AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಧನ ದತ್ತಾಂಶವನ್ನು ರಾಷ್ಟ್ರೀಯ ಭದ್ರತಾ ವಿಚಾರವೆಂದು ವರ್ಗೀಕರಿಸಿದ ಸರ್ಕಾರ; ತೈಲ, ಅನಿಲ ಕ್ಷೇತ್ರದ ಸಂಸ್ಥೆಗಳಿಗೆ ಹೊಸ ಜವಾಬ್ದಾರಿ

Govt classifies energy data as national security matter: ಎನರ್ಜಿ ಡಾಟಾವನ್ನು ನ್ಯಾಷನಲ್ ಸೆಕ್ಯೂರಿಟಿ ವಿಚಾರ ಎಂದು ಸರ್ಕಾರ ವರ್ಗೀಕರಿಸಿದೆ. ಪೆಟ್ರೋಲಿಯಂ ಅಂಡ್ ನ್ಯಾಚುವರಲ್ ಗ್ಯಾಸ್ ಆರ್ಡರ್ 2026 ಮೂಲಕ ಸರ್ಕಾರ ಹೊಸ ಕಾನೂನು ತಂದಿದೆ. ತೈಲ ಕ್ಷೇತ್ರದ ಮೌಲ್ಯ ಸರಪಳಿಯಲ್ಲಿರುವ ಎಲ್ಲಾ ಸಂಸ್ಥೆಗಳೂ ಕೂಡ ತಮ್ಮ ಕಾರ್ಯಾಚರಣೆಯ ಪೂರ್ಣ ಮಾಹಿತಿಯನ್ನು ಸರ್ಕಾರಕ್ಕೆ ಒಪ್ಪಿಸುತ್ತಿರಬೇಕು ಎಂದು ಸೂಚಿಸಲಾಗಿದೆ.

ಇಂಧನ ದತ್ತಾಂಶವನ್ನು ರಾಷ್ಟ್ರೀಯ ಭದ್ರತಾ ವಿಚಾರವೆಂದು ವರ್ಗೀಕರಿಸಿದ ಸರ್ಕಾರ; ತೈಲ, ಅನಿಲ ಕ್ಷೇತ್ರದ ಸಂಸ್ಥೆಗಳಿಗೆ ಹೊಸ ಜವಾಬ್ದಾರಿ
ಕಚ್ಛಾ ತೈಲ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Mar 19, 2026 | 5:14 PM

Share

ನವದೆಹಲಿ, ಮಾರ್ಚ್ 19: ಇರಾನ್ ಯುದ್ಧದ ಪರಿಣಾಮ ದೇಶದಲ್ಲಿ ಎಲ್​ಪಿಜಿ ಬಿಕ್ಕಟ್ಟು ಉದ್ಭವಿಸಿರುವ ಬೆನ್ನಲ್ಲೇ ಸರ್ಕಾರ ಇಂಧನ ಕ್ಷೇತ್ರವನ್ನು ಬಹಳ ಗಂಭೀರವಾಗಿ ಪರಿಗಣಿಸಿದೆ. ಇಂಧನ ದತ್ತಾಂಶ ಅಥವಾ ಎನರ್ಜಿ ಡಾಟಾವನ್ನು ರಾಷ್ಟ್ರೀಯ ಭದ್ರತೆಯ ವಿಚಾರವೆಂದು ಸರ್ಕಾರ ವರ್ಗೀಕರಿಸಿದೆ. ತೈಲ ಮತ್ತು ಅನಿಲ ಕ್ಷೇತ್ರದಲ್ಲಿ ನಿರತವಾಗಿರುವ ಎಲ್ಲಾ ಸಂಸ್ಥೆಗಳೂ ಕೂಡ ತಮ್ಮ ಕಾರ್ಯಾಚರಣೆಯ ಪೂರ್ಣ ಮಾಹಿತಿಯನ್ನು ಸರ್ಕಾರಕ್ಕೆ ಸಲ್ಲಿಸುವುದನ್ನು ಕಡ್ಡಾಯಪಡಿಸಲಾಗಿದೆ.

ತೈಲ ಸಚಿವಾಲಯವು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಮಾಹಿತಿ ಸಲ್ಲಿಕೆ ಆದೇಶ 2026ರ -Petroleum and Natural Gas (furnishing of information) Order – ನಿಯಮಗಳನ್ನು ಜಾರಿಗೊಳಿಸಲಾಗಿದೆ. ಇದರ ಪ್ರಕಾರ, ತೈಲ ಕ್ಷೇತ್ರದ ಮೌಲ್ಯ ಸರಪಳಿಯಲ್ಲಿರುವ ರಿಫೈನಿಂಗ್ ಕಂಪನಿಗಳು, ಎಲ್​ಎನ್​ಜಿ ಆಮದುಗಾರರು, ಪೈಪ್​ಲೈನ್ ಆಪರೇಟಿಂಗ್ ಸಂಸ್ಥೆಗಳು, ನಗರ ಗ್ಯಾಸ್ ವಿತರಕರು, ಪೆಟ್ರೋಕೆಮಿಕಲ್ ಸಂಸ್ಥೆಗಳೆಲ್ಲವೂ ತಮ್ಮ ಕಾರ್ಯಾಚರಣೆಯ ಪೂರ್ಣ ಮಾಹಿತಿಯನ್ನು ತೈಲ ಸಚಿವಾಲಯದ ಪೆಟ್ರೋಲಿಯಂ ಪ್ಲಾನಿಂಗ್ ಮತ್ತು ಅನಾಲಿಸಿಸ್ ವಿಭಾಗಕ್ಕೆ (ಪಿಪಿಎಸಿ) ಒದಗಿಸುತ್ತಿರಬೇಕು ಕೆಲ ಸಂದರ್ಭದಲ್ಲಿ ನಿತ್ಯವೂ ಮಾಹಿತಿ ಅಪ್​ಡೇಟ್ ಮಾಡುತ್ತಿರಬೇಕು ಎಂದು ಈ ಆರ್ಡರ್​ನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಹಾರ್ಮುಜ್ ಜಲಸಂಧಿಯಲ್ಲಿ ಸಿಲುಕಿರುವ ಭಾರತದ ಎಲ್​ಪಿಜಿ ಟ್ಯಾಂಕರ್​ಗಳಲ್ಲಿ ಗ್ಯಾಸ್ ಎಷ್ಟು ದಿನಕ್ಕಾಗುವಷ್ಟಿದೆ ಗೊತ್ತಾ?

ಯಾವ್ಯಾವ ಮಾಹಿತಿ ಸಲ್ಲಿಸಬೇಕು?

ಉತ್ಪಾದನೆ, ಆಮದು, ಸರಕು ಪ್ರಮಾಣ, ಅನುಭೋಗದ ಟ್ರೆಂಡ್ ಇತ್ಯಾದಿ ಡಾಟಾವನ್ನು ಈ ಕಂಪನಿಗಳು ಪಿಪಿಎಸಿಗೆ ನೀಡಬೇಕು. ಈ ಹಿಂದೆ ಈ ಮಾಹಿತಿಯನ್ನು ಗೌಪ್ಯವಾಗಿಡುವ ಅವಕಾಶ ಕೊಡಲಾಗಿತ್ತು. ಮಾರ್ಚ್ 18, ಬುಧವಾರ ಗೆಜೆಟ್ ನೋಟಿಫಿಕೇಶನ್ ಮೂಲಕ ಇಂಧನ ಸಚಿವಾಲಯವು ಹೊಸ ಆರ್ಡರ್ ತಂದಿದೆ.

ಇರಾನ್ ಯುದ್ಧದ ಪರಿಣಾಮ ಜಾಗತಿಕವಾಗಿ ತೈಲ ಮತ್ತು ಅನಿಲ ಸರಬರಾಜು ಭಾರೀ ವ್ಯತ್ಯಯಗೊಂಡಿದೆ. ಭಾರತವು ರಷ್ಯಾದಿಂದ ತೈಲ ಪೂರೈಕೆ ಪಡೆಯುತ್ತಿದೆಯಾದರೂ, ಅನಿಲ ಪೂರೈಕೆಗೆ ಧಕ್ಕೆಯಾಗಿದೆ. ಭಾರತ ಆಮದು ಮಾಡಿಕೊಳ್ಳುವ ಶೇ. 80ರಷ್ಟು ಎಲ್​ಪಿಜಿಯು ಗಲ್ಫ್ ರಾಷ್ಟ್ರಗಳಿಂದ ಬರುತ್ತದೆ. ಹೀಗಾಗಿ, ಎಲ್​ಪಿಜಿ ಬಿಕ್ಕಟ್ಟು ಉದ್ಭವವಾಗಿದೆ. ಇದೇ ವೇಳೆ ಸರ್ಕಾರವು ಕಚ್ಚಾ ತೈಲ ಪೂರೈಕೆ ಸಾವಶ್ಯ ಇರುವುದಾಗಿ ಮತ್ತೊಮ್ಮೆ ಸ್ಪಷ್ಟನೆ ಕೊಟ್ಟಿದೆ.

ಇದನ್ನೂ ಓದಿ: ಅಗತ್ಯ ಇದ್ದರೆ ಮಾತ್ರ ಎಲ್​ಪಿಜಿ ಸಿಲಿಂಡರ್ ಬುಕ್ ಮಾಡಿ: ಇಂಡಿಯನ್ ಆಯಿಲ್ ಮನವಿ

ಪೆಟ್ರೋಲ್, ಪಿಎನ್​ಜಿ, ಸಿಎನ್​ಜಿ ಪೂರೈಕೆ ಸಮರ್ಪಕವೆಂದ ಸರ್ಕಾರ

ಕಚ್ಛಾ ತೈಲ ಬೆಲೆ ಸಮರ್ಪಕವಾಗಿದೆ. ರಿಫೈನರಿಗಳು ಪೂರ್ಣ ಸಾಮರ್ಥ್ಯದಲ್ಲಿ ಕಾರ್ಯಾಚರಿಸುತ್ತಿವೆ. ಪೆಟ್ರೋಲ್ ಪಂಪ್​ಗಳು ಸಹಜವಾಗಿ ಕೆಲಸ ಮಾಡುತ್ತಿವೆ. ಎಲ್ಲಿಯೂ ಅಲಭ್ಯತೆ ಬಂದಿಲ್ಲ. ಪಿಎನ್​ಜಿ ಮತ್ತು ಸಿಎನ್​ಜಿ ಪೂರೈಕೆ ಕೂಡ ನೂರಕ್ಕೆ ನೂರು ಇದೆ. ಕಮರ್ಷಿಯಲ್ ಎಲ್​ಪಿಜಿ ಬಳಕೆದಾರರನ್ನು ಸಾಧ್ಯವಿರುವೆಡೆ ಪಿಎನ್​ಜಿ ಕನೆಕ್ಷನ್​ಗೆ ವರ್ಗವಾಗುವಂತೆ ಉತ್ತೇಜಿಸಲಾಗುತ್ತಿದೆ ಎಂದು ಪೆಟ್ರೋಲಿಯಂ ಮತ್ತು ನ್ಯಾಚುರಲ್ ಗ್ಯಾಸ್ ಸಚಿವಾಲಯದ ಜಂಟಿ ಕಾರ್ಯದರ್ಶಿ ಸುಜಾತಾ ಶರ್ಮಾ ತಿಳಿಸಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​