AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರಿಟನ್​ನಲ್ಲಿ ಸರ್ಕಾರ ಬದಲಾವಣೆ; ಭಾರತದ ಆರ್ಥಿಕತೆ ಮತ್ತು ಮಾರುಕಟ್ಟೆ ಮೇಲಿನ ಪರಿಣಾಮಗಳೇನು?

UK govt change effects on India: ಬ್ರಿಟನ್ ಚುನಾವಣೆಯಲ್ಲಿ ಆಡಳಿತಾರೂಢ ಕನ್ಸರ್ವೇಟಿವ್ ಪಕ್ಷ ಹೀನಾಯ ಸೋಲುಂಡಿದೆ. ಪ್ರಧಾನಿ ರಿಷಿ ಸುನಕ್ ಸ್ಥಾನವನ್ನು ಕೇರ್ ಸ್ಟಾರ್ಮರ್ ತುಂಬುತ್ತಿದ್ದಾರೆ. ಭಾರತ ಮತ್ತು ಬ್ರಿಟನ್ ನಡುವಿನ ವ್ಯಾವಹಾರಿಕ ಸಂಬಂಧದಲ್ಲಿ ಬದಲಾವಣೆ ಆಗುವ ಸಾಧ್ಯತೆ ಇಲ್ಲ. ಆದರೆ, ಕೆಲ ನೀತಿಗಳಲ್ಲಿ ಸ್ವಲ್ಪ ವ್ಯತ್ಯಯವಾಗಬಹುದು. ಅದರ ಸಂಭಾವ್ಯ ಪರಿಣಾಮಗಳ ಒಂದು ನೋಟ ಇಲ್ಲಿದೆ...

ಬ್ರಿಟನ್​ನಲ್ಲಿ ಸರ್ಕಾರ ಬದಲಾವಣೆ; ಭಾರತದ ಆರ್ಥಿಕತೆ ಮತ್ತು ಮಾರುಕಟ್ಟೆ ಮೇಲಿನ ಪರಿಣಾಮಗಳೇನು?
ಕೇರ್ ಸ್ಟಾರ್ಮರ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 05, 2024 | 5:30 PM

Share

ಯುನೈಟೆಡ್ ಕಿಂಗ್ಡಂನ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಧಾನಿ ರಿಷಿ ಸುನಕ್ ಅವರ ಕನ್ಸರ್ವೇಟಿವ್ ಪಾರ್ಟಿ ಸೋಲನುಭವಿಸಿದೆ. ಲೇಬರ್ ಪಾರ್ಟಿ 14 ವರ್ಷದ ಬಳಿಕ ಅಧಿಕಾರಕ್ಕೆ ಮರಳುತ್ತಿದೆ. ಭಾರತ ಮೂಲದ ರಿಷಿ ಸುನಕ್ ಪ್ರಧಾನಿಯಾಗಿದ್ದರಿಂದ ಭಾರತಕ್ಕೆ ತುಸು ಸಮಾಧಾನದ ಸಂಗತಿಯಾಗಿತ್ತು. ಈಗ ಕೇರ್ ಸ್ಟಾರ್ಮರ್ ಪ್ರಧಾನಿಯಾಗುತ್ತಿದ್ದಾರೆ. ಬ್ರಿಟನ್​ನಲ್ಲಿ ಯಾವುದೇ ಸರ್ಕಾರ ಬಂದರೂ ಎರಡೂ ದೇಶಗಳ ಮಧ್ಯೆ ರಾಜಕೀಯ, ವ್ಯಾವಹಾರಿಕ ಸಂಬಂಧದಲ್ಲಿ ಹೆಚ್ಚಿನ ವ್ಯತ್ಯಯ ಆಗುವ ಸಾಧ್ಯತೆ ಇಲ್ಲ. ಆದರೆ, ಕೆಲವೊಂದು ನೀತಿಗಳಲ್ಲಿ ಸಣ್ಣಪುಟ್ಟ ಬದಲಾವಣೆ ಆಗುವ ಸಾಧ್ಯತೆ ಇದೆ.

ಫ್ರೀ ಟ್ರೇಡ್ ಅಗ್ರೀಮೆಂಟ್

ಭಾರತ ಮತ್ತು ಬ್ರಿಟನ್ ಮಧ್ಯೆ ಕಳೆದ ಎರಡು ವರ್ಷದಿಂದ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಮಾತುಕತೆ ನಡೆಯುತ್ತಿದೆ. ಈವರೆಗೆ 14 ಸುತ್ತುಗಳ ಮಾತುಕತೆ ಆಗಿದೆ. ಇನ್ನೇನು ಸಹಿ ಬೀಳುವ ಸಾಧ್ಯತೆ ಇತ್ತು. ಈ ಹಂತದಲ್ಲಿ ಸರ್ಕಾರ ಬದಲಾಗುತ್ತಿದೆ.

ವಿಪಕ್ಷದಲ್ಲಿದ್ದಾಗ ಲೇಬರ್ ಪಾರ್ಟಿ ಈ ಎಫ್​ಟಿಎಯಲ್ಲಿ ಕೆಲ ಅಂಶಗಳು ಬದಲಾಗಬೇಕು ಎಂದು ಒತ್ತಾಯಿಸುತ್ತಿತ್ತು. ಈಗ ಅದು ಅಧಿಕಾರಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಫ್ರೀ ಟ್ರೇಡ್ ಅಗ್ರೀಮೆಂಟ್​ನಲ್ಲಿ ಕೆಲ ಅಂಶಗಳನ್ನು ಬದಲಾಯಿಸಲು ಮುಂದಾಗಬಹುದು. ಇದರಿಂದ ಒಪ್ಪಂದಕ್ಕೆ ಅಂಕಿತ ಬೀಳುವುದು ತಡವಾಗಬಹುದು.

ಇದನ್ನೂ ಓದಿ: ಭಾರತೀಯರು ಹೆಚ್ಚು ಹಾಟ್ ಡ್ರಿಂಕ್ಸ್ ಕುಡಿಯೋದು ಯಾಕೆ ಗೊತ್ತಾ? ಲಿಕ್ಕರ್ ಉದ್ಯಮದವರು ಹೇಳೋದಿದು

ಎಫ್​ಟಿಎಯಿಂದ ಭಾರತದ ಐಟಿ, ಎಲೆಕ್ಟ್ರಿಕಲ್ ಮತ್ತು ಉಡುಪು ಉದ್ಯಮಕ್ಕೆ ಲಾಭ ಇದೆ. ಬ್ರಿಟನ್​ನಿಂದ ಕಡಿಮೆ ಬೆಲೆಗೆ ಮದ್ಯ ಸರಬರಾಜು ಆಗಬಹುದಾದ್ದರಿಂದ ಭಾರತದ ಲಿಕ್ಕರ್ ಉದ್ಯಮ ಹೆಚ್ಚು ಪೈಪೋಟಿ ಎದುರಿಸಬೇಕಾಗಬಹುದು.

ವೀಸಾ ನಿಯಮದಲ್ಲಿ ಬದಲಾವಣೆ ಆಗುತ್ತಾ?

ಬ್ರಿಟನ್ ದೇಶದಲ್ಲಿ ಐಟಿ ಮತ್ತು ಫೈನಾನ್ಸ್ ಸೆಕ್ಟರ್​ನಲ್ಲಿ ಕೆಲಸಕ್ಕೆ ಹೋಗಬಯಸುವ ಭಾರತೀಯರಿಗೆ ಯಂಗ್ ಪ್ರೊಫೆಷನಲ್ಸ್ ಸ್ಕೀಮ್ ಇದೆ. ಈ ಸ್ಕೀಮ್​ನ ಕೆಲ ಕಠಿಣ ಷರುತ್ತುಗಳಲ್ಲಿ ಸಡಿಲಿಕೆ ಆಗಬೇಕು. ಬ್ರಿಟನ್​ಗೆ ಹೋದ ಬಳಿಕ ಅಲ್ಲಿ ಕೆಲಸ ಬದಲಿಸುವ ಪ್ರಕ್ರಿಯೆಯೂ ಕೂಡ ಸರಳಗೊಳ್ಳಬೇಕು ಎಂದು ಭಾರತ ಸರ್ಕಾರ ಕೆಲ ವರ್ಷಗಳಿಂದಲೂ ಮನವಿ ಮಾಡುತ್ತಿದೆ. ಇದಕ್ಕೆ ಬ್ರಿಟನ್ ಸರ್ಕಾರ ಬಹುತೇಕ ಒಪ್ಪಿಕೊಂಡಿತ್ತು. ಈಗ ಸರ್ಕಾರವೇ ಬದಲಾಗಿ ಹೋಗಿದೆ. ಈ ವಿಚಾರದ ಬಗ್ಗೆ ಸರ್ಕಾರದ ನಿಲುವು ಬದಲಾಗುತ್ತದಾ ನೋಡಬೇಕು.

ಇದನ್ನೂ ಓದಿ: ಕೀರ್ ಸ್ಟಾರ್ಮರ್‌ ಗೆಲುವಿಗೆ ನರೇಂದ್ರ ಮೋದಿ ಅಭಿನಂದನೆ; ರಿಷಿ ಸುನಕ್‌ಗೆ ಥ್ಯಾಂಕ್ಸ್​ ಎಂದ ಪ್ರಧಾನಿ

ಕಾರ್ಬನ್ ಟ್ಯಾಕ್ಸ್

ಬ್ರಿಟನ್ ದೇಶಕ್ಕೆ ಭಾರತ ಮಾಡುವ ರಫ್ತಿಗೆ ಹೆಚ್ಚು ಕಾರ್ಬನ್ ಟ್ಯಾಕ್ಸ್ ವಿಧಿಸಲಾಗುತ್ತಿದೆ. ಯೂರೋಪಿಯನ್ ಯೂನಿಯನ್ ರೀತಿಯಲ್ಲಿ ತೆರಿಗೆ ಹೇರಿಕೆ ಮಾಡುತ್ತಿದೆ. ಇದರ ಪ್ರಮಾಣ ಕಡಿಮೆ ಮಾಡುವಂತೆ ಭಾರತ ಸರ್ಕಾರ ಮನವಿ ಮಾಡುತ್ತಿದೆ. ಲೇಬರ್ ಪಾರ್ಟಿ ನೇತೃತ್ವದ ಹೊಸ ಸರ್ಕಾರದ ನೀತಿ ಹೇಗಿರುತ್ತೆ ಮುಂದಿನ ದಿನಗಳಲ್ಲಿ ಗೊತ್ತಾಗಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ