AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಜೆಟ್​ನಲ್ಲಿ ಸುಂಕ ಇಳಿಸಿದ್ದೇವೆ, ಗ್ರಾಹಕರಿಗೂ ಬೆಲೆ ಇಳಿಸಿ: ಔಷಧ ಕಂಪನಿಗಳಿಗೆ ಸರ್ಕಾರ ಸೂಚನೆ

Custom duty exemption on medicines: ಆಮದು ಸುಂಕ ವಿನಾಯಿತಿ ಪಡೆದ ಔಷಧಗಳ ಬೆಲೆಗಳನ್ನು ಅದಕ್ಕೆ ಅನುಗುಣವಾಗಿ ಇಳಿಕೆ ಮಾಡುವಂತೆ ಸರ್ಕಾರವು ಔಷಧ ತಯಾರಕ ಸಂಸ್ಥೆಗಳಿಗೆ ತಿಳಿಸಿದೆ. ಈ ಬಾರಿಯ ಬಜೆಟ್​ನಲ್ಲಿ ಕೆಲ ಪ್ರಮುಖ ಔಷಧಗಳಿಗೆ ಸರ್ಕಾರ ಆಮದು ಸುಂಕದಿಂದ ವಿನಾಯಿತಿ ನೀಡಿತ್ತು. ಇಂಥ ಔಷಧಗಳಿಗೆ ಬೆಲೆ ಇಳಿಕೆ ಮಾಡಬೇಕು ಎಂಬುದು ಎನ್​ಪಿಪಿಎ ಹೊರಡಿಸಿದ ನಿರ್ದೇಶನ.

ಬಜೆಟ್​ನಲ್ಲಿ ಸುಂಕ ಇಳಿಸಿದ್ದೇವೆ, ಗ್ರಾಹಕರಿಗೂ ಬೆಲೆ ಇಳಿಸಿ: ಔಷಧ ಕಂಪನಿಗಳಿಗೆ ಸರ್ಕಾರ ಸೂಚನೆ
ಔಷಧ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 19, 2025 | 3:46 PM

ನವದೆಹಲಿ, ಫೆಬ್ರುವರಿ 19: ಬಜೆಟ್​ನಲ್ಲಿ ಔಷಧ ವಸ್ತುಗಳ ಮೇಲಿನ ಆಮದು ಸುಂಕವನ್ನು ಇಳಿಸಲಾಗಿದೆ. ತಾವೂ ಕೂಡ ಔಷಧಗಳ ಎಂಆರ್​ಪಿ ದರಗಳಲ್ಲಿ ಇಳಿಕೆ ಮಾಡಬೇಕು ಎಂದು ಔಷಧ ತಯಾರಕ ಮತ್ತು ಮಾರಾಟ ಸಂಸ್ಥೆಗಳಿಗೆ ಸರ್ಕಾರ ಸೂಚಿಸಿದೆ. ಈಗಾಗಲೇ ಮಾರುಕಟ್ಟೆಗೆ ಬಂದಿರುವ ಔಷಧಗಳ ದರಗಳಲ್ಲಿ ವ್ಯತ್ಯಾಸ ಮಾಡಲಾಗದು. ಆದರೆ, ಆಮದು ಸುಂಕ ಕಡಿಮೆಗೊಂಡಿರುವ ಅಥವಾ ಸುಂಕರಹಿತವಾಗಿ ಬಂದಿರುವ ಔಷಧಗಳ ದರಗಳನ್ನು ಇಳಿಸಬೇಕೆಂದು ರಾಷ್ಟ್ರೀಯ ಔಷಧ ಬೆಲೆನಿಗದಿ ಪ್ರಾಧಿಕಾರ (ಎನ್​ಪಿಪಿಎ) ತಿಳಿಸಿದೆ. ಫೆಬ್ರುವರಿ 17ರಂದು ಈ ಫರ್ಮಾನು ಹೊರಡಿಸಲಾಗಿದ್ದು, ಫಾರ್ಮಾ ಕಂಪನಿಗಳು ಔಷಧ ಬೆಲೆಗಳ ಪರಿಷ್ಕೃತ ಪಟ್ಟಿಯನ್ನು ಬಿಡುಗಡೆ ಮಾಡುವಂತೆ ಸೂಚಿಸಲಾಗಿದೆ.

ಈ ಔಷಧ ಕಂಪನಿಗಳು ಪರಿಷ್ಕೃತ ಬೆಲೆ ಪಟ್ಟಿಯಲ್ಲಿ ಯಾವ್ಯಾವ ಔಷಧಗಳ ಬೆಲೆಗಳಲ್ಲಿ ಬದಲಾವಣೆಯಾಗಿದೆ ಎಂಬುದನ್ನು ಗುರುತಿಸಿ, ಆ ಪಟ್ಟಿಯನ್ನು ಡೀಲರ್​ಗಳು, ರಾಜ್ಯ ಔಷಧ ಪ್ರಾಧಿಕಾರಗಳು, ಸರ್ಕಾರಿ ಪ್ರಾಧಿಕಾರಗಳಿಗೆ ಕಳುಹಿಸಬೇಕು ಎಂದು ಎನ್​ಪಿಪಿಎ ತಿಳಿಸಿದೆ.

36 ಔಷಧಗಳಿಗೆ ತೆರಿಗೆ ವಿನಾಯಿತಿ…

ಕೆಲ ತೀವ್ರ ತರಹದ ಆಸ್ತಮಾ ಕಾಯಿಲೆಗಳಿಗೆ ಬಳಸುವ ಮಿಪೋಲಿಜುಮ್ಯಾಬ್, ಲ್ಯೂಕೆಮಿಯಾ ಚಿಕಿತ್ಸೆಗೆ ನೀಡುವ ಅಸಿಮಿನಿಬ್ ಇತ್ಯಾದಿ ಅತ್ಯಗತ್ಯದ ಮತ್ತು ಜೀವ ರಕ್ಷಿಸುವ 36 ಔಷಧಗಳಿಗೆ 2025ರ ಬಜೆಟ್​ನಲ್ಲಿ ತೆರಿಗೆ ವಿನಾಯಿತಿ ಘೋಷಿಸಲಾಗಿದೆ.

ಇದನ್ನೂ ಓದಿ: ಭಾರತೀಯರ ಆದಾಯದ ಹೆಚ್ಚಿನ ಭಾಗ ಸಾಲಕ್ಕೆ ಚುಕ್ತಾ; ಬೇರೆ ಯಾವ್ಯಾವುದಕ್ಕೆಷ್ಟು ಖರ್ಚು? ಇಲ್ಲಿದೆ ಪಿಡಬ್ಲ್ಯುಸಿ ವರದಿ

ಆರೋಗ್ಯ ಕ್ಷೇತ್ರದತ್ತ ಹೆಚ್ಚಿದ ಸರ್ಕಾರದ ಗಮನ

ಕಳೆದ ಹತ್ತು ವರ್ಷಗಳಿಂದ ದೇಶದ ಆರೋಗ್ಯಪಾಲನೆ ಕ್ಷೇತ್ರಕ್ಕೆ ಬಜೆಟ್​ನಲ್ಲಿ ಅನುದಾನ ಶೇ 191ರಷ್ಟು ಏರಿದೆ. ಆಯುಷ್ಮಾನ್ ಭಾರತ್ ಪಿಎಂ ಜನ್ ಆರೋಗ್ಯ ಯೋಜನೆ, ಪಿಎಂ ಆಯುಷ್ಮಾನ್ ಭಾರತ್ ಹೆಲ್ತ್ ಇನ್​ಫ್ರಾಸ್ಟ್ರಕ್ಚರ್ ಮಿಷನ್ ಇತ್ಯಾದಿ ಯೋಜನೆಗಳನ್ನು ಸರ್ಕಾರ ಜಾರಿಗೆ ತಂದಿದೆ.

ಇದೇ ಬಜೆಟ್​ನಲ್ಲಿ ದೇಶದ ಹೆಲ್ತ್​ಕೇರ್ ಸಿಸ್ಟಂನ ಅಭಿವೃದ್ಧಿಗೊಳಿಸಲು ಮತ್ತು ಬಲಪಡಿಸಲು ಸರ್ಕಾರ 2025-26ರ ವರ್ಷಕ್ಕೆ ಒಂದು ಲಕ್ಷ ಕೋಟಿ ರೂ ಸಮೀಪದಷ್ಟು ಹಣ ನಿಯೋಜಿಸಿದೆ. ಜೊತೆಗೆ ಫಾರ್ಮಾ ಕ್ಷೇತ್ರದಲ್ಲಿ ಪಿಎಲ್​ಐ ಸ್ಕೀಮ್​ಗಾಗಿ 2,445 ಕೋಟಿ ರೂ ನೀಡಲಾಗಿದೆ.

ಇದನ್ನೂ ಓದಿ: ಕಮಿಷನ್ ಮಾರ್ಗ ಬಿಟ್ಟ ಊಬರ್ ಆಟೊ; ರಿಕ್ಷಾಚಾಲಕರಿಗೆ ಅನುಕೂಲ; ನಮ್ಮ ಯಾತ್ರಿ ಸ್ಪರ್ಧೆ ಎದುರಿಸಲು ಊಬರ್ ಹೆಜ್ಜೆ

ದೇಶದ ವಿವಿಧೆಡೆ 200 ಡೇಕೇರ್ ಕ್ಯಾನ್ಸರ್ ಸೆಂಟರ್​ಗಳನ್ನು ಸ್ಥಾಪಿಸುವ ಯೋಜನೆ ಘೋಷಿಸಲಾಗಿದೆ. ಮುಂದಿನ ಮೂರು ವರ್ಷದಲ್ಲಿ ದೇಶದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲೂ ಡೇಕೇರ್ ಕ್ಯಾನ್ಸರ್ ಸೆಂಟರ್​ಗಳನ್ನು ಸ್ಥಾಪಿಸುವ ಗುರಿ ಇಡಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ