಾರ್ ಸೇಲ್ (ಒಎಫ್​ಎಸ್) ಮೂಲಕ ಮಾರಲಿದೆ.

ಏನಿದು ಸೆಬಿಯ ಪಬ್ಲಿಕ್ ಶೇರ್​ಹೋಲ್ಡಿಂಗ್ ನಿಯಮ?

ಷೇರು ಮಾರುಕಟ್ಟೆಯಲ್ಲಿ ಲಿಸ್ಟ್ ಆಗಿರುವ ಕಂಪನಿಗಳು ಕನಿಷ್ಠ ಶೇ. 25ರಷ್ಟು ಪಬ್ಲಿಕ್ ಶೇರ್​ಹೋಲ್ಡಿಂಗ್ ಹೊಂದಿರಬೇಕು. ಅಂದರೆ, ಕಂಪನಿಯ ಶೇ. 25ರಷ್ಟಾದರೂ ಷೇರುಗಳನ್ನು ಸಾರ್ವಜನಿಕರು (ಮಾಲೀಕರಲ್ಲದವರು) ಹೊಂದಿರಬೇಕು ಎನ್ನುತ್ತದೆ ಈ ಸೆಬಿ ನಿಯಮ.

ಇದನ್ನೂ ಓದಿ: ಬೆಂಗಳೂರು ಟೆಕ್ ಸಮಿಟ್ 2024: ನಿಪುಣ ಕರ್ನಾಟಕ ಯೋಜನೆಗೆ ಕೈಜೋಡಿಸಿದ ಟೆಕ್ ಕಂಪನಿಗಳು; ಮೈಕ್ರೋಸಾಫ್ಟ್, ಇಂಟೆಲ್, ಐಬಿಎಂನಿಂದ 1 ಲಕ್ಷ ಯುವಕರಿಗೆ ತರಬೇತಿ

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸರ್ಕಾರ ಶೇ. 93ರಷ್ಟು ಷೇರುಪಾಲು ಹೊಂದಿದೆ. ಇಂಡಿಯನ್ ಓವರ್​ಸೀಸ್ ಬ್ಯಾಂಕ್​ನಲ್ಲಿ ಶೇ. 96.4, ಯುಕೋ ಬ್ಯಾಂಕ್​ನಲ್ಲಿ ಶೇ. 95.4, ಪಂಜಾಬ್ ಅಂಡ್ ಸಿಂದ್ ಬ್ಯಾಂಕ್​ನಲ್ಲಿ ಶೇ. 98.3ರಷ್ಟು ಷೇರುಪಾಲು ಸರ್ಕಾರದ್ದಾಗಿದೆ.

ಷೇರು ಮಾರುಕಟ್ಟೆಯ ನಿಯಂತ್ರಕ ಸಂಸ್ಥೆಯಾದ ಸೆಬಿ ಈ ಪಬ್ಲಿಕ್ ಶೇರ್​ಹೋಲ್ಡಿಂಗ್ ನಿಯಮದಲ್ಲಿ ಸರ್ಕಾರಕ್ಕೆ 2026ರ ಆಗಸ್ಟ್​ವರೆಗೂ ವಿನಾಯಿತಿ ಕೊಟ್ಟಿದೆ. ಅಂದರೆ, 2026ರ ಆಗಸ್ಟ್ ನಂತರ ಯಾವ ಲಿಸ್ಟೆಡ್ ಸರ್ಕಾರಿ ಕಂಪನಿಗಳಲ್ಲಿ ಸರ್ಕಾರ ಶೇ. 75ಕ್ಕಿಂತ ಹೆಚ್ಚು ಷೇರುಪಾಲು ಹೊಂದಿರಲು ಆಗುವುದಿಲ್ಲ.

ಇದನ್ನೂ ಓದಿ: ಕೆನಡಾದಲ್ಲಿ ಭಾರತ ಹಾಗೂ ಇತರ ವಿದೇಶೀ ವಿದ್ಯಾರ್ಥಿಗಳಿಗೆ ಕೆಲಸದ ಮಿತಿ 24 ಗಂಟೆಗಳಿಗೆ ಏರಿಕೆ

ಈ ಪ್ರಕ್ರಿಯೆ ಆರಂಭಿಸಲು ಹಣಕಾಸು ಸಚಿವಾಲಯವು ಮುಂಬರುವ ದಿನಗಳಲ್ಲಿ ಸಂಪುಟದ ಅನುಮೋದನೆಗೆ ಪ್ರಯತ್ನಿಸಬಹುದು ಎಂದು ಬಿಸಿನೆಸ್ ಸ್ಟಾಂಡರ್ಡ್ ಪತ್ರಿಕೆಯಲ್ಲಿ ವರದಿಯಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ