AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಗುಲಾಬಿ ಈರುಳ್ಳಿ ರಫ್ತಿಗೆ ನಿರ್ಬಂಧ ರದ್ದು; ಸೆ. 29ರಿಂದಲೇ ಅನುಮತಿ; ಆದರೆ ಷರತ್ತುಗಳಿವೆ

Bangalore Rose Onion Exports: ತೀವ್ರ ಘಾಟು ಹೊಂದಿರುವ ಗುಲಾಬಿ ಈರುಳ್ಳಿಯ ಮೇಲೆ ಇದ್ದ ರಫ್ತು ಸುಂಕವನ್ನು ಕೇಂದ್ರ ಸರಕಾರ ಕೈಬಿಟ್ಟಿದೆ. ಬೆಂಗಳೂರು ರೋಸ್ ಈರುಳ್ಳಿಯನ್ನು ರಫ್ತು ಮಾಡುವವರು ಕರ್ನಾಟಕದ ತೋಟಗಾರಿಕೆ ಆಯುಕ್ತರಿಂದ ಪ್ರಮಾಣ ಪತ್ರ ಪಡೆಯಬೇಕು. ರಫ್ತಾಗುವ ಈರುಳ್ಳಿ ಪ್ರಮಾಣ ಮತ್ತು ಗುಣಮಟ್ಟದ ಖಾತ್ರಿ ಒದಗಿಸುವ ಈ ಪ್ರಮಾಣಪತ್ರ ಪಡೆದಿದ್ದರೆ ಮಾತ್ರ ರಫ್ತು ಸುಂಕದಿಂದ ವಿನಾಯಿತಿ ಸಿಗುತ್ತದೆ ಎಂದು ಹಣಕಾಸು ಸಚಿವಾಲಯ ಸೆ. 29ರಂದು ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದೆ.

ಬೆಂಗಳೂರು ಗುಲಾಬಿ ಈರುಳ್ಳಿ ರಫ್ತಿಗೆ ನಿರ್ಬಂಧ ರದ್ದು; ಸೆ. 29ರಿಂದಲೇ ಅನುಮತಿ; ಆದರೆ ಷರತ್ತುಗಳಿವೆ
ಈರುಳ್ಳಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 01, 2023 | 4:05 PM

Share

ಬೆಂಗಳೂರು, ಅಕ್ಟೋಬರ್ 1: ತೀವ್ರ ಘಾಟು ಹೊಂದಿರುವ ಗುಲಾಬಿ ಈರುಳ್ಳಿಯ (Bangalore Rose Onion) ಮೇಲೆ ಇದ್ದ ರಫ್ತು ಸುಂಕವನ್ನು ಕೇಂದ್ರ ಸರಕಾರ ಕೈಬಿಟ್ಟಿದೆ. ಕೆಲ ಷರತ್ತುಗಳ ಮೇಲೆ ಬೆಂಗಳೂರು ಗುಲಾಬಿ ಈರುಳ್ಳಿಯ ರಫ್ತಿಗೆ ಪೂರ್ಣಾನುಮತಿ ನೀಡಿ ಕೇಂದ್ರ ಹಣಕಾಸು ಸಚಿವಾಲಯ ಸೆಪ್ಟೆಂಬರ್ 29, ಶುಕ್ರವಾರದಂದು ಅಧಿಸೂಚನೆ ಹೊರಡಿಸಿದೆ. ಈ ಅನುಮತಿ ತತ್​ಕ್ಷಣದಿಂದಲೇ ಜಾರಿ ಆಗುತ್ತದೆ ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ.

ಬೆಂಗಳೂರು ಗುಲಾಬಿ ಈರುಳ್ಳಿಗೆ ರಫ್ತು ಸುಂಕ ವಿನಾಯಿತಿ ಸಿಗಲು ಏನಿದೆ ಷರುತ್ತು?

ಬೆಂಗಳೂರು ರೋಸ್ ಈರುಳ್ಳಿಯನ್ನು ರಫ್ತು ಮಾಡುವವರು ಕರ್ನಾಟಕದ ತೋಟಗಾರಿಕೆ ಆಯುಕ್ತರಿಂದ (Horticulture Department commissioner) ಪ್ರಮಾಣ ಪತ್ರ ಪಡೆಯಬೇಕು. ರಫ್ತಾಗುವ ಈರುಳ್ಳಿ ಪ್ರಮಾಣ ಮತ್ತು ಗುಣಮಟ್ಟದ ಖಾತ್ರಿ ಒದಗಿಸುವ ಈ ಪ್ರಮಾಣಪತ್ರ ಪಡೆದಿದ್ದರೆ ಮಾತ್ರ ರಫ್ತು ಸುಂಕದಿಂದ ವಿನಾಯಿತಿ ಸಿಗುತ್ತದೆ ಎಂದು ಹಣಕಾಸು ಸಚಿವಾಲಯದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಸರ್ಕಾರಿ ನೌಕರರಿಗೆ ಈ ಬಾರಿಯ ಡಿಎ ಹೆಚ್ಚಳ ಶೇ. 3 ಅಲ್ಲ, ಇನ್ನೂ ಹೆಚ್ಚು? ಯಾವ ದಿನ ಪ್ರಕಟವಾಗುತ್ತೆ ತುಟ್ಟಿಭತ್ಯೆ ಏರಿಕೆ ನಿರ್ಧಾರ?

ದೇಶದಲ್ಲಿ ಈರುಳ್ಳಿ ಅಭಾವ ಸೃಷ್ಟಿಯಾಗದಂತೆ ಮತ್ತು ಬೆಲೆ ಏರಿಕೆ ಆಗದಂತೆ ನಿಯಂತ್ರಿಸಲು ಇದೇ ಆಗಸ್ಟ್ ತಿಂಗಳಲ್ಲಿ ಸರ್ಕಾರ ಎಲ್ಲಾ ಬಗೆಯ ಈರುಳ್ಳಿ ಮೇಲೆ ಶೇ. 40ರಷ್ಟು ರಫ್ತು ಸುಂಕ ವಿಧಿಸಿದೆ. ಈಗ ಗುಲಾಬಿ ಈರುಳ್ಳಿಗೆ ರಫ್ತು ಸುಂಕದಿಂದ ವಿನಾಯಿತಿ ಕೊಡಲಾಗಿದೆ.

ಘಾಟು ಘಾಟು ಗುಲಾಬಿ ಈರುಳ್ಳಿ

ಬೆಂಗಳೂರು ಸುತ್ತಮುತ್ತ ಬೆಳೆಯುವ ಒಂದು ವಿಧದ ಈರುಳ್ಳಿ ಇದು. ಅದರಲ್ಲೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಗುಲಾಬಿ ಈರುಳ್ಳಿಯನ್ನು ಹೆಚ್ಚು ಬೆಳೆಯಲಾಗುತ್ತದೆ. ಸಣ್ಣಿಗಿರುವ ಈ ಈರುಳ್ಳಿ ಬಹಳ ಘಾಟು ಹೊಂದಿರುತ್ತದೆ. ಸ್ಥಳೀಯ ಮಾರುಕಟ್ಟೆಯಲ್ಲಿ ಈ ಈರುಳ್ಳಿಗೆ ಅಷ್ಟೇನೂ ಬೇಡಿಕೆ ಇಲ್ಲ. ಆದರೆ, ನಾರಿನಂಶ ಹೆಚ್ಚು ಇರುವ ಈ ತಳಿಯ ಈರುಳ್ಳಿಗೆ ಸಿಂಗಾಪುರ, ಮಲೇಷ್ಯಾ ಮೊದಲಾದ ಕೆಲ ದೇಶಗಳಲ್ಲಿ ಬಹಳ ಬೇಡಿಕೆ ಇದೆ.

ಇದನ್ನೂ ಓದಿ: ಬೆಂಗಳೂರಲ್ಲಿ ಕಾರ್​ಪೂಲಿಂಗ್ ನಿಷೇಧಕ್ಕೆ ಸಾರಿಗೆ ಇಲಾಖೆ ಮುಂದು; 10,000 ರೂ ವರೆಗೆ ದಂಡ ವಿಧಿಸುವ ಸಾಧ್ಯತೆ

ಹೀಗಾಗಿ, ಗುಲಾಬಿ ಈರುಳ್ಳಿ ಬೆಳೆಗಾರರು ತಮ್ಮ ಉತ್ಪನ್ನವನ್ನು ಮಾರಿ, ಮಾಮೂಲಿಯ ಈರುಳ್ಳಿಯನ್ನು ಖರೀದಿಸಿ ಊರಿಗೆ ಮರಳುವುದುಂಟು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!