AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ONGC Dividend: ಕೇಂದ್ರ ಸರ್ಕಾರಕ್ಕೆ ಒಎನ್​ಜಿಸಿಯಿಂದ ಈ ವರ್ಷ ದೊರೆತ ಲಾಭ ಬರೋಬ್ಬರಿ 5,001 ಕೋಟಿ ರೂ.

ಈ ಹಣಕಾಸು ವರ್ಷದಲ್ಲಿ ಒಟ್ಟು 23,796.55 ಕೋಟಿ ರೂ. ಡಿವಿಡೆಂಟ್ ಪಡೆಯಲಾಗಿದೆ ಎಂದು ಹೂಡಿಕೆ ಮತ್ತು ಸಾರ್ವಜನಿಕ ಸ್ವತ್ತು ನಿರ್ವಹಣಾ ಇಲಾಖೆ ಮಾಹಿತಿ ನೀಡಿದೆ.

ONGC Dividend: ಕೇಂದ್ರ ಸರ್ಕಾರಕ್ಕೆ ಒಎನ್​ಜಿಸಿಯಿಂದ ಈ ವರ್ಷ ದೊರೆತ ಲಾಭ ಬರೋಬ್ಬರಿ 5,001 ಕೋಟಿ ರೂ.
ಸಾಂದರ್ಭಿಕ ಚಿತ್ರImage Credit source: PTI
TV9 Web
| Edited By: |

Updated on: Nov 28, 2022 | 5:20 PM

Share

ನವದೆಹಲಿ: ಆಯಿಲ್ ಆ್ಯಂಡ್ ನ್ಯಾಚುರಲ್ ಗ್ಯಾಸ್ ಕಾರ್ಪೊರೇಷನ್ (ONGC) 5,001 ಕೋಟಿ ರೂ. ಡಿವಿಡೆಂಡ್ (Dividend) ಅಥವಾ ಲಾಭಾಂಶ ನೀಡಿದೆ. ಇದಲ್ಲದೆ, ಸರ್ಕಾರಿ ಸ್ವಾಮ್ಯದ ಕಂಪನಿಗಳು ಒಟ್ಟು 23,797 ಕೋಟಿ ರೂ. ಡಿವಿಡೆಂಡ್ ನೀಡಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಈ ವಿಚಾರವಾಗಿ ಹೂಡಿಕೆ ಮತ್ತು ಸಾರ್ವಜನಿಕ ಸ್ವತ್ತು ನಿರ್ವಹಣಾ (DIPAM) ಇಲಾಖೆ ಕಾರ್ಯದರ್ಶಿ ತುಹಿನ್ ಕಾಂತ ಪಾಂಡೆ ಮಾಹಿತಿ ನೀಡಿದ್ದಾರೆ. ಹೆಚ್ಚು ಲಾಭಾಂಶವನ್ನು ಸರ್ಕಾರಕ್ಕೆ ನೀಡುವ ಸಲುವಾಗಿ ನೀತಿ ರೂಪಿಸಿಕೊಳ್ಳುವಂತೆ ಸರ್ಕಾರಿ ಸ್ವಾಮ್ಯದ ಕಂಪನಿಗಳಿಗೆ ಹೂಡಿಕೆ ಮತ್ತು ಸಾರ್ವಜನಿಕ ಸ್ವತ್ತು ನಿರ್ವಹಣಾ ಇಲಾಖೆ 2020ರಲ್ಲಿ ಸೂಚಿಸಿತ್ತು. ಲಾಭ, ನಗದು ಮೀಸಲು, ನಿವ್ವಳ ಮೌಲ್ಯ ಹೆಚ್ಚಿಸಲು ಕ್ರಮಕೈಗೊಳ್ಳುವಂತೆ ಇಲಾಖೆ ಸೂಚಿಸಿತ್ತು.

ನಿಯಮಗಳ ಪ್ರಕಾರ, ತೆರಿಗೆ ಹೊರತುಪಡಿಸಿ ಕನಿಷ್ಠ ಶೇಕಡಾ 30ರಷ್ಟು ಅಥವಾ ನಿವ್ವಳ ಮೌಲ್ಯದ ಶೇಕಡಾ 5ರಷ್ಟು (ಈ ಎರಡರಲ್ಲಿ ಯಾವುದು ಹೆಚ್ಚೋ ಅದನ್ನು) ವಾರ್ಷಿಕ ಡಿವಿಡೆಂಡ್ ಅನ್ನು ಸರ್ಕಾರಿ ಸ್ವಾಮ್ಯದ ಕಂಪನಿಗಳು ಸರ್ಕಾರಕ್ಕೆ ನೀಡಬೇಕು. ಈ ಹಣಕಾಸು ವರ್ಷದಲ್ಲಿ ಒಟ್ಟು 23,796.55 ಕೋಟಿ ರೂ. ಡಿವಿಡೆಂಟ್ ಪಡೆಯಲಾಗಿದೆ ಎಂದು ಹೂಡಿಕೆ ಮತ್ತು ಸಾರ್ವಜನಿಕ ಸ್ವತ್ತು ನಿರ್ವಹಣಾ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ: ONGC Recruitment 2022: ಒಎನ್​ಜಿಸಿಯ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಯಿಲ್ ಆ್ಯಂಡ್ ನ್ಯಾಚುರಲ್ ಗ್ಯಾಸ್ ಕಾರ್ಪೊರೇಷನ್ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ ಕಂಪನಿಯಾಗಿದೆ.

ಮೂಲಗಳ ಪ್ರಕಾರ, ದೇಶದ ಒಟ್ಟು ಕಚ್ಚಾ ತೈಲ ಉತ್ಪಾದನೆಯ ಶೇಕಡಾ 77ರಷ್ಟು ಹಾಗೂ ನೈಸರ್ಗಿಕ ಅನಿಲ ಉತ್ಪಾದನೆಯ ಶೇಕಡಾ 81ರಷ್ಟು ಒಎನ್​ಜಿಸಿ ಕೊಡುಗಡೆಯಾಗಿದೆ. ದೇಶದಲ್ಲಿ ಅತಿ ಹೆಚ್ಚು ಲಾಭವನ್ನು ಗಳಿಸುತ್ತಿರುವ ಸರ್ಕಾರಿ ಸ್ವಾಮ್ಯದ ಕಂಪನಿಯಾಗಿಯೂ ಒಎನ್​ಜಿಸಿ ಗುರುತಿಸಲ್ಪಟ್ಟಿದೆ. 1956ರ ಆಗಸ್ಟ್ 14ರಂದು ಆಯೋಗವೊಂದರ ಮಾದರಿಯಲ್ಲಿ ರಚನೆಯಾದ ಈ ಸಂಸ್ಥೆ ನಂತರ ದೊಡ್ಡ ಮಟ್ಟದ ಕಂಪನಿಯಾಗಿ ಬೆಳೆಯಿತು. 1990ರಲ್ಲಿ ಉದಾರೀಕರಣ ನೀತಿಯ ನಂತರ ಹೂಡಿಕೆ ಹಿಂಪಡೆಯುವ ಪ್ರಕ್ರಿಯೆ ಮೂಲಕ ಸರ್ಕಾರವು ಒಎನ್​ಜಿಸಿಯಿಂದ ಭಾಗಶಃ ಬಂಡವಾಳ ಹಿಂಪಡೆಯಿತು. ಪರಿಣಾಮವಾಗಿ ಒಎನ್​ಜಿಸಿ ಕಂಪನಿಯ ರೂಪ ತಾಳಿತು. ಸದ್ಯ ಕೇಂದ್ರ ಸರ್ಕಾರವು ಶೇಕಡಾ 74ಕ್ಕೂ ಹೆಚ್ಚು ಪ್ರಮಾಣದ ಷೇರುಗಳನ್ನು ಹೊಂದಿದೆ. ಹೀಗಾಗಿ ಕಂಪನಿಯ ಲಾಭಾಂಶದಲ್ಲಿ ಹೆಚ್ಚಿನ ಪ್ರಮಾಣ ಸರ್ಕಾರಕ್ಕೆ ಸಂದಾಯವಾಗುತ್ತಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ